ಗುರುವಾಯನಕೆರೆ : ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ, ಯೋಜನೆ ವ್ಯಾಪ್ತಿಯ ಗುರುವಾಯನಕೆರೆ ವಲಯದ ಶೌರ್ಯ ವಿಪತ್ತು ನಿರ್ವಹಣಾ ತಂಡದವರಿಂದ ಜೂ. 14ರಂದು ಕಾಪಿನಡ್ಕ ಸ.ಕಿಪ್ರಾ. ಶಾಲಾ ಕೈತೋಟದಲ್ಲಿ ತರಕಾರಿ ಬೀಜಗಳ ನಾಟಿ ಮಾಡಲಾಯಿತು.
ಶಾಲಾ ವಠಾರದಲ್ಲಿ ಹಣ್ಣಿನ ಗಿಡಗಳನ್ನು ನೆಡಲಾಯಿತು. ಅಕ್ಷರ ದಾಸೋಹ ಕೊಠಡಿ ಬಳಿ ಹುಲ್ಲು ತೆಗೆದು ಸ್ವಚ್ಛ ಗೊಳಿಸಲಾಯಿತು. ಈ ವೇಳೆ ಕ್ಯಾಪ್ಟನ್ ವಿಶ್ವನಾಥ್ ರವರು ಹಣ್ಣಿನ ಗಿಡ ಹಾಗೂ ತರಕಾರಿ ಬೀಜಗಳನ್ನು ಉಚಿತವಾಗಿ ನೀಡಿದರು.
ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಶಾಂತಿ , ಎಸ್.ಡಿ.ಎಂ.ಸಿ ಅಧ್ಯಕ್ಷ ಸುರೇಶ್ ಪೂಜಾರಿ, ಬಳಂಜ ವಲಯದ ಮೇಲ್ವಿಚಾರಕಿ ಪದ್ಮಾವತಿ ತಂಡದ ಸಂಯೋಜಕಿ ಸವಿತಾ ಪಿರೇರಾ, ಸೇವಾ ಪ್ರತಿನಿಧಿ ಭಾರತಿ, ಪೋಷಕರು, ಹಾಗೂ ಮಕ್ಕಳು ಉಪಸ್ಥಿತರಿದ್ದರು.
ಘಟಕದ 14 ಮಂದಿ ಸ್ವಯಂ ಸೇವಕರು ಭಾಗವಹಿಸಿದರು.













