23.8 C
ಪುತ್ತೂರು, ಬೆಳ್ತಂಗಡಿ
August 1, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪುತ್ತೂರುಪೊಲೀಸ್ಪ್ರಮುಖ ಸುದ್ದಿವರದಿ

ಇಳಂತಿಲ: ದರೋಡೆ ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆ ಪ್ರಕಟ

ಇಳಂತಿಲ: ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಇಳಂತಿಲ ಎಂಬಲ್ಲಿ, ದಿನಾಂಕ: 20.03.2023 ರಂದು ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ 34/2023 ಕಲಂ 392,216(A)IPC ಮತ್ತು 196,115r/w 190(2) IMV ACT ರಂತೆ ಪ್ರಕರಣ ದಾಖಲಾಗಿದ್ದು, ಸದ್ರಿ ಪ್ರಕರಣದ ತನಿಖೆ ನಡೆಸಿದ ಅಂದಿನ ವೃತ್ತ ನಿರೀಕ್ಷಕರಾಗಿದ್ದ ರವಿ ಬಿ.ಎಸ್ ರವರು ಅಗತ್ಯ ಸಾಕ್ಷಿಗಳನ್ನು ಕಲೆ ಹಾಕಿ, ಆರೋಪಿಗಳಾದ ಬೆಳ್ತಂಗಡಿ ಇಳಂತಿಲ ನಿವಾಸಿ ರಾಜೀಮ್ ಹಾಗೂ ಕೊಕ್ಕಡ ನಿವಾಸಿ ಮುಸ್ತಫಾ ಎಂಬವರುಗಳ ವಿರುದ್ದ ಮಾನ್ಯ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿರುತ್ತಾರೆ.

ಸದ್ರಿ ಪ್ರಕರಣದ ವಿಚಾರಣೆ ನಡೆಸಿದ ಮಾನ್ಯ ಪಿ ಎಸ್ ಸಿ ಜೆ ಮತ್ತು ಜೆ ಎಂ ಎಫ್ ಸಿ ನ್ಯಾಯಾಲಯದ ಮಾನ್ಯ ನ್ಯಾಯಾಧೀಶರಾದ ಮನು ಬಿ.ಕೆ ರವರು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳಿಗೂ ಕಲಂ 392,216(A)IPC ಮತ್ತು 196,115r/w 190(2) IMV ACT ಅಡಿಯಲ್ಲಿ ತಲಾ 10000 ರೂಪಾಯಿ ದಂಡ ಮತ್ತು 3 ವರ್ಷ ಸಾದಾ ಕಾರಾಗೃಹ ಶಿಕ್ಷೆ ನೀಡಿ ಅದೇಶಿಸಿರುತ್ತದೆ. ಸಹಾಯಕ ಸರ್ಕಾರಿ ಅಭಿಯೋಜಕರಾದ ದಿವ್ಯರಾಜ ಹೆಗ್ಡೆರವರು ಸಮರ್ಥವಾಗಿ ವಾದಮಂಡಿಸಿರುತ್ತಾರೆ.

Related posts

ಶತಾಯುಷಿ ಪಟ್ರಮೆ ಅಶ್ಚತ್ತಡಿ ನಿವಾಸಿ ಪಮಣ ಗೌಡ ನಿಧನ

Suddi Udaya

ಮುಂಡಾಜೆ: ಕೃಷಿಕ ಸದಾಶಿವ ನೇಕಾರ ನಿಧನ

Suddi Udaya

ಕೊಕ್ರಾಡಿ ಬೊಳ್ಳಕುಮೇರುನಲ್ಲಿ ಸುಲ್ಕೇರಿ ನದಿಯಲ್ಲಿ ಅಕ್ರಮ ಮರಳು ದಂಧೆ ವೇಣೂರು ಪೊಲೀಸರ ದಾಳಿ – ಡ್ರಜ್ಜಿಂಗ್ ಮಿಶನ್ ವಶ ಇಬ್ಬರ ಮೇಲೆ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿಯ ಅಧ್ಯಕ್ಷರಾಗಿ ಆನಂದ ದೇವಾಡಿಗ , ಕಾರ್ಯದರ್ಶಿಯಾಗಿ  ವೆಂಕಟರಮಣ ಆಚಾರ್  

Suddi Udaya

ಅ.10: ಧರ್ಮಸ್ಥಳ ಕಲ್ಲೇರಿಯಲ್ಲಿ ‘ಓಂಕಾರ’ ಮಲ್ಟಿ ಸ್ಟೋರ್ ಶುಭಾರಂಭ

Suddi Udaya

ಕೊಯ್ಯೂರು ಸ. ಪ. ಪೂ. ಕಾಲೇಜಿನಲ್ಲಿ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!