32.1 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಎಜುಕೇಷನಲ್ ಟ್ರಸ್ಟ್ (ರಿ.) ನಿಂದ ನಡೆಸಲ್ಪಡುವ ಎಲ್ ಸಿ‍ ಆರ್ ಇಂಡಿಯನ್‍ ವಿದ್ಯಾಸಂಸ್ಥೆಯ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಸಂಘದ ಚುನಾವಣೆಯನ್ನು ಜೂ.15ರಂದು ನಡೆಸಲಾಯಿತು.

ವಿದ್ಯಾರ್ಥಿಗಳು ತಮ್ಮ ಜವಾಬ್ದಾರಿಗಳನ್ನು ನಿಭಾಯಿಸುವ, ಹಕ್ಕುಗಳನ್ನು ಚಲಾಯಿಸುವ ಹಾಗೂ ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡುವ ಸಲುವಾಗಿ ಅವಕಾಶವನ್ನು ಒದಗಿಸಲಾಯಿತು.

ಪ್ರಾಂಶುಪಾಲ ಜೋಸ್ಟನ್ ಲೋಬೊ, ಸಂಯೋಜಕ ಯಶವಂತ್ ಜಿ ನಾಯಕ್ ಮತ್ತು ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀಮತಿ ವಿಂದ್ಯಾಶ್ರೀ, ಪದವಿ ಪೂರ್ವ ವಿಭಾಗದ ಮುಖ್ಯಸ್ಥೆ ಸೌಮ್ಯ ಎನ್ ಇವರ ಮೇಲ್ವಿಚಾರಣೆಯಲ್ಲಿ ಹಾಗೂ ಉಪನ್ಯಾಸಕರ ಸಹಕಾರದಿಂದ ಚುನಾವಣಾ ಪ್ರಕ್ರಿಯೆಯನ್ನು ನ್ಯಾಯಯುತ ಮತ್ತು ಪಾರದರ್ಶಕವಾಗಿ ನಡೆಸಲಾಯಿತು. ಚುನಾವಣೆಯನ್ನು ಸುಗಮವಾಗಿ ನಡೆಸಲು ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿ ವಿದ್ಯಾರ್ಥಿಗಳು ಚುನಾವಣೆಯಲ್ಲಿ ಉತ್ಸಾಹದಿಂದ ಭಾಗವಹಿಸಿದರು.

ಮತದಾನ ಪ್ರಕ್ರಿಯೆ ಮುಗಿದ ಸ್ವಲ್ಪ ಸಮಯದ ನಂತರ ಚುನಾವಣಾ ಫಲಿತಾಂಶಗಳನ್ನು ಘೋಷಿಸಲಾಯಿತು. ವಿದ್ಯಾರ್ಥಿ ಸಂಘದ ನಾಯಕನಾಗಿ ಬಿ.ಮಹಮ್ಮದ್ ಅತ್ತಾವುಲ್ಲ ಮತ್ತು ವಿದ್ಯಾರ್ಥಿ ಸಂಘದ ಉಪ ನಾಯಕಿಯಾಗಿ ಚೈತ್ರಾ ಯು.ಎಸ್ ಇವರು ಆಯ್ಕೆಯಾಗಿರುತ್ತಾರೆ.

Related posts

ಲಾಯಿಲ: ಶ್ರೀ ಕೊಡಮಣಿತ್ತಾಯ ದೈವದ ದೊಂಪದ ಬಲಿ ಉತ್ಸವ

Suddi Udaya

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ಪದ್ಮಾವತಿ ದೇವಿ ಪ್ರತಿಷ್ಠೆ

Suddi Udaya

ಅಳದಂಗಡಿ: ಮಾರ್ನಿಂಗ್ ಕ್ರಿಕೆಟರ್ಸ್ ನಿಂದ ರಸ್ತೆ ರಿಪೇರಿ, ಚರಂಡಿ ದುರಸ್ಥಿ

Suddi Udaya

ಕರಾಯ: ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣ: 13ನೇ ಗುರುತಿನ ಸ್ಥಳದಲ್ಲಿ ಜಿಪಿಆರ್ ಯಂತ್ರ ಬಳಸಿ ಪರಿಶೀಲನೆಗೆ ಮುಂದಾದ ಎಸ್.ಐ.ಟಿ

Suddi Udaya

ಲಾಯಿಲ :ಕರ್ನೋಡಿ ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ 1 ನೇ ತರಗತಿ ಆಂಗ್ಲ ಮಾಧ್ಯಮ ಉದ್ಘಾಟನೆ

Suddi Udaya
error: Content is protected !!