ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಮಳೆಗಾಲದಲ್ಲಿ ಉಂಟಾಗಬಹುದಾದ ಪಾಕೃತಿಕ ವಿಕೋಪಗಳ ಬಗ್ಗೆ ಪೂರ್ವ ತಯಾರಿ ನಿರ್ವಹಣೆ ಹಾಗೂ ತುರ್ತು ಪರಿಹಾರಗಳ ಕ್ರಮದ ಬಗ್ಗೆ ಎಲ್ಲಾ ಇಲಾಖಾಧಿಕಾರಿಗಳ ಸಭೆ ಜೂ.15ರಂದು ಬೆಳ್ತಂಗಡಿ ತಾಲೂಕು ಪಂಚಾಯತ್ನ ನೇತ್ರವಾತಿ ಸಭಾಂಗಣದಲ್ಲಿ ನಡೆಯಿತು.
ತಾ.ಪಂ.ಇಓ ಭವಾನಿಶಂಕರ್ ಎನ್, ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ ಬಿಎಸ್, ಉಪ ತಹಶೀಲ್ದಾರ್ ರವೀಂದ್ರ ಶೆಟ್ಟಿ, ತಾಲೂಕು ಮಟ್ಟದ ಅಧಿಕಾರಿಗಳು, ವಿಎ ಮತ್ತು ಪಿಡಿಓಗಳು ಭಾಗವಹಿಸಿದ್ದರು.













