September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪೆರ್ಲ-ಬೈಪಾಡಿ ಸರ್ಕಾರಿ ಪ್ರೌಢಶಾಲೆ ಸಹಶಿಕ್ಷಕ ವಿಜಯ ಕುಮಾರ್ ಎಂ. ಕೊಯ್ಯೂರು ರವರಿಗೆ ಬೀಳ್ಕೊಡುಗೆ

ಕೊಯ್ಯೂರು: ಸರ್ಕಾರಿ ಪ್ರೌಢ ಶಾಲೆ ಪೆರ್ಲ ಬೈಪಾಡಿಯಲ್ಲಿ 7 ವರ್ಷಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸುವ ಮೂಲಕ, ಶಿಕ್ಷಣ ಕ್ಷೇತ್ರದಲ್ಲಿ 36 ವರ್ಷಗಳ ಸುಧೀರ್ಘ ಸೇವೆ ಸಲ್ಲಿಸಿದ ಸಮಾಜ ವಿಜ್ಞಾನ ಶಿಕ್ಷಕ ವಿಜಯ ಕುಮಾರ್ ಎಂ. ಕೊಯ್ಯೂರು ರವರಿಗೆ ಬೀಳ್ಕೊಡುಗೆ ಸಮಾರಂಭ ಇತ್ತೀಚೆಗೆ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ. ಕಾರ್ಯಾಧ್ಯಕ್ಷ ಮಹಾಬಲ ಗೌಡ ವಹಿಸಿ ಶುಭ ಹಾರೈಸಿದರು. ಮುಖ್ಯ ಗುರು ಬಾಲಕೃಷ್ಣ ಕೆ. ವಿಜಯ ಕುಮಾರ್ ರವರ ಕರ್ತವ್ಯ ಪ್ರಜ್ಞೆ, ಬದ್ಧತೆ, ಇವುಗಳ ಬಗ್ಗೆ ಅಭಿನಂದನಾ ನುಡಿಗಳನ್ನಾಡಿದರು.

ಕೋಲಾರದ ಚಿನ್ನದ ಗಣಿಯ ನಿವೃತ್ತ CEO ತಿಮ್ಮಪ್ಪ ಗೌಡ ಸೋಣಕುಮೇರು, ಶುಭ ಕೋರಿದರು. ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇದರ ವಿಶ್ರಾಂತ ಪ್ರಾಂಶುಪಾಲ ಯದುಪತಿ ಗೌಡ, ಬಂದಾರು ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷೆ ಪರಮೇಶ್ವರಿ , ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಮೋಹನ ಗೌಡ, ಸರ್ಕಾರಿ ಪ್ರೌಢಶಾಲೆ ಕೊಯ್ಯೂರಿನ ಮುಖ್ಯೋಪಾಧ್ಯಾಯ ಸುಧಾಕರ ಶೆಟ್ಟಿ, ಪದ್ಮುಂಜ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ಸುಮತಿ, ಮೈರೋಳ್ತಡ್ಕ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪ ಗೌಡ, ಬಂದಾರು ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ವಿಶ್ವನಾಥ ಎಂ.ಯು., ಪೆರ್ಲ ಬೈಪಾಡಿ ಶಾಲೆಯ ಮುಖ್ಯ ಶಿಕ್ಷಕಿ ಜಯಶ್ರೀ, ಕುಂಟಾಲಪಲ್ಕೆ ಶಾಲಾ ಮುಖ್ಯ ಶಿಕ್ಷಕಿ ಗಾಯತ್ರಿ, ಮೊಗ್ರು ಶಾಲಾ ಮುಖ್ಯ ಶಿಕ್ಷಕ ಮಾಧವ ಗೌಡ, ಬಜಿಲ ಕಿ.ಪ್ರಾ.ಶಾಲಾ ಮುಖ್ಯ ಶಿಕ್ಷಕ ಸೀತಾರಾಮ, ಉಪಸ್ಥಿತರಿದ್ದು ಶುಭ ಹಾರೈಸಿದರು.

ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಹರೀಶ್ ಗೌಡ ಪರಪಾಜೆ, ಅನಿತಾ, ತಾಲೂಕು ಪಂಚಾಯತ್ ಮಾಜಿ ಸದಸ್ಯ ಪ್ರವೀಣ್ ಗೌಡ, ಎ.ಪಿ.ಎಂ.ಸಿ. ಮಾಜಿ ನಿರ್ದೇಶಕ ಹೊನ್ನಪ್ಪ ಗೌಡ, ವಿವಿಧ ಶಾಲೆಗಳಿಂದ ಆಗಮಿಸಿದ ಸಹಶಿಕ್ಷಕರು, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಹಳೆ ವಿದ್ಯಾರ್ಥಿಗಳು ಊರಿನ ಗಣ್ಯರು ಹಾಜರಿದ್ದು ಶುಭ ಹಾರೈಸಿದರು.

ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಹಿರಿಯ ಶಿಕ್ಷಕ ವಿವೇಕಾನಂದ ಗೌಡ, ಸ್ವಾಗತಿಸಿದರು. ಮೇಧಾ ಕೆ. ಸನ್ಮಾನ ಪತ್ರ ವಾಚಿಸಿದರು. ಹಿಂದಿ ಶಿಕ್ಷಕ ಮೃತ್ಯುಂಜಯ ತಂಬಾಕದ ಧನ್ಯವಾದವಿತ್ತರು. ಸಹಶಿಕ್ಷಕ ಮಹೇಶ್ ಎ. ಕಾರ್ಯಕ್ರಮ ನಿರೂಪಿಸಿದರು.

Related posts

ಎಸ್.ಡಿ.ಎಂ ಕಾಲೇಜಿನ ರಾಜ್ಯ ಶಾಸ್ತ್ರ ವಿದ್ಯಾರ್ಥಿಗಳಿಂದ ಗ್ರಾಮ ಸ್ವರಾಜ್ ಕಾರ್ಯಕ್ರಮ

Suddi Udaya

ಬಂಗ್ಲೆಗುಡ್ಡಕ್ಕೆ ಮತ್ತೆ ಎಂಟ್ರಿ ಕೊಟ್ಟ ಎಸ್.ಐ.ಟಿ ಅಧಿಕಾರಿಗಳು

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಗೆ ಚಾಲನೆ: ಧ್ವಜಾರೋಹಣ, ಉತ್ಸವ ಬಲಿ, ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತೆ

Suddi Udaya

ಬಿಜೆಪಿ ರಾಜ್ಯ ಯುವಮೋರ್ಚಾ ಘಟಕದ ಪೂರ್ವಭಾವಿ ಸಮಾಲೋಚನಾ ಸಭೆಯಲ್ಲಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಉಜಿರೆ: ಲಕ್ಷ್ಮೀಶ ಭಟ್ ಇವರಿಗೆ ಹಿಮಾಲಯ ವುಡ್ ಬ್ಯಾಡ್ಜ್ ನಲ್ಲಿ ಅರ್ಹತೆ

Suddi Udaya
error: Content is protected !!