27 C
ಪುತ್ತೂರು, ಬೆಳ್ತಂಗಡಿ
June 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜಪಾನ್ ದೇಶದ ಸಾಂಸ್ಕೃತಿಕ ವಿನಿಮಯ ಉತ್ಸವದಲ್ಲಿ ಉಜಿರೆ ಎಸ್‌ಡಿಎಂ ನ ವಿದ್ಯಾರ್ಥಿಗಳು

ಉಜಿರೆ: ಜಪಾನ್ ದೇಶದಲ್ಲಿ ಆಯೋಜಿಸಲಾಗಿರುವ “ಕಲ್ಚರಲ್ ಎಕ್ಸ್ಚೇಂಜ್ ಫೆಸ್ಟ್ ” ಕಾರ್ಯಕ್ರಮಕ್ಕೆ ಎಸ್‌ಡಿಎಂ ಶಿಕ್ಷಣ ಸಂಸ್ಥೆಯ ಇಬ್ಬರು ಪ್ರತಿಭಾವಂತ ವಿದ್ಯಾರ್ಥಿಗಳು ಸಿಂಚನ ಮೂಡುಕೋಡಿ (ತೃತೀಯ ಪದವಿ), ಸಂಜನಾ (ದ್ವಿತೀಯ ಪದವಿ ) ಹಾಗೂ ಕಾಲೇಜಿನ ವಾಣಿಜ್ಯ ಉಪನ್ಯಾಸಕಿ ಮಾಲಿನಿ ಅಂಚನ್ ಆಯ್ಕೆಯಾಗಿದ್ದು, ಶಿಕ್ಷಣ ಸಂಸ್ಥೆ ಹಾಗೂ ಕರಾವಳಿ ಭಾಗಕ್ಕೆ ಹೆಮ್ಮೆಯ ವಿಷಯವಾಗಿದೆ.

ಜಪಾನ್ ನಲ್ಲಿ ವಿದ್ಯಾರ್ಥಿಗಳಿಂದ ಯಕ್ಷಗಾನ “ರಾವಣ ವದೆ ಕಂಸ ವದೆ” ಪ್ರಸಂಗ ಪ್ರದರ್ಶನ ನೀಡಲಿದ್ದು ಕಾಲೇಜಿನ ಹಾಗೂ ಎಸ್‌ಡಿಎಂ ಕಲಾಕೇಂದ್ರದ ಕೀರ್ತಿ ಪತಾಕೆಯನ್ನು ಎತ್ತಿ ಹಿಡಿಯಲಿದ್ದಾರೆ.
ಭಾರತ ಮತ್ತು ಜಪಾನ್ ದೇಶಗಳ ನಡುವಿನ ಸಾಂಸ್ಕೃತಿಕ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವ ಉದ್ದೇಶದಿಂದ ಆಯೋಜಿಸಲಾಗಿರುವ ಈ ಉತ್ಸವದಲ್ಲಿ ಭಾರತೀಯ ಸಂಸ್ಕೃತಿ, ಕಲೆ, ಪರಂಪರೆ ಹಾಗೂ ಶಿಕ್ಷಣ ಕ್ಷೇತ್ರದ ವೈಶಿಷ್ಟ್ಯಗಳನ್ನು ಪರಿಚಯಿಸುವ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಆಯ್ಕೆಯಾದ ವಿದ್ಯಾರ್ಥಿಗಳು ತಮ್ಮ ಅನುಭವ ಮತ್ತು ಜ್ಞಾನವನ್ನು ಅಂತರರಾಷ್ಟ್ರೀಯ ವೇದಿಕೆಯಲ್ಲಿ ಹಂಚಿಕೊಳ್ಳಲಿದ್ದಾರೆ.

ಈ ಸಂದರ್ಭದಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆ, ಎಸ್‌ಡಿಎಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ಸತೀಶಚಂದ್ರ ಎಸ್, ಶ್ರೀಮತಿ ಸೋನಿಯಾ ಯಶೋವರ್ಮ, ಪೂರಣ್ ವರ್ಮಾ, ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಶ್ವನಾಥ ಪಿ, ಶ್ರೀಮತಿ ಮನೋರಮಾ ಭಟ್, ಹಾಗೂ ಯಕ್ಷ ಗುರು ಅರುಣ್ ಕುಮಾರ್ ಧರ್ಮಸ್ಥಳ ಹಾಗೂ ಆಡಳಿತ ಮಂಡಳಿ ಹಾಗೂ ಅಧ್ಯಾಪಕ ವರ್ಗ ಹಾಗೂ ವಿದ್ಯಾರ್ಥಿಗಳು ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹದೊಂದಿಗೆ ಶುಭಾಶಯ ಕೋರಿದ್ದಾರೆ.

Related posts

ಮುಂಡಾಜೆ: ಕೃಷಿಕ ಸದಾಶಿವ ನೇಕಾರ ನಿಧನ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ರಾಷ್ಟ್ರಧ್ವಜಕ್ಕೆ ಅಪಮಾನ ಮಾಡುವುದನ್ನು ತಡೆಯಲು ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮನವಿ

Suddi Udaya

ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ವತಿಯಿಂದ ಕೊಕ್ಕಡ ಎಂಡೊಸಲ್ಪಾನ್ ಕೇಂದ್ರದಲ್ಲಿ ಇಂದಿರಾ ಗಾಂಧಿ ಜನ್ಮದಿನ ಆಚರಣೆ

Suddi Udaya

ನಿಡ್ಲೆ ನಾಗೇಶ್ ಕುಮಾರ್ ಕೆ.ಎಂ ಅಭಿಮಾನಿ ಬಳಗದಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ, ಕೊಡೆ ಹಾಗೂ ಹಣ್ಣು ಹಂಪಲು ಸಸಿಗಳ ವಿತರಣೆ

Suddi Udaya

ಪುಂಜಾಲಕಟ್ಟೆ ಶ್ರೀ ಮುರುಘೇಂದ್ರ ಮಿತ್ರ ಮಂಡಳಿಯ ಸಭಾಂಗಣದಲ್ಲಿ ಯಕ್ಷಗಾನ ಬಣ್ಣಗಾರಿಕೆ ಶಿಬಿರ

Suddi Udaya
error: Content is protected !!