July 31, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿ ಸ.ಉ.ಪ್ರಾ. ಶಾಲೆಯಲ್ಲಿ ದಾನಿಗಳಿಂದ ಉಚಿತ ಬ್ಯಾಗ್ ವಿತರಣೆ

ನಾರಾವಿ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ , ದಾನಿಗಳಿಂದ ಉಚಿತವಾಗಿ ಬ್ಯಾಗ್ ವಿತರಣೆ ಕಾರ್ಯಕ್ರಮ ನಡೆಯಿತು.

ಶ್ರೀಮತಿ ಲಕ್ಷ್ಮಿ ಪ್ರಶಾಂತ್ ಕಿಣಿಯವರು ಈ ಶಾಲೆಯ ಹಳೆ ವಿದ್ಯಾರ್ಥಿಯಾಗಿದ್ದುಕೊಂಡು ಈಗ ಬೆಂಗಳೂರಿನಲ್ಲಿ ಉತ್ತಮ ಉದ್ಯೋಗವನ್ನು ಪಡೆದು ಅಲ್ಲಿಯೇ ನೆಲೆಸಿದ್ದು ತನ್ನ ಹುಟ್ಟೂರಿನಲ್ಲಿ ಕಲಿತ ಶಾಲೆಯನ್ನು ನೆನಪಿಸಿ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸುಮಾರು ಒಂದು ಲಕ್ಷ ಮೌಲ್ಯದ ಉತ್ತಮ ಗುಣಮಟ್ಟದ ಬ್ಯಾಗನ್ನು ಪ್ರಾಥಮಿಕ ಹಾಗೂ ಪ್ರೌಢ ವಿಭಾಗದ ವಿದ್ಯಾರ್ಥಿಗಳಿಗೆ ಕುಟುಂಬ ಸಮೇತರಾಗಿ ಆಗಮಿಸಿ ವಿತರಿಸಿದರು.

ಶಾಲಾ ಅಭಿವೃದ್ಧಿ ಸಮಿತಿಯವರು ಅವರನ್ನು ಗೌರವದಿಂದ ಸನ್ಮಾನಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಅನ್ವರ್ ವಹಿಸಿದ್ದರು.ಅತಿಥಿಗಳಾಗಿ ಉದಯಕುಮಾರ್ ಹೆಗ್ಡೆ, ಪ್ರಶಾಂತ್ ಕಿಣಿ, ಶ್ರೀಮತಿ ಲಕ್ಷ್ಮೀ ಪ್ರಶಾಂತ್ ಕಿಣೆ, ಸೂರ್ಯನಾರಾಯಣ ಪೈ, ಶ್ರೀಮತಿ ದೀಪ, ಸುಧಾಕರ್ ನಾಯಕ್, ವಿನಯ ಹೆಗ್ಡೆ ಹಳೆ ವಿದ್ಯಾರ್ಥಿ, ಜನ ಸೇವಾ ಟ್ರಸ್ಟ್ ಅಧ್ಯಕ್ಷರು ಅಭಿಜಿತ್, ಹರ್ಷಿತ್ , ಶಾಲೆಗೆ ಟ್ಯೂಬ್ ಲೈಟ್ ನೀಡಿದ ದಾನಿಗಳು ಪ್ರಭಾಕರ್, ನಿವೃತ್ತ ದೈಹಿಕ ಶಿಕ್ಷಕರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಪ್ರೇಮಕುಮಾರಿ ಪಿ . ನಿವೃತ್ತ ಶಿಕ್ಷಕಿಯವರು ಉದ್ಘಾಟಿಸಿದರು. ಮುಖ್ಯ ಶಿಕ್ಷಕರು ಸುಶೀಲ ಹೆಗ್ಡೆ ಸ್ವಾಗತಿಸಿದರು. ಶಿಕ್ಷಕಿ ಶಿಲ್ಪ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಮಮತಾ.ಬಿ. ಧನ್ಯವಾದ ಕೋರಿದರು.

Related posts

ಮಾ.16: ಹೊಕ್ಕಾಡಿಗೋಳಿ ವೀರ – ವಿಕ್ರಮ ಕಂಬಳ: ಕೊಡಂಗೆಯಲ್ಲಿ ಶಾಶ್ವತ ಕರೆಗೆ ಭೂಮಿಪೂಜೆ

Suddi Udaya

ಗುತ್ತಿಗೆದಾರ ನಾಪತ್ತೆಯಾಗಿದ್ದಾರೆ: ರಸ್ತೆ ಬದಿ ಬ್ಯಾನರ್ ಹಾಕಿ ಸಾರ್ವಜನಿಕರ ಆಕ್ರೋಶ

Suddi Udaya

ಕಸ ಎಸೆದವರಿಗೆ ದಂಡ ಹಾಕಿದ ಮಡಂತ್ಯಾರು ಗ್ರಾ.ಪಂ.

Suddi Udaya

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರೆಖ್ಯಕ್ಕೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ: ವಿವಿಧ ಕಾಮಗಾರಿಗಳ ಪರಿಶೀಲನೆ

Suddi Udaya

ಎಸ್ ಕೆ ಎಸ್ ಎಸ್ ಎಫ್ ಕಕ್ಕಿಂಜೆ ಶಾಖೆಯಿಂದ ಕನ್ನಡ ರಾಜ್ಯೋತ್ಸವ ಆಚರಣೆ: ಮಾದಕ ವ್ಯಸನ ಮುಕ್ತ ಪ್ರತಿಜ್ಞಾ ವಿಧಿ ಸ್ವೀಕಾರ

Suddi Udaya
error: Content is protected !!