27 C
ಪುತ್ತೂರು, ಬೆಳ್ತಂಗಡಿ
June 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಶ್ರೀ ಧ . ಮಂ.ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೃತ್ಯ ಹಾಗೂ ಸಂಗೀತ ಉದ್ಘಾಟನೆ ಸಮಾರಂಭ

ಧರ್ಮಸ್ಥಳ: ಶ್ರೀ .ಧ .ಮ .ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಪ್ರಸಕ್ತ ವರ್ಷದ ಭರತನಾಟ್ಯ ಹಾಗೂ ಸಂಗೀತ ತರಗತಿಗಳ ಉದ್ಘಾಟನಾ ಸಮಾರಂಭ ನೆರವೇರಿತು.

ಮುಖ್ಯ ಅತಿಥಿಗಳಾಗಿ ಸಂಗೀತ ಹಾಗೂ ಯಕ್ಷಗಾನ ಪ್ರೇಮಿಯಾಗಿರುವ ಕೆ ಕೃಷ್ಣ ಆಚಾರ್ಯ ಆಗಮಿಸಿದ್ದರು. ಇವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಮಕ್ಕಳಿಗೆ ಯಾವತ್ತೂ ಶಿಸ್ತು ಎಲ್ಲಾ ಕ್ಷೇತ್ರಗಳಲ್ಲೂ ಬಹಳ ಮುಖ್ಯ ವಾಗಿದೆ. ವಿದ್ಯೆಯ ಜೊತೆಗೆ ಸಹಪಠ್ಯ ಚಟುವಟಿಕೆ ಯಲ್ಲಿ ಹೆಚ್ಚು ಭಾಗವಹಿಸಿ ತೃಪ್ತಿ ಯನ್ನು ಪಡೆದುಕೊಳ್ಳಬೇಕು ಎಂದು ಹಿತವಚನವನ್ನು ನೀಡಿದರು.

ಶಾಲಾ ನೃತ್ಯ ತರಬೇತಿ ಗುರುಗಳಾದ ಕುಮಾರಿ ಕೃತಿಕಾ ಕೆ ಎಸ್ ಮಕ್ಕಳಿಗೆ ಶುಭಾಶಯ ಕೋರಿದರು. ಸಂಗೀತ ತರಬೇತಿ ನೀಡುವ ಗುರುಗಳಾದ ಶ್ರೀಮತಿ ಸುಗುಣ ವಿ. ಕೆ. ಆಚಾರ್ಯ ರವರು ಮಕ್ಕಳಿಗೆ ಶುಭಾಶಯ ಕೋರಿ ಪೋಷಕರ ಪಾತ್ರವನ್ನು ವಿವರಿಸಿದರು. ಶಾಲಾ ಮುಖ್ಯಶಿಕ್ಷಕಿ ಶ್ರೀಮತಿ ಪರಿಮಳ ಎಂ ವಿ ರವರು ಮಾರ್ಗದರ್ಶನ ನೀಡಿದರು. ಅದಿತಿ ನಿರ್ವಹಿಸಿದ ಕಾರ್ಯಕ್ರಮದಲ್ಲಿ ಅಧ್ವಿಕಾ ಸ್ವಾಗತಿಸಿ ,ಕುಮಾರಿ ಸಾನಿಧ್ಯ ಎಸ್ ಪಿ ಕಾರ್ಯಕ್ರಮದ ವಂದನಾರ್ಪಣೆಗೈದರು. ಸೌಹಾರ್ದ ಗೌಡ ಅತಿಥಿಗಳ ಪರಿಚಯ ಮಾಡಿಕೊಟ್ಟರು. ಪೋಷಕರು ಹಾಗೂ ಶಿಕ್ಷಕರ ಸಹಭಾಗಿತ್ವದಲ್ಲಿ ಕಾರ್ಯಕ್ರಮ ಉತ್ತಮ ರೀತಿಯಲ್ಲಿ ನೆರವೇರಿತು.

Related posts

ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯದಲ್ಲಿ ಎರಡನೇ ಸ್ಥಾನ ಪಡೆದ ಚಿನ್ಮಯ್ ಗೆ ಡಿ ವೀರೇಂದ್ರ ಹೆಗ್ಗಡೆ ದಂಪತಿಗಳು, ಹಾಗೂ ಡಿ. ಹರ್ಷೇಂದ್ರ ಕುಮಾರ್ ರವರಿಂದ ಅಭಿನಂದನೆ

Suddi Udaya

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣರ ಸಮಾವೇಶ

Suddi Udaya

ಬೆಳ್ತಂಗಡಿ ಗೃಹ ರಕ್ಷಕ ದಳದ ಘಟಕದ ವಾರದ ಕವಾಯತಿಗೆ ಡಾ. ಮುರಳಿ ಮೋಹನ್ ಚೂಂತಾರು ಭೇಟಿ

Suddi Udaya

ಮುಂಡಾಜೆ : ದಿ. ಮಹಾಬಲ ರೈ ಕಲ್ಲಹಿತ್ತಿಲು ಅವರ ಸ್ಮರಣಾರ್ಥ ಬಸ್ಸು ತಂಗುದಾಣ ಲೋಕಾರ್ಪಣೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ವಿಷು ಕಣಿ ದರ್ಶನ, ವಿಷು ಹಬ್ಬ ವಿಶೇಷ ಪೂಜೆ

Suddi Udaya

ಶಿಶಿಲ: ಬದ್ರಿಜಾಲು ನಿವಾಸಿ ನಾರ್ಣಪ್ಪ ಗೌಡ ನಿಧನ

Suddi Udaya
error: Content is protected !!