September 15, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸೋಣಂದೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಸಂಘ ಉದ್ಘಾಟನೆ

ಸೋಣಂದೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೋಣಂದೂರು ಇಲ್ಲಿ 2026-27 ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆ ಸಮಾರಂಭವನ್ನು ಜೂ.15 ರಂದು ಜರಗಿತು.


ವಿದ್ಯಾರ್ಥಿ ಜೀವನ ಎಂದರೆ ಕೇವಲ ಪಾಠ ಪ್ರವಚನಗಳಿಗೆ ಸೀಮಿತವಾಗಿರದೆ ಶಿಸ್ತು ಆರೋಗ್ಯ ಜವಾಬ್ದಾರಿಗಳ ಬಗ್ಗೆ ತಿಳುವಳಿಕೆ ಇರಬೇಕು ಎಂಬ ಕಾರಣಕ್ಕೆ ವಿದ್ಯಾರ್ಥಿ ಜೀವನದ ಹಂತದಲ್ಲಿ ಚುನಾವಣಾ ಪ್ರಚಾರ ಮತದಾನದ ಬಗ್ಗೆ ಅರಿವು ಮೂಡಿಸಲಾಯಿತು.

ಜೂ 6 ರಂದು ನಡೆದ ಚುನಾವಣೆಯಲ್ಲಿ ಶಾಲಾ ಮುಖ್ಯಮಂತ್ರಿ ಆಗಿ 7ನೇ ತರಗತಿಯ ಗಗನ್, ಉಪಮುಖ್ಯಮಂತ್ರಿಯಾಗಿ 6ನೇ ತರಗತಿಯ ಮೊಹಮ್ಮದ್ ಫೈಜಲ್, ಶಾಲಾ ಗೃಹಮಂತ್ರಿಯಾಗಿ 6ನೇ ತರಗತಿಯ ಫಾತಿಮಾತ್ ರಿಫಾ ಅವರು ಆಯ್ಕೆಯಾಗಿರುತ್ತಾರೆ.


ಶಾಲಾ ಸಂಸತ್ತಿನಲ್ಲಿ ಶಾಲಾ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ವಿರೋಧಪಕ್ಷ, ಶಿಸ್ತು ಮತ್ತು ಶಿಕ್ಷಣ, ಆಹಾರ ಮತ್ತು ಆರೋಗ್ಯ, ಸಾಂಸ್ಕೃತಿಕ ಮಂತ್ರಿ, ಕ್ರೀಡಾ ಮಂತ್ರಿ, ನೀರಾವರಿ ಮತ್ತು ತೋಟಗಾರಿಕೆ, ವಾರ್ತಾ ಮಂತ್ರಿ ಮತ್ತು ಉಪ ಮಂತ್ರಿ ಗಳ ಆಯ್ಕೆ ನಡೆಸಲಾಯಿತು.


ಮಂತ್ರಿಗಳ ಜವಾಬ್ದಾರಿಯನ್ನು ಮುಖ್ಯ ಶಿಕ್ಷಕಿ ಅನಿತಾ ರೇಷ್ಮಾ ತಿಳಿಸಿದರು. ಸಹ ಶಿಕ್ಷಕಿ ರಕ್ಷಾ ಪ್ರತಿಜ್ಞಾವಿಧಿ ನೆರವೇರಿಸಿದರು. ಸಹಶಿಕ್ಷಕಿ ರಶ್ಮಿ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಲಾಯಿಲ ರಾಘವೇಂದ್ರ ಮಠದ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ತುಳು ಶಿವಳ್ಳಿ ಸಭಾ ದಿಂದ ಭಜನೆ

Suddi Udaya

ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಹೆಗ್ಗಡೆ ಭಾಗಿ

Suddi Udaya

ಜಿಲ್ಲಾಧಿಕಾರಿ ಸಭೆಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಮಲೆಕುಡಿಯ ಸಮುದಾಯದ ಮುಖಂಡರ ಒತ್ತಾಯ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಪದಗ್ರಹಣ ಸಮಾರಂಭ: ಡಾ. ಡಿ ವೀರೇಂದ್ರ ಹೆಗ್ಗಡೆಯರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪಿಲ್ಯ ಶಾಲಾ ಹಳೇ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಆಮಂತ್ರಣ ವಿಜಯ ಕುಮಾರ್ ಜೈನ್ ಆಯ್ಕೆ

Suddi Udaya

ನ.28: ಉಜಿರೆಯಲ್ಲಿ ರಮ್ಯಾ 1 ಗ್ರಾಂ ಗೋಲ್ಡ್ & ಫ್ಯಾನ್ಸಿ ಫೂಟ್‌ವೇರ್‌ನ ನೂತನ ಶೋರೂಂ ಶುಭಾರಂಭ

Suddi Udaya
error: Content is protected !!