29.3 C
ಪುತ್ತೂರು, ಬೆಳ್ತಂಗಡಿ
June 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ಅ.ಹಿ.ಪ್ರಾ. ಶಾಲೆಯಲ್ಲಿ ಯೋಗ ಶಿಬಿರ ಉದ್ಘಾಟನೆ

ಬೆಳ್ತಂಗಡಿ: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪೂರ್ವಭಾವಿಯಾಗಿ ನಡೆಯುವ ಒಂದು ವಾರದ ಯೋಗ ತರಬೇತಿ ಶಿಬಿರವನ್ನು ಜೂ.16 ರಂದು ಗಣ್ಯರ ಸಮ್ಮುಖದಲ್ಲಿ ಸಾಂಕೇತಿಕವಾಗಿ ಉಜಿರೆ ಎಸ್‌ಡಿಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉದ್ಘಾಟಿಸಲಾಯಿತು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಎಸ್.ಡಿ.ಎಂ ನ್ಯಾಚುರೋಪತಿ ಕಾಲೇಜಿನ ವೈದ್ಯಶಾಸ್ತ್ರದ ಉಪನ್ಯಾಸಕಿ ಡಾ. ರೆನಿತಾ ಮಾತನಾಡಿ “ಯೋಗ ಎಂಬುವುದು ಅತ್ಯಂತ ಪ್ರಾಚೀನವಾದದ್ದು,ಇದು ಆರೋಗ್ಯಕರ ಜೀವನ ಸಾಗಿಸಲು ಇರುವ ಸುಲಭ ಮಾರ್ಗ” ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಬಾಲಕೃಷ್ಣ ನಾಯ್ಕ ವಹಿಸಿ ಮಾತನಾಡಿ “ಮಕ್ಕಳಲ್ಲಿ ಏಕಾಗ್ರತೆ ಬರಲು ಯೋಗ ಸಹಕಾರಿಯಾಗಿದೆ, ಒಂದು ವಾರಗಳ ಕಾಲ ನಡೆಯಲಿರುವ ಈ ಶಿಬಿರ ಉತ್ತಮ ರೀತಿಯಲ್ಲಿ ನಡೆಯಲಿ” ಎಂದು ಶುಭ ಹಾರೈಸಿದರು.

ವೇದಿಕೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿಗಳಾದ ಅನಘಾ ಭಟ್ ಹಾಗೂ ಸಾನಿಕ ಉಪಸ್ಥಿತರಿದ್ದರು. ಶಾಲಾ ಸಹ ಶಿಕ್ಷಕಿ ಗೀತಾ ಸ್ವಾಗತಿಸಿದರು. ಸಹ ಶಿಕ್ಷಕಿ ರೇವತಿ ವಂದಿಸಿದರು.
ಶಾಲಾ ದೈಹಿಕ ಶಿಕ್ಷಕ ಪ್ರಜ್ವಲ್ ಧನ್ಯವಾದವಿತ್ತರು.

Related posts

ಇಳಂತಿಲ : ಸಂವಿಧಾನ ಜಾಗೃತಿ ಜಾಥಾ

Suddi Udaya

ವೇಣೂರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬಳಂಜ: ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶ್ರೀ ಗುರು ಪೂಜಾ

Suddi Udaya

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ನ್ಯಾಯಾಲಯಕ್ಕೆ ಹಾಜರಾಗದ ವಾರಂಟ್ ಆರೋಪಿ ಬಂಧನ

Suddi Udaya

ನಡ ಸರಕಾರಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya
error: Content is protected !!