29.3 C
ಪುತ್ತೂರು, ಬೆಳ್ತಂಗಡಿ
June 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ಅ.ಹಿ.ಪ್ರಾ. ಶಾಲೆಯಲ್ಲಿ ಯೋಗ ಶಿಬಿರ ಉದ್ಘಾಟನೆ

ಬೆಳ್ತಂಗಡಿ: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪೂರ್ವಭಾವಿಯಾಗಿ ನಡೆಯುವ ಒಂದು ವಾರದ ಯೋಗ ತರಬೇತಿ ಶಿಬಿರವನ್ನು ಜೂ.16 ರಂದು ಗಣ್ಯರ ಸಮ್ಮುಖದಲ್ಲಿ ಸಾಂಕೇತಿಕವಾಗಿ ಉಜಿರೆ ಎಸ್‌ಡಿಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉದ್ಘಾಟಿಸಲಾಯಿತು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಎಸ್.ಡಿ.ಎಂ ನ್ಯಾಚುರೋಪತಿ ಕಾಲೇಜಿನ ವೈದ್ಯಶಾಸ್ತ್ರದ ಉಪನ್ಯಾಸಕಿ ಡಾ. ರೆನಿತಾ ಮಾತನಾಡಿ “ಯೋಗ ಎಂಬುವುದು ಅತ್ಯಂತ ಪ್ರಾಚೀನವಾದದ್ದು,ಇದು ಆರೋಗ್ಯಕರ ಜೀವನ ಸಾಗಿಸಲು ಇರುವ ಸುಲಭ ಮಾರ್ಗ” ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಬಾಲಕೃಷ್ಣ ನಾಯ್ಕ ವಹಿಸಿ ಮಾತನಾಡಿ “ಮಕ್ಕಳಲ್ಲಿ ಏಕಾಗ್ರತೆ ಬರಲು ಯೋಗ ಸಹಕಾರಿಯಾಗಿದೆ, ಒಂದು ವಾರಗಳ ಕಾಲ ನಡೆಯಲಿರುವ ಈ ಶಿಬಿರ ಉತ್ತಮ ರೀತಿಯಲ್ಲಿ ನಡೆಯಲಿ” ಎಂದು ಶುಭ ಹಾರೈಸಿದರು.

ವೇದಿಕೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿಗಳಾದ ಅನಘಾ ಭಟ್ ಹಾಗೂ ಸಾನಿಕ ಉಪಸ್ಥಿತರಿದ್ದರು. ಶಾಲಾ ಸಹ ಶಿಕ್ಷಕಿ ಗೀತಾ ಸ್ವಾಗತಿಸಿದರು. ಸಹ ಶಿಕ್ಷಕಿ ರೇವತಿ ವಂದಿಸಿದರು.
ಶಾಲಾ ದೈಹಿಕ ಶಿಕ್ಷಕ ಪ್ರಜ್ವಲ್ ಧನ್ಯವಾದವಿತ್ತರು.

Related posts

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಸ್ವಾಮಿಗೆ ಪಾದಾಭಿಷೇಕ

Suddi Udaya

ಪಡಂಗಡಿ: ಕಾರು ಡಿಕ್ಕಿ ಬೈಕ್ ಸವಾರನಿಗೆ ಗಂಭೀರ ಗಾಯ: ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ಎಂಬಲ್ಲಿ ಘಟನೆ

Suddi Udaya

ಸ್ಟ್ಯಾಂಡ್‌ ಅಪ್‌ ಇಂಡಿಯಾ ಯೋಜನೆ ಫಲಾನುಭವಿಗಳಲ್ಲಿ ಕರ್ನಾಟಕ ಮುಂಚೂಣಿ : ಕೇಂದ್ರ ಸರ್ಕಾರದಿಂದ ಎಸ್‌ಸಿ-ಎಸ್‌ಟಿ, ಮಹಿಳೆಯರಿಗೆ 2,946 ಕೋಟಿ ಸಾಲ; ಸಂಸದ ಕ್ಯಾ. ಚೌಟ ಶ್ಲಾಘನೆ

Suddi Udaya

ಪುಂಜಾಲಕಟ್ಟೆಯಲ್ಲಿ ಸ್ವಸ್ತಿಕ್ ಇಂಡಿಯಾ ಕಪ್ ಗೋಲ್ಡ್ ಮೆಡಲ್ ಕಬಡ್ಡಿ ಉತ್ಸವ: ಸಾಧಕರಿಗೆ ಸ್ವಸ್ತಿಕ್ ಸಂಭ್ರಮ ಪುರಸ್ಕಾರ

Suddi Udaya

ಮಂಜೇಶ್ವರ ವಿಧಾನಸಭಾ ಕ್ಷೇತ್ರ ಚುನಾವಣೆ: ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ರವರ ಪರವಾಗಿ ಎಂಎಲ್‌ಸಿ ಕಿಶೋರ್ ಕುಮಾರ್ ಪುತ್ತೂರು ಮತಯಾಚನೆ

Suddi Udaya

ಧರ್ಮಸ್ಥಳ : ಕೂಟದ ಕಲ್ಲು ನಿವಾಸಿ ನಿತೇಶ್ ನಿಧನ

Suddi Udaya
error: Content is protected !!