32.1 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಎಸ್‌ವೈಎಸ್ ಬೆಳ್ತಂಗಡಿ ಝೋನ್ ವತಿಯಿಂದ ಶರೀಫ್ ಪರಪ್ಪು ಕುಟುಂಬಕ್ಕೆ ಸಾಂತ್ವನ ಫಂಡ್ ಹಸ್ತಾಂತರ

ಬೆಳ್ತಂಗಡಿ: ಇತ್ತೀಚೆಗೆ ನಿಧನರಾದ ಎಸ್‌ವೈಎಸ್ ಕಾರ್ಯಕರ್ತ ಶರೀಫ್ ಪರಪ್ಪು ರವರ ಕುಟುಂಬಕ್ಕೆ ಸುನ್ನೀ ಯುವಜನ ಸಂಘ (ಎಸ್‌ವೈಎಸ್) ಬೆಳ್ತಂಗಡಿ ಝೋನ್ ವತಿಯಿಂದ ಸಾಂತ್ವನ ಫಂಡ್ 1,17,313 ರೂ.ಗಳನ್ನು ಜೂ 14 ರಂದು ಅವರ ಕುಟುಂಬಕ್ಕೆ ಹಸ್ತಾoತರ ಮಾಡಲಾಯಿತು.

ಈ ಸಂದರ್ಭದಲ್ಲಿ ಎಸ್‌ವೈಎಸ್ ಝೋನ್ ಅಧ್ಯಕ್ಷ ಅಬ್ದುಲ್ ರಹ್ಮಾನ್ ಸಖಾಫಿ, ಪ್ರಧಾನ ಕಾರ್ಯದರ್ಶಿ ಸಲೀಂ ಕನ್ಯಾಡಿ, ಕೋಶಾಧಿಕಾರಿ ಅಬ್ದುಲ್ ರಝಾಕ್ ಸಖಾಫಿ, ಉಪಾಧ್ಯಕ್ಷ ಅಯ್ಯೂಬ್ ಮಹ್ಳರಿ, ಕೆ.ವೈ ಇಸ್ಮಾಯಿಲ್, ಕಾರ್ಯದರ್ಶಿ ಹಾರಿಸ್ ಕುಕ್ಕುಡಿ, ಸಿದ್ದೀಕ್ ಪರಪ್ಪು ಹಾಗೂ ಸರ್ಕಲ್, ಯುನಿಟ್ ಪ್ರತಿನಿಧಿಗಳು, ಪರಪ್ಪು ಜಮಾಅತ್ ನಾಯಕರು ಉಪಸ್ಥಿತರಿದ್ದರು.

ಸಣ್ಣ ವ್ಯಾಪಾರಿಯಾಗಿದ್ದ ಶರೀಫ್ ಪರಪ್ಪು ಅವರು ಕೆಲ ದಿನಗಳ ಹಿಂದೆ ಅಲ್ಪಕಾಲದ ಆನಾರೋಗ್ಯದಿಂದ ಕೊನೆಯುಸಿರೆಳೆದಿದ್ದರು. ಮನೆಯ ಯಜಮಾನನಾಗಿದ್ದ ಅವರ ಅಕಾಲಿಕ ಅಗಲುವಿಕೆಯಿಂದ ಅವರ ಪತ್ನಿ, ಮಕ್ಕಳು‌ ಹಾಗೂ ಅವರ ಕುಟುಂಬ ಕಂಗಾಲಾಗಿದ್ದರು. ಸಂಘಟನೆಯಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದ ಅವರ ದಕ್ಷತೆಯನ್ನು ಪರಿಗಣಿಸಿ ಅವರ ಕುಟುಂಬದ ಸಂಕಷ್ಟ ಕಾಲದಲ್ಲಿ ಅವರಿಗೆ ಸಾಂತ್ವನ ನೀಡುವ ಮೂಲಕ ಎಸ್‌ವೈಎಸ್ ತನ್ನ ಜವಾಬ್ದಾರಿ ಮೆರೆದಿದೆ.

Related posts

ಉಜಿರೆ ಎಸ್ ಡಿ.ಎಂ. ಸೆಕೆಂಡರಿ ಶಾಲೆಯ ಮುಖ್ಯ ಶಿಕ್ಷಕರಾಗಿ ಸುರೇಶ ಕೆ ರವರು ಅಧಿಕಾರ ಸ್ವೀಕಾರ    

Suddi Udaya

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ: ಜ.22ರಂದು ದ.ಕ ಜಿಲ್ಲೆಯಾದ್ಯಂತ ಬಾರ್‌, ಮದ್ಯದ ಅಂಗಡಿ ಬಂದ್ : ಜಿಲ್ಲಾಧಿಕಾರಿ ಆದೇಶ

Suddi Udaya

ಕಾಂಗ್ರೆಸ್‌ಗೆ ಅಲ್ಪಸಂಖ್ಯಾತರ ತುಷ್ಟಿಕರಣವೇ ಮುಖ್ಯ; ಮಂಡ್ಯದ ಕೆರೆಗೋಡುವಿನಲ್ಲಿ ಹನುಮ ಧ್ವಜ ತೆರವುಗೊಳಿಸಿರುವುದು ಖಂಡನೀಯ: ಪ್ರತಾಪ್ ಸಿಂಹ ನಾಯಕ್

Suddi Udaya

ವೇಣೂರು: ದಿ ಹೇರ್‌ಲೇರ್ ಮೆನ್ಸ್ ಸೆಲೂನ್ ಉದ್ಘಾಟನೆ: ನೂತನ ಸೆಲೂನನ್ನು ಉದ್ಘಾಟಿಸಿ ಶುಭ ಹಾರೈಸಿದ ಖ್ಯಾತ ವೈದ್ಯ ಡಾ| ಶಾಂತಿಪ್ರಸಾದ್

Suddi Udaya

ಸುಲ್ಕೇರಿಮೊಗ್ರು ಶ್ರೀ ದೈವ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿ, ವಾರ್ಷಿಕ ಜಾತ್ರೋತ್ಸವ

Suddi Udaya

ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್‌ಗೂ, ಸೌತಡ್ಕ ದೇವಸ್ಥಾನಕ್ಕೂ ಯಾವುದೇ ಸಂಬಂಧ ಇಲ್ಲ

Suddi Udaya
error: Content is protected !!