29.3 C
ಪುತ್ತೂರು, ಬೆಳ್ತಂಗಡಿ
June 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀರಾಮಚಂದ್ರ ದೇವರ ವಿರುದ್ಧ ಅವಹೇಳನಕಾರಿ ಹಾಗೂ ವಿವಾದಾತ್ಮಕ ಹೇಳಿಕೆ : ಪ್ರೊ. ಕೆ. ಎಸ್. ಭಗವಾನ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು

ಬೆಳ್ತಂಗಡಿ: ಹಿಂದೂ ಧರ್ಮದ ಆರಾಧ್ಯ ಮೂರ್ತಿ ಶ್ರೀರಾಮಚಂದ್ರ ದೇವರ ವಿರುದ್ಧ ಅವಹೇಳನಕಾರಿ ಹಾಗೂ ವಿವಾದಾತ್ಮಕ ಹೇಳಿಕೆ ನೀಡಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದ ಹಿನ್ನೆಲೆಯಲ್ಲಿ ಪ್ರೊ. ಕೆ. ಎಸ್. ಭಗವಾನ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬೆಳ್ತಂಗಡಿ ಮಂಡಲದ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ರಾತ್ರಿ ತಮ್ಮ ಮೊಬೈಲ್‌ನಲ್ಲಿ ಯೂಟ್ಯೂಬ್ ವೀಕ್ಷಿಸುತ್ತಿದ್ದಾಗ, ‘ವಿಸ್ತಾರ ನ್ಯೂಸ್’ ವಾಹಿನಿಯಲ್ಲಿ ಪ್ರಸಾರವಾದ ಪ್ರೊ. ಕೆ. ಎಸ್. ಭಗವಾನ್ ಅವರ ವಿವಾದಿತ ಹೇಳಿಕೆಯ ವಿಡಿಯೋವೊಂದು ಗಮನಕ್ಕೆ ಬಂದಿದೆ. ಸದ್ರಿ ವಿಡಿಯೋದಲ್ಲಿ ಪ್ರೊ. ಕೆ. ಎಸ್. ಭಗವಾನ್ ಅವರು, “ನೀವು ಪೂಜೆ ಮಾಡುವ ಶ್ರೀರಾಮಚಂದ್ರ ತಂದೆಗೆ ಹುಟ್ಟಿದವನಲ್ಲ. ಹಿಂದೂ ದೇವರುಗಳು ಕೊಲೆ ಮಾಡುವ ದೇವರುಗಳು, ರಾಮನ ತಂದೆ ದಶರಥ ಪುತ್ರಕಾಮೇಷ್ಟಿ ಪೂಜೆ ಮಾಡುತ್ತಾನೆ ಹಾಗೂ ಸ್ವಾಮಿ ವಿವೇಕಾನಂದರು ಹಿಂದೂ ಧರ್ಮವನ್ನು ತ್ಯಜಿಸಿದ್ದರು” ಎಂದು ಹೇಳಿಕೆ ನೀಡಿ ಕೋಟ್ಯಂತರ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ತೀವ್ರ ಧಕ್ಕೆ ತಂದಿದ್ದಾರೆ ಎಂದು ಅರ್ಜಿದಾರರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ವಿವಾದಿತ ಹೇಳಿಕೆಗೆ ಸಂಬಂಧಿಸಿದಂತೆ ಈಗಾಗಲೇ ದಾವಣಗೆರೆ ಜಿಲ್ಲೆಯ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 196(1)(a) ಮತ್ತು 299 ರ ಅಡಿಯಲ್ಲಿ (ಪ್ರಕರಣ ಸಂಖ್ಯೆ: 103/2026) ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ, ಪ್ರಸ್ತುತ ಸ್ವೀಕೃತವಾಗಿರುವ ಹೊಸ ದೂರನ್ನು ಠಾಣಾ ದೂರು ಸಂಖ್ಯೆ: PO1070260600610 ರಂತೆ ನೋಂದಾಯಿಸಿಕೊಂಡು, ಮುಂದಿನ ಸೂಕ್ತ ಕಾನೂನು ಕ್ರಮ ಹಾಗೂ ಮುಂದಿನ ತನಿಖೆಗಾಗಿ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಗೆ ಅಧಿಕೃತವಾಗಿ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.


ಈ ಸಂದರ್ಭದಲ್ಲಿ ಶಶಿರಾಜ್ ಶೆಟ್ಟಿ, ಜಗದೀಶ್, ಶರತ್, ಪವನ್, ಹರೀಶ್, ಸುದೀರ್, ಗಣೇಶ್, ಇನ್ನಿತರರು ಉಪಸ್ಥಿತರಿದ್ದರು.

Related posts

ಪಟ್ರಮೆ: ಕೀಟನಾಶಕ ಸೇವಿಸಿ ಯುವಕ ಆತ್ಮಹತ್ಯೆ

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ

Suddi Udaya

ಅನೀಶ್ ಪೂಜಾರಿ ವೇಣೂರು ನಿರ್ದೇಶನದಲ್ಲಿ ಮೂಡಿ ಬರಲಿದೆ ಹೊಸ ಚಲನಚಿತ್ರ “ಪೈಕಾ”

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಪ್ರೆಸೆಂಟೇಶನ್ ಸ್ಕಿಲ್ಸ್ ಕಾರ್ಯಕ್ರಮ

Suddi Udaya

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ನಾವೂರು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳ ಅದ್ಭುತ ಸಾಧನೆ

Suddi Udaya

ಕಾಯರ್ತಡ್ಕ ಸ.ಹಿ.ಪ್ರಾ. ಶಾಲೆಯಲ್ಲಿ ನೂತನ ಎರಡು ತರಗತಿ ಕೊಠಡಿಗಳ ಶಿಲಾನ್ಯಾಸ ಹಾಗೂ ಸ್ಮಾರ್ಟ್ ಟಿವಿ ಉದ್ಘಾಟನೆ

Suddi Udaya
error: Content is protected !!