23.8 C
ಪುತ್ತೂರು, ಬೆಳ್ತಂಗಡಿ
August 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ಅ.ಹಿ.ಪ್ರಾ. ಶಾಲೆಯಲ್ಲಿ ಯೋಗ ಶಿಬಿರ ಉದ್ಘಾಟನೆ

ಬೆಳ್ತಂಗಡಿ: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪೂರ್ವಭಾವಿಯಾಗಿ ನಡೆಯುವ ಒಂದು ವಾರದ ಯೋಗ ತರಬೇತಿ ಶಿಬಿರವನ್ನು ಜೂ.16 ರಂದು ಗಣ್ಯರ ಸಮ್ಮುಖದಲ್ಲಿ ಸಾಂಕೇತಿಕವಾಗಿ ಉಜಿರೆ ಎಸ್‌ಡಿಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉದ್ಘಾಟಿಸಲಾಯಿತು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಎಸ್.ಡಿ.ಎಂ ನ್ಯಾಚುರೋಪತಿ ಕಾಲೇಜಿನ ವೈದ್ಯಶಾಸ್ತ್ರದ ಉಪನ್ಯಾಸಕಿ ಡಾ. ರೆನಿತಾ ಮಾತನಾಡಿ “ಯೋಗ ಎಂಬುವುದು ಅತ್ಯಂತ ಪ್ರಾಚೀನವಾದದ್ದು,ಇದು ಆರೋಗ್ಯಕರ ಜೀವನ ಸಾಗಿಸಲು ಇರುವ ಸುಲಭ ಮಾರ್ಗ” ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಬಾಲಕೃಷ್ಣ ನಾಯ್ಕ ವಹಿಸಿ ಮಾತನಾಡಿ “ಮಕ್ಕಳಲ್ಲಿ ಏಕಾಗ್ರತೆ ಬರಲು ಯೋಗ ಸಹಕಾರಿಯಾಗಿದೆ, ಒಂದು ವಾರಗಳ ಕಾಲ ನಡೆಯಲಿರುವ ಈ ಶಿಬಿರ ಉತ್ತಮ ರೀತಿಯಲ್ಲಿ ನಡೆಯಲಿ” ಎಂದು ಶುಭ ಹಾರೈಸಿದರು.

ವೇದಿಕೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿಗಳಾದ ಅನಘಾ ಭಟ್ ಹಾಗೂ ಸಾನಿಕ ಉಪಸ್ಥಿತರಿದ್ದರು. ಶಾಲಾ ಸಹ ಶಿಕ್ಷಕಿ ಗೀತಾ ಸ್ವಾಗತಿಸಿದರು. ಸಹ ಶಿಕ್ಷಕಿ ರೇವತಿ ವಂದಿಸಿದರು.
ಶಾಲಾ ದೈಹಿಕ ಶಿಕ್ಷಕ ಪ್ರಜ್ವಲ್ ಧನ್ಯವಾದವಿತ್ತರು.

Related posts

ಪೆರಿಂಜೆಯ ಶಾಲೆಯಲ್ಲಿ ಉಜಿರೆಯ ಶ್ರೀ ಧ. ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Suddi Udaya

ಉಜಿರೆ : ಪ್ರಗತಿ ಮಹಿಳಾ ಮಂಡಲ ನೇತೃತ್ವದಲ್ಲಿ ಚಿಲಿಪಿಲಿ 2024 ಬೇಸಿಗೆ ಶಿಬಿರದ ಸಮಾರೋಪ

Suddi Udaya

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವತಿಯಿಂದ ಶಾಸಕರಿಗೆ ಅಭಿನಂದನೆ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ ಐತಾಳ್ ರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

Suddi Udaya

ಶಿಬಾಜೆ: ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಪಿಕಪ್ ಡಿಕ್ಕಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಶಾಸಕ ಹರೀಶ್ ಪೂಂಜರವರಿಂದ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿಪೀಠದ ಪೀಠಾಧಿಪತಿ ಶ್ರೀ ಪ್ರಣವಾನಂದ ಸ್ವಾಮೀಜಿರವರ ಭೇಟಿ

Suddi Udaya
error: Content is protected !!