23.8 C
ಪುತ್ತೂರು, ಬೆಳ್ತಂಗಡಿ
August 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ರಸ್ತೆ ಸುರಕ್ಷತೆ ಹಾಗೂ ಕಾನೂನು ಅರಿವು ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜಾಗೃತಿ ಮತ್ತು ಕಾನೂನು ಅರಿವು ಮೂಡಿಸುವ ಉದ್ದೇಶದಿಂದ ಪೊಲೀಸ್ ಇಲಾಖೆಯ ವತಿಯಿಂದ ರಸ್ತೆ ಸುರಕ್ಷತೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಮಾದಕ ವಸ್ತುಗಳ ದುಷ್ಪರಿಣಾಮ, ಗಾಂಜಾ ಸೇವನೆಯ ಅಪಾಯ, ಬಾಲ್ಯ ವಿವಾಹ ಹಾಗೂ ಪೋಕ್ಸೋ ಕಾಯ್ದೆ ಕುರಿತು ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಶಾಲೆಯ ಮುಖ್ಯೋಪಾಧ್ಯಾಯಿನಿ ಹೇಮಲತಾ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಿಂಗಪ್ಪ ಡಿ ಜಕ್ಕಣ್ಣನವರ್ ಪೊಲೀಸ್ ಉಪನಿರೀಕ್ಷಕರು ಸಂಚಾರ ಠಾಣೆ ಬೆಳ್ತಂಗಡಿ ಹಾಗೂ ರೇಣುಕಾ ಪೊಲೀಸ್ ಕಾನ್ಸ್ಟೇಬಲ್ ಭಾಗವಹಿಸಿದ್ದರು.

ಅತಿಥಿಗಳು ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುವ ಮಹತ್ವ, ಮಹಿಳೆಯರು ಮತ್ತು ಮಕ್ಕಳ ಹಕ್ಕುಗಳ ಸಂರಕ್ಷಣೆ, ಮಾದಕ ವಸ್ತುಗಳ ದುಷ್ಪರಿಣಾಮಗಳು, ಬಾಲ್ಯ ವಿವಾಹದ ವಿರುದ್ಧ ಇರುವ ಕಾನೂನು ಕ್ರಮಗಳು ಹಾಗೂ ಪೋಕ್ಸೋ ಕಾಯ್ದೆಯ ಪ್ರಮುಖ ಅಂಶಗಳ ಕುರಿತು ಸಮಗ್ರ ಮಾಹಿತಿ ನೀಡಿದರು. ವಿದ್ಯಾರ್ಥಿಗಳು ಜವಾಬ್ದಾರಿಯುತ ನಾಗರಿಕರಾಗಿ ಬೆಳೆದು ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡಬೇಕೆಂದು ಅವರು ಕರೆ ನೀಡಿದರು.

ಶಿಕ್ಷಕ ಶ್ರೇಯಾಂಸ ಜೈನ್ ನಿರೂಪಿಸಿ, ಸ್ವಾಗತಿಸಿ ವಂದಿಸಿದರು. ಕಾರ್ಯಕ್ರಮದಲ್ಲಿ ಎಚ್.ಆರ್.ಡಿ. ಕ್ಲಬ್‌ನ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Related posts

ಗುರುವಾಯನಕೆರೆ ಶಾಲೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಕಲ್ಪವೃಕ್ಷ ಗಿಡನಾಟಿ

Suddi Udaya

ಶಿಬಾಜೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಮೃತಪಟ್ಟ ಘಟನೆ : ತಕ್ಷಣ ಸ್ಪಂದಿಸಿದ ಶಾಸಕ ಹರೀಶ್ ಪೂಂಜ

Suddi Udaya

ನ.22: ಶ್ರೀ ಶಿಶಿಲೇಶ್ವರ ಯಕ್ಷ ಕಲಾ ಕೂಟದಿಂದ ಸಂಪೂರ್ಣ ಶಬರಿಮಲೆ ಅಯ್ಯಪ್ಪ ಯಕ್ಷಗಾನ ಬಯಲಾಟ

Suddi Udaya

ವೇಣೂರು-ಪೆರ್ಮುಡ ಹೊನಲು ಬೆಳಕಿನ 33ನೇ ವರ್ಷದ ಸೂರ್ಯ-ಚಂದ್ರ ಜೋಡುಕರೆ ಬಯಲು ಕಂಬಳ

Suddi Udaya

ಕುವೆಟ್ಟು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ 12ನೇ ವರ್ಷದ ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆಯ ಪೂರ್ವಭಾವಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಫೆ.9: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನೇತೃತ್ವ ಯುವಸಿರಿ ರೈತ ಭಾರತದ ಐಸಿರಿ ವಿಶಿಷ್ಟ ಕಾರ್ಯಕ್ರಮ; ಬೆಳಾಲು ಅನಂತೋಡಿಯಲ್ಲಿ 1000 ಕ್ಕೂ ವಿಕ್ಕಿ ಯುವ ಜನತೆಯಿಂದ ಭತ್ತ ಕಟಾವು

Suddi Udaya
error: Content is protected !!