September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡ್ಡಂದಡ್ಕ ಸರಿಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ

ವೇಣೂರು: ಪಡ್ಡoದಡ್ಕ ಶಾಲೆಯಲ್ಲಿ ಉಚಿತ ಬರೆಯುವ ಪುಸ್ತಕಗಳನ್ನು ಪೆರಿಂಜೆಯ ಸಾರಾ ಇಬ್ರಾಹಿಂ ಪ್ಯಾಮಿಲಿ ಟ್ರಸ್ಟ್ ನ ವತಿಯಿಂದ ಜೂ.15 ರಂದು ವಿತರಿಸಲಾಯಿತು.

ಶಾಲಾ ಸಭಾಭವನದಲ್ಲಿ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂಸಿ ಅಧ್ಯಕ್ಷ ಪಿಎಸ್ ಶಬ್ಬೀರ್ ವಹಿಸಿದ್ದರು. ಶಾಲಾ ಸ್ಥಾಪಕ ಸದಸ್ಯ ಶಂಕರ್ ಭಟ್ ಬಾಲ್ಯ ಮಾತಾಡಿ, ಈ ವರ್ಷದಿಂದ ಶಾಲೆಯಲ್ಲಿ ಎಲ್ ಕೆಜಿ ಯಿಂದ 5 ನೇ ತರಗತಿಯವರೆಗೆ ಆಂಗ್ಲ ತರಗತಿ ಆರಂಭವಾಗಿದ್ದು ಇಬ್ಬರು ಪದವೀಧರ ಟೀಚರ್ ನ್ನು ಸರಕಾರದ ವತಿಯಿಂದ ಮಂಜೂರು ಮಾಡಲಾಗಿದೆ. ಸರಕಾರಿ ಶಾಲೆಯನ್ನು ಉಳಿಸುವ ನಿಟ್ಟಿನಲ್ಲಿ ಹೆತ್ತವರು ದೂರದ ಇಂಗ್ಲಿಸ್ ಮೀಡಿಯಂ ಶಾಲೆಗೆ ಪ್ರತಿಷ್ಠೆಗೋಸ್ಕರ ಕಳಿಸದೆ ಊರಿನ ಶಾಲೆಗೆ ಕಳಿಸಿದರೆ ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸ, ಸರಕಾರದ ಸೌಲಭ್ಯ ಮತ್ತು ಒಳ್ಳೆಯ ಸಂಸ್ಕಾರ ಸಿಗುತ್ತೆ ಎಂದರು.

ಸಾರಾ ಇಬ್ರಾಹಿಂ ಟ್ರಸ್ಟ್ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ ಮಾತಾಡಿ, ಟ್ರಸ್ಟ್ ವಿದ್ಯೆ ಬಗ್ಗೆ ಪ್ರಥಮ ಆಧ್ಯತೆ ನೀಡಿತಿದ್ದು ಈ ನಿಟ್ಟಿನಲ್ಲಿ ಯೋಜನೆಗಳನ್ನು ಹಾಕಿಕೊಂಡು ಕಾರ್ಯಚರಿಸುತ್ತಿದೆ. ಸರಕಾರಿ ಶಾಲಾ ಮಕ್ಕಳಿಗೆ ಉಚಿತವಾಗಿ ಪುಸ್ತಕ ವಿತರಣೆ ಮಾಡಿದ್ದು ಸಂತೋಷವಾಗುತಿದೆ ಎಂದರು.
ಈ ಶಾಲಾ ಸ್ಥಾಪಕ ಸದಸ್ಯ ಇಸ್ಮಾಯಿಲ್ ಗಾಂಧಿನಗರ, ಪತ್ರಕರ್ತ ಎಚ್ ಮಹಮ್ಮದ್ ವೇಣೂರು, ಅರುಣ್ ಪೂಜಾರಿ ಜಾರಿಗೆದಡಿ, ಉಮರ್.ಕೆ, ರಹಿಮಾನ್ ಪೆರಿಂಜೆ ಮಾತಾಡಿದರು. ಮುಖ್ಯ ಶಿಕ್ಷಕಿ ಕಮಲಮ್ಮ ಪ್ರಾಸ್ತಾವಿಕವಾಗಿ ಮಾತಾಡಿ ಸ್ವಾಗತಿಸಿದರು.
ಎಸ್ಡಿಎಂಸಿ ಉಪಾಧ್ಯಕ್ಷೆ ಶ್ರೀಮತಿ ರೇಖಾ, ಪೆರಿಂಜೆಯ ಬುಲೆಟ್ ಖಾದರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಟ್ರಸ್ಟ್ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ ಹಾಗೂ ಶಾಲಾ ಅಭಿವೃದ್ಧಿ ಯೋಜನೆಗಳಲ್ಲಿ ಸಹಕರಿಸಿದ ಜಾರಿಗೆದಡಿ ಅರುಣ್ ಪೂಜಾರಿಯವರನ್ನು ಶಾಲು ಹೊದಿಸಿ ಗೌರವಿಸಲಾಯಿತು.

ಶಿಕ್ಷಕಿ ಶ್ರೀಮತಿ ದಾಕ್ಷಾಯಿಣಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ವಿನೋದ ಕುಮಾರಿ ವಂದಿಸಿದರು.

Related posts

ಕುವೆಟ್ಟು ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ: ಆಶ್ಲೇಷಾ ಬಲಿ-ಶ್ರೀ ನಾಗದರ್ಶನ ಸೇವೆ, ಶ್ರೀ ನಾಗದೇವರ ಮತ್ತು ಶ್ರೀ ಲೋಕನಾಥೇಶ್ವರ ದೇವರ ಭೇಟಿ,

Suddi Udaya

ಧರ್ಮಸ್ಥಳದ ವಿರುದ್ಧ ಬುರುಡೆ ಷಡ್ಯಂತ್ರ ಪ್ರಕರಣ: ಬೆಳ್ತಂಗಡಿ ಕೋರ್ಟ್ ಗೆ ಆಗಮಿಸಿದ ಖ್ಯಾತ ವಕೀಲ ಸಿ.ವಿ.ನಾಗೇಶ್

Suddi Udaya

ಬೆಳ್ತಂಗಡಿ: ಧ.ಮಂ.ಆಂಗ್ಲ ಮಾಧ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕಬ್ ಬುಲ್ ಬುಲ್ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪ್ರಶಸ್ತಿ

Suddi Udaya

ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ಸಮಾಜಘಾತುಕ ಶಕ್ತಿಗಳಿಂದ ಸುಳ್ಳು ಸುದ್ದಿ ಹಾಗೂ ಅಪಪ್ರಚಾರಕ್ಕೆಜಿಲ್ಲಾ ಜನಜಾಗೃತಿ ವೇದಿಕೆ ಖಂಡನೆ

Suddi Udaya

ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದು ಹಿಂದಕ್ಕೆ ಕಳುಹಿಸಿದ ಪೊಲೀಸರು

Suddi Udaya
error: Content is protected !!