August 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಂತ್ರಿಮಂಡಲದ ಉದ್ಘಾಟನೆ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲದ ಉದ್ಘಾಟನಾ ಸಮಾರಂಭ ನೆರವೇರಿತು.

ಮುಖ್ಯ ಅತಿಥಿ ಕಾಂಚನದ ಶ್ರೀ ಸುಬ್ರಹ್ಮಣ್ಯ ಸ್ಮಾರಕ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ರಮೇಶ್ ಮಯ್ಯ ಶಾಲಾ ಮಂತ್ರಿಮಂಡಲವನ್ನು ದೀಪ ಪ್ರಜ್ವಲಿಸಿ ಉದ್ಘಾಟನೆಗೊಳಿಸಿ, ಮಾತನಾಡಿ ನಾಯಕತ್ವ ಅಂದರೆ ಏನು,ಮಾದರಿ ನಾಯಕನಾಗುವ ಪರಿ ಹೇಗೆ,ದೇಶ ಸೇವೆ ಎಂದರೆ ಏನು, ಮತದಾನದಲ್ಲಿ ಆಯ್ಕೆ ಹೇಗಿರಬೇಕು, ಶಾಲೆಯಲ್ಲಿ ಚುನಾವಣೆಯ ಅಗತ್ಯ,ಶಾಲೆಯಲ್ಲಿ ಮಂತ್ರಿಮಂಡಲದ ಅಗತ್ಯ ಏನು ಮಂತ್ರಿಗಳ ಕಾರ್ಯನಿರ್ವಹಣೆ ಹೇಗೆ,ವಿರೋಧ ಪಕ್ಷದವರ ಕೆಲಸ ಏನು ಎಂಬಿತ್ಯಾದಿ ವಿಚಾರವನ್ನು ವಿದ್ಯಾರ್ಥಿಗಳಿಗೆ ಮಾರ್ಮಿಕವಾಗಿ ವಿವರಿಸಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ ಎಂ ವಿ ಆಯ್ಕೆಯಾದ ಮಂತ್ರಿಗಳಿಗೆ ಪ್ರಮಾಣ ವಚನ ಬೋಧಿಸಿ, ಮಾತನಾಡಿ ಮಂತ್ರಿಗಳ ಜವಾಬ್ದಾರಿ, ಶಾಲೆಯಲ್ಲಿ ಅವರ ಕಾರ್ಯಗಳ ಕುರಿತು ಮಾಹಿತಿ ನೀಡಿದರು.

ಶಾಲಾ ನಾಯಕ ಶ್ರೀವರ್ಚಸ್ ತನ್ನನ್ನು ಆಯ್ಕೆ ಮಾಡಿದ ಎಲ್ಲರಿಗೂ ಧನ್ಯವಾದ ನೀಡಿ ತನ್ನ ಜವಾಬ್ಧಾರಿಯನ್ನು ಉತ್ತಮವಾಗಿ ನಿರ್ವಹಿಸುವ ಕುರಿತು ಭರವಸೆಯನ್ನು ನೀಡಿದರು. ವಿದ್ಯಾರ್ಥಿನಿಯರಾದ ಭಾರ್ಗವಿ ನಿರೂಪಿಸಿ, ಶ್ರೇಯಾ ರೈ ಸ್ವಾಗತಿಸಿ, ಅನುಜ್ಞ ಅತಿಥಿಗಳ ಕಿರು ಪರಿಚಯ ಮಾಡಿ, ಅರ್ಘ್ಯ ಜೈನ್ ಧನ್ಯವಾದವಿತ್ತರು.

Related posts

ದ್ವಿತೀಯ ಪಿಯು ಫಲಿತಾಂಶ: ಮುಂಡಾಜೆ ಪದವಿ ಪೂರ್ವ ಕಾಲೇಜಿಗೆ ಶೇ.94.28 ಫಲಿತಾಂಶ

Suddi Udaya

ತಾಲೂಕಿನ 5 ಕಡೆಗಳಲ್ಲಿ ಆಕಸ್ಮಿಕ ಬೆಂಕಿ ಅವಘಡ

Suddi Udaya

ಸುಭಾಷ್ ಚಂದ್ರ ಬೋಸ್ ಐಕಾನ್ ಅವಾರ್ಡ್ 2025ರ ಪ್ರಶಸ್ತಿಗೆ ಭಾಜನರಾದ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ

Suddi Udaya

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಜಿನ ಮoದಿರಕ್ಕೆ ಲಾವಣ್ಯ ಬಲ್ಲಾಳ್ ಭೇಟಿ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಎಸ್‌ಡಿಪಿಐ ವಿರುದ್ಧ ಅವಹೇಳನಕಾರಿ ಪೋಸ್ಟ್: ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ಧರ್ಮಸ್ಥಳ ಠಾಣೆಗೆ ದೂರು

Suddi Udaya

ಅಡಿಕೆ ಆಮದು ನಿಷೇಧ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯ: ಮಾ.7 ರಂದು ದ.ಕ ಜಿಲ್ಲಾಧಿಕಾರಿ ಕಛೇರಿ ಎದುರು ಬೃಹತ್ ಪ್ರತಿಭಟನೆ

Suddi Udaya
error: Content is protected !!