31.1 C
ಪುತ್ತೂರು, ಬೆಳ್ತಂಗಡಿ
June 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ರುಡ್‌ಸೆಟ್ ಸಂಸ್ಥೆ ವತಿಯಿಂದ ಕೃಷಿ ಉದ್ಯಮಿ–ಕೋಳಿ ಸಾಕಾಣಿಕೆ ತರಬೇತಿಯ ಸಮಾರೋಪ

ಉಜಿರೆ : ಕೃಷಿಯು ಪ್ರತಿಯೊಬ್ಬರ ಜೀವನದಲ್ಲಿ ಅವಿಭಾಜ್ಯ ಅಂಗವಾಗಿದ್ದು, ಕೃಷಿಯೊಂದಿಗೆ ಪೂರಕ ಚಟುವಟಿಕೆಗಳನ್ನು ಅಳವಡಿಸಿಕೊಳ್ಳುವ ಮೂಲಕ ಉತ್ತಮ ಆದಾಯ ಗಳಿಸಲು ಸಾಧ್ಯವೆಂದು ಸತತವಾದ ಪ್ರಯತ್ನದೊಂದಿಗೆ ಮುಂದುವರೆಯಿರಿ, ಜಮೀನಿನಲ್ಲಿ ಸಾಧ್ಯವಾದಷ್ಟು ವಿವಿಧ ಕೃಷಿಗಳನ್ನು ಅಳವಡಿಸಿಕೊಳ್ಳಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ಪ್ರಾದೇಶಿಕ ನಿರ್ದೇಶಕ ಮನೋಜ್ ಮಿನೇಜಸ್ ಅಭಿಪ್ರಾಯಪಟ್ಟರು.

ಅವರು ರುಡ್‌ಸೆಟ್ ಸಂಸ್ಥೆ, ಸಿದ್ಧವನ, ಉಜಿರೆ ವತಿಯಿಂದ ಆಯೋಜಿಸಲಾದ ಕೃಷಿ ಉದ್ಯಮಿ–ಕೋಳಿ ಸಾಕಾಣಿಕೆ ತರಬೇತಿ ಸಮಾರೋಪದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರುಡ್‌ಸೆಟ್ ಸಂಸ್ಥೆ ಕಾರ್ಯನಿರ್ವಾಹಕ ನಿರ್ದೇಶಕ ವಿಜಯ್ ಕುಮಾರ್ ವಹಿಸಿ ಮಾತನಾಡಿ, ತರಬೇತಿಯ ಮೂಲಕ ಪಡೆದ ಜ್ಞಾನ ಹಾಗೂ ಕೌಶಲ್ಯಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಯಶಸ್ವಿ ಉದ್ಯಮಿಗಳಾಗಿ ಬೆಳೆಯಬೇಕು ಎಂದು ಶಿಬಿರಾರ್ಥಿಗಳಿಗೆ ಪ್ರೇರಣೆ ನೀಡಿದರು.

ಸಂಸ್ಥೆಯ ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್ ಸ್ವಾಗತಿಸಿದರು. ಸಂಸ್ಥೆಯ ಹಿರಿಯ ಉಪನ್ಯಾಸಕ ಕರುಣಾಕರ್ ಕೆ ಜೈನ್ ನಿರೂಪಿಸಿದರು. ಲತಾ ಮತ್ತು ಬಳಗದವರು ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಶಿಬಿರಾರ್ಥಿಗಳಾದ ಗುರುರಾಜ್, ಜೇಮ್ಸ್ ಹಾಗೂ ಹೇಮಾವತಿ ತಮ್ಮ ತರಬೇತಿ ಅನುಭವಗಳನ್ನು ಹಂಚಿಕೊಂಡರು.

Related posts

ವೇಣೂರು ದೇವಾಡಿಗರ ಸೇವಾ ವೇದಿಕೆಯ ವತಿಯಿಂದ ಸಾಧಕರಿಗೆ ಸನ್ಮಾನ , ಅಭಿನಂದನೆ, ಪ್ರತಿಭಾ ಪುರಸ್ಕಾರ ಹಾಗೂ ಖಾಯಂ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಸೋಣಂದೂರು ಸ ಹಿ ಪ್ರಾ ಶಾಲೆಯಲ್ಲಿ ಮಕ್ಕಳ ಹಬ್ಬ ಮತ್ತು ಪ್ರತಿಭಾ ಪುರಸ್ಕಾರ

Suddi Udaya

ವೇಣೂರು ಐಟಿಐ : ಟೊಯೋಟೊ ನೇಮಕಾತಿ ಶಿಬಿರ

Suddi Udaya

ಗಾಯಕರಾದ ಕ್ಷಿತಿ ಕೆ.ರೈ ಮತ್ತು ಶ್ರೇಷ್ಠ ಆಳ್ವ ರಿಗೆ ಆಮಂತ್ರಣ ಸತ್ಯಶ್ರೀ ಗೌರವ ಪುರಸ್ಕಾರ

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ವತಿಯಿಂದ ರಕ್ತದಾನ ಶಿಬಿರ

Suddi Udaya

ರಸ್ತೆ ಬದಿ ವಾಹನ ನಿಲ್ಲಿಸುವರಿಗೆ ಎಚ್ಚರಿಕೆ, ಬ್ಯಾಟರಿ ಕಳ್ಳರಿದ್ದಾರೆ: ಸುಲ್ಕೇರಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಲವು ವಾಹನಗಳ ಬ್ಯಾಟರಿ ಕಳವು; ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya
error: Content is protected !!