ಪಟ್ರಮೆ: ಸೂರ್ಯತ್ತಾವು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ಹಾಗೂ ಶ್ರೀ ಕ್ಷೇತ್ರ ಸೌತಡ್ಕ ಸೇವಾ ಸಮಿತಿಯ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು.
ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ಇದರ ಅಧ್ಯಕ್ಷ ರಕ್ಷಿತ್ ಶಿವರಾಂ ಭಾಗವಹಿಸಿ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸಿ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಮಾಜಿ ಪಂಚಾಯತ್ ಸದಸ್ಯ ಶಾಮರಾಜ್ ಭಟ್, ಎಸ್ ಡಿ ಎಂ ಸಿ ಅಧ್ಯಕ್ಷ ಪ್ರವೀಣ್, ಉಪಾಧ್ಯಕ್ಷೆ ಜ್ಯೋತಿ ಚಿದಾನಂದ, ತಾಯಂದಿರ ಸಮಿತಿಯ ಅಧ್ಯಕ್ಷೆ ರೂಪಲತಾ ರವಿ, ಉಪಾಧ್ಯಕ್ಷೆ ಸುಮಲತಾ ದಿನೇಶ್ ಹಾಗೂ ಶಾಲಾ ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕ ಪ್ರಸಾದ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಸಹಶಿಕ್ಷಕಿಯರಾದ ಮೋಹಿನಿ ಹಾಗೂ ಶ್ವೇತಾ ಸಹಕರಿಸಿದರು.













