September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಶ್ರೀ ಧ . ಮಂ.ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೃತ್ಯ ಹಾಗೂ ಸಂಗೀತ ಉದ್ಘಾಟನೆ ಸಮಾರಂಭ

ಧರ್ಮಸ್ಥಳ: ಶ್ರೀ .ಧ .ಮ .ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಪ್ರಸಕ್ತ ವರ್ಷದ ಭರತನಾಟ್ಯ ಹಾಗೂ ಸಂಗೀತ ತರಗತಿಗಳ ಉದ್ಘಾಟನಾ ಸಮಾರಂಭ ನೆರವೇರಿತು.

ಮುಖ್ಯ ಅತಿಥಿಗಳಾಗಿ ಸಂಗೀತ ಹಾಗೂ ಯಕ್ಷಗಾನ ಪ್ರೇಮಿಯಾಗಿರುವ ಕೆ ಕೃಷ್ಣ ಆಚಾರ್ಯ ಆಗಮಿಸಿದ್ದರು. ಇವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಮಕ್ಕಳಿಗೆ ಯಾವತ್ತೂ ಶಿಸ್ತು ಎಲ್ಲಾ ಕ್ಷೇತ್ರಗಳಲ್ಲೂ ಬಹಳ ಮುಖ್ಯ ವಾಗಿದೆ. ವಿದ್ಯೆಯ ಜೊತೆಗೆ ಸಹಪಠ್ಯ ಚಟುವಟಿಕೆ ಯಲ್ಲಿ ಹೆಚ್ಚು ಭಾಗವಹಿಸಿ ತೃಪ್ತಿ ಯನ್ನು ಪಡೆದುಕೊಳ್ಳಬೇಕು ಎಂದು ಹಿತವಚನವನ್ನು ನೀಡಿದರು.

ಶಾಲಾ ನೃತ್ಯ ತರಬೇತಿ ಗುರುಗಳಾದ ಕುಮಾರಿ ಕೃತಿಕಾ ಕೆ ಎಸ್ ಮಕ್ಕಳಿಗೆ ಶುಭಾಶಯ ಕೋರಿದರು. ಸಂಗೀತ ತರಬೇತಿ ನೀಡುವ ಗುರುಗಳಾದ ಶ್ರೀಮತಿ ಸುಗುಣ ವಿ. ಕೆ. ಆಚಾರ್ಯ ರವರು ಮಕ್ಕಳಿಗೆ ಶುಭಾಶಯ ಕೋರಿ ಪೋಷಕರ ಪಾತ್ರವನ್ನು ವಿವರಿಸಿದರು. ಶಾಲಾ ಮುಖ್ಯಶಿಕ್ಷಕಿ ಶ್ರೀಮತಿ ಪರಿಮಳ ಎಂ ವಿ ರವರು ಮಾರ್ಗದರ್ಶನ ನೀಡಿದರು. ಅದಿತಿ ನಿರ್ವಹಿಸಿದ ಕಾರ್ಯಕ್ರಮದಲ್ಲಿ ಅಧ್ವಿಕಾ ಸ್ವಾಗತಿಸಿ ,ಕುಮಾರಿ ಸಾನಿಧ್ಯ ಎಸ್ ಪಿ ಕಾರ್ಯಕ್ರಮದ ವಂದನಾರ್ಪಣೆಗೈದರು. ಸೌಹಾರ್ದ ಗೌಡ ಅತಿಥಿಗಳ ಪರಿಚಯ ಮಾಡಿಕೊಟ್ಟರು. ಪೋಷಕರು ಹಾಗೂ ಶಿಕ್ಷಕರ ಸಹಭಾಗಿತ್ವದಲ್ಲಿ ಕಾರ್ಯಕ್ರಮ ಉತ್ತಮ ರೀತಿಯಲ್ಲಿ ನೆರವೇರಿತು.

Related posts

ಎಸ್ ಡಿ ಎಂ ಪಪೂ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿ ಸಂವಾದ

Suddi Udaya

ಗಣೇಶೋತ್ಸವದ ವಿವಿಧ ಕ್ರೀಡೆಗಳಲ್ಲಿ ವಿಜೇತರಾದ ನಗದು ಬಹುಮಾನದಲ್ಲಿ ಬಳಂಜ ಶಾಲೆಯ ಶಾಲಾ ಸಭಾಂಗಣದ ಶಾರದಾ ಕಲಾಮಂದಿರಕ್ಕೆ ಎರಡು ಫೋಕಸ್ ಲೈಟುಗಳ ಕೊಡುಗೆ ನೀಡಿದ ವಿದ್ಯಾರ್ಥಿಗಳು

Suddi Udaya

ಮಡಂತ್ಯಾರು: ಇನ್ನೊಂದು ವಾಹನಕ್ಕೆ ಸೈಡ್ ಕೊಡುವ ಸಂದರ್ಭ ಚರಂಡಿಗೆ ಜಾರಿದ ಕೆ ಎಸ್ ಆರ್ ಟಿ ಸಿ ಬಸ್ಸು

Suddi Udaya

ವಾಲಿಬಾಲ್ ಪಂದ್ಯಾಟ: ಪದ್ಮುಂಜ ಸರಕಾರಿ ಪ್ರೌಢಶಾಲಾ ಬಾಲಕರ ತಂಡ ಪ್ರಥಮ ಸ್ಥಾನ ಹಾಗೂ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya

ಉಜಿರೆ: ಕಾಮಧೇನು ಎಂಟರ್ ಪ್ರೈಸಸ್ ಶುಭಾರಂಭ

Suddi Udaya

ಧರ್ಮಸ್ಥಳದ ಲಕ್ಷದೀಪೋತ್ಸವ: ಸಾಹಿತ್ಯ ಸಮ್ಮೇಳನದ 91ನೇ ಅಧಿವೇಶನ ಉದ್ಘಾಟನೆ

Suddi Udaya
error: Content is protected !!