30.8 C
ಪುತ್ತೂರು, ಬೆಳ್ತಂಗಡಿ
September 15, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪುತ್ತೂರುಪೊಲೀಸ್ಪ್ರಮುಖ ಸುದ್ದಿವರದಿ

ಇಳಂತಿಲ: ದರೋಡೆ ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆ ಪ್ರಕಟ

ಇಳಂತಿಲ: ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಇಳಂತಿಲ ಎಂಬಲ್ಲಿ, ದಿನಾಂಕ: 20.03.2023 ರಂದು ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ 34/2023 ಕಲಂ 392,216(A)IPC ಮತ್ತು 196,115r/w 190(2) IMV ACT ರಂತೆ ಪ್ರಕರಣ ದಾಖಲಾಗಿದ್ದು, ಸದ್ರಿ ಪ್ರಕರಣದ ತನಿಖೆ ನಡೆಸಿದ ಅಂದಿನ ವೃತ್ತ ನಿರೀಕ್ಷಕರಾಗಿದ್ದ ರವಿ ಬಿ.ಎಸ್ ರವರು ಅಗತ್ಯ ಸಾಕ್ಷಿಗಳನ್ನು ಕಲೆ ಹಾಕಿ, ಆರೋಪಿಗಳಾದ ಬೆಳ್ತಂಗಡಿ ಇಳಂತಿಲ ನಿವಾಸಿ ರಾಜೀಮ್ ಹಾಗೂ ಕೊಕ್ಕಡ ನಿವಾಸಿ ಮುಸ್ತಫಾ ಎಂಬವರುಗಳ ವಿರುದ್ದ ಮಾನ್ಯ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿರುತ್ತಾರೆ.

ಸದ್ರಿ ಪ್ರಕರಣದ ವಿಚಾರಣೆ ನಡೆಸಿದ ಮಾನ್ಯ ಪಿ ಎಸ್ ಸಿ ಜೆ ಮತ್ತು ಜೆ ಎಂ ಎಫ್ ಸಿ ನ್ಯಾಯಾಲಯದ ಮಾನ್ಯ ನ್ಯಾಯಾಧೀಶರಾದ ಮನು ಬಿ.ಕೆ ರವರು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳಿಗೂ ಕಲಂ 392,216(A)IPC ಮತ್ತು 196,115r/w 190(2) IMV ACT ಅಡಿಯಲ್ಲಿ ತಲಾ 10000 ರೂಪಾಯಿ ದಂಡ ಮತ್ತು 3 ವರ್ಷ ಸಾದಾ ಕಾರಾಗೃಹ ಶಿಕ್ಷೆ ನೀಡಿ ಅದೇಶಿಸಿರುತ್ತದೆ. ಸಹಾಯಕ ಸರ್ಕಾರಿ ಅಭಿಯೋಜಕರಾದ ದಿವ್ಯರಾಜ ಹೆಗ್ಡೆರವರು ಸಮರ್ಥವಾಗಿ ವಾದಮಂಡಿಸಿರುತ್ತಾರೆ.

Related posts

ತುರ್ತು ಕರೆಗೆ ಸ್ಪಂದಿಸಿದ ಉಜಿರೆ-ಬೆಳಾಲು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು

Suddi Udaya

ಮಡಂತ್ಯಾರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದಿಂದ ಮಳೆಗಾಲದ ಠೇವಣಿ ಹಾಗೂ ಚಿನ್ನಾಭರಣ ಸಾಲಕ್ಕೆ ಹೊಸ ಆಫರ್ ಬಿಡುಗಡೆಯ ಕರಪತ್ರ ಬಿಡುಗಡೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಂತ್ರಿಮಂಡಲದ ಉದ್ಘಾಟನಾ ಸಮಾರಂಭ

Suddi Udaya

ಉಜಿರೆ ಯು.ಎಸ್. ಅಟೋ ಚಾಲಕರ-ಮಾಲಕರ ಸಂಘದ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಭಾರೀ ಗಾಳಿ ಮಳೆ: ತಾಲೂಕಿನದ್ಯಾಂತ ಹಲವು ಮನೆಗಳಿಗೆ ಮರ ಬಿದ್ದು ಹಾನಿ

Suddi Udaya

ಸುಲ್ಕೇರಿ ಶ್ರೀ ನೇಮಿನಾಥ ಸ್ವಾಮಿ ಬಸದಿಯ ಜೀರ್ಣೋದ್ದಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.10 ಲಕ್ಷ ದೇಣಿಗೆ

Suddi Udaya
error: Content is protected !!