23.8 C
ಪುತ್ತೂರು, ಬೆಳ್ತಂಗಡಿ
August 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಗತಿಯ ಉದ್ಘಾಟನೆ

ಸುಲ್ಕೇರಿ : ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಸುಲ್ಕೇರಿ, ಶ್ರೀರಾಮ ಶಾಲೆ, ಸುಲ್ಕೇರಿಯಲ್ಲಿ ಜೂ.16ರಂದು ಯಕ್ಷಗಾನ ನಾಟ್ಯ ತರಗತಿಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಕರ್ನಾಟಕದ ಜನಪದ ಕಲೆಯಲ್ಲೊಂದಾದ ಯಕ್ಷಗಾನದ ಕಂಪನ್ನು ವಿದ್ಯಾರ್ಥಿಗಳಲ್ಲಿ ತುಂಬಿ ಕಲಾಭಿರುಚಿಯನ್ನು ಮೂಡಿಸುವ ಧ್ಯೇಯದೊಂದಿಗೆ 4 ವರ್ಷಗಳ ಹಿಂದೆ ಶಾಲೆಯಲ್ಲಿ ಯಕ್ಷಗಾನ ತರಬೇತಿಯನ್ನು ಆರಂಭಿಸಲಾಗಿದ್ದು ಕಳೆದ ವರ್ಷದಿಂದ ಯಕ್ಷಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್(ರಿ) ಮಂಗಳೂರು ಯಕ್ಷಧ್ರುವ–ಯಕ್ಷ ಶಿಕ್ಷಣ ಕಾರ್ಯಕ್ರಮಕ್ಕೆ ಹಸ್ತಾಂತರಗೊಂಡಿದ್ದು ಈ ವರ್ಷ 2ನೇ ವರ್ಷದ ಉದ್ಘಾಟನಾ ಕಾರ್ಯಕ್ರಮವು ಶಾಲೆಯಲ್ಲಿ ನಡೆಯಿತು .

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ರಾಜು ಪೂಜಾರಿ ವಹಿಸಿಕೊಂಡಿದ್ದರು . ಶಾಲಾ ಆಡಳಿತ ಮಂಡಳಿಯ ಗೌರವಾಧ್ಯಕ್ಷ ಗಣೇಶ್ ಹೆಗ್ಡೆ, ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳೆಂಜ ಹಾಗೂ ಮಂಗಳೂರು ಯಕ್ಷಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್ ಯಕ್ಷಧ್ರುವ ಯಕ್ಷ ಶಿಕ್ಷಣ ಬೆಳ್ತಂಗಡಿ ಘಟಕ ಅಧ್ಯಕ್ಷ ಸುರೇಶ್ ಶೆಟ್ಟಿ , ಲಯನ್ಸ್ ಅಧ್ಯಕ್ಷ ಲಯನ್ ದೇವದಾಸ್ ಶೆಟ್ಟಿ ಬದ್ಯಾರು, ಮಂಗಳೂರು ಯಕ್ಷಧ್ರುವ ಯಕ್ಷಶಿಕ್ಷಣ ಪಟ್ಲ ಪೌಂಡೇಶನ್ ಟ್ರಸ್ಟ್ ಪ್ರಧಾನ ಸಂಚಾಲಕ ವಾಸುದೇವ ಐತಾಳ , ಶಿತಿಕಂಠ ಭಟ್ ಉಜಿರೆ ಗಣೇಶ್ ಕ್ಲಿನಿಕಲ್ ಲ್ಯಾಬೋರೆಟರಿ ಬೆಳ್ತಂಗಡಿ , ಶ್ರೀಮತಿ ಧನುಷಾ ಇಕೋ ಫ್ರೆಶ್ ಎಂಟರ್ ಪ್ರೈಸಸ್ ಹಾಗೂ ವೀರ ಮಾರುತಿ ಇಂಡಸ್ಟ್ರೀಸ್ ಇದರ ಪ್ರೊಪ್ರೇಟರ್ , ಶ್ರೀ ಸುಲ್ಕೇರಿ ಮಹಮ್ಮಾಯಿ ದೇವಸ್ಥಾನ ಅಧ್ಯಕ್ಷ ಪಾರ್ಶ್ವನಾಥ ಜೈನ್, ದೇವಿಪ್ರಸಾದ್ ಗುರುವಾಯನಕೆರೆ ಯಕ್ಷಗಾನ ತರಬೇತಿ ಗುರುಗಳು , ಶ್ರೀರಾಮ ಪ್ರೌಢ ಶಾಲೆ ಮುಖ್ಯೋಪಾಧ್ಯಾಯರು ಪ್ರಮೋದ ಕುಮಾರ್ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಮುಖ್ಯೋಪಾದ್ಯಾಯರು ಶಶಿಕಲಾ ಪ್ರಾಸ್ತಾವಿಕ ಮಾತಿನೊಂದಿಗೆ ಸ್ವಾಗತಿಸಿ , ಪೂರ್ವ ಗುರುಕುಲ ಮುಖ್ಯಸ್ಥೆ ಸ್ವಾತಿ ಧನ್ಯವಾದವಿತ್ತರು. ಶಿಕ್ಷಕಿ ಹೇಮಲತಾ ಕಾರ್ಯಕ್ರಮ ನಿರೂಪಿಸಿದರು.

Related posts

ಇಂದಬೆಟ್ಟು : ಕಲ್ಲಾಜೆ ನವ ಭಾರತ್ ಗೆಳೆಯರ ಬಳಗ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನಾರಾವಿ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಸೂರ್ಯ ವಂದನಾ ಭಜನಾ ಉತ್ಸವದ ಪೂರ್ವ ತಯಾರಿ ಸಭೆ

Suddi Udaya

ಉಜಿರೆ ಎಸ್.ಡಿ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ : ಅಂತಾರಾಷ್ಟ್ರೀಯ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya

ನೀರಿನಲ್ಲಿ ಕೊಚ್ಚಿ ಹೋದ ಬೈಕ್ ಪ್ರಕರಣ: ಕೂಡುಜಾಲು ಪ್ರದೇಶದಲ್ಲಿ ಅಪಾಯಕಾರಿ ಫಲಕ ಅಳವಡಿಸಿದ ಮೇಲಂತಬೆಟ್ಟು ಗ್ರಾ.ಪಂ.

Suddi Udaya

ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ಐವತ್ತು ವಿದ್ಯಾರ್ಥಿಗಳಿಗೆ ಸಂಸ್ಕೃತಭಾಷಾ ವಿದ್ಯಾರ್ಥಿವೇತನ

Suddi Udaya

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ: ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ, ಅಶಕ್ತ ಕುಟುಂಬಕ್ಕೆ ಆರ್ಥಿಕ ನೆರವು,ಮನೆ ಹಸ್ತಾಂತರ

Suddi Udaya
error: Content is protected !!