September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡ್ಡಂದಡ್ಕ ಸರಿಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ

ವೇಣೂರು: ಪಡ್ಡoದಡ್ಕ ಶಾಲೆಯಲ್ಲಿ ಉಚಿತ ಬರೆಯುವ ಪುಸ್ತಕಗಳನ್ನು ಪೆರಿಂಜೆಯ ಸಾರಾ ಇಬ್ರಾಹಿಂ ಪ್ಯಾಮಿಲಿ ಟ್ರಸ್ಟ್ ನ ವತಿಯಿಂದ ಜೂ.15 ರಂದು ವಿತರಿಸಲಾಯಿತು.

ಶಾಲಾ ಸಭಾಭವನದಲ್ಲಿ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂಸಿ ಅಧ್ಯಕ್ಷ ಪಿಎಸ್ ಶಬ್ಬೀರ್ ವಹಿಸಿದ್ದರು. ಶಾಲಾ ಸ್ಥಾಪಕ ಸದಸ್ಯ ಶಂಕರ್ ಭಟ್ ಬಾಲ್ಯ ಮಾತಾಡಿ, ಈ ವರ್ಷದಿಂದ ಶಾಲೆಯಲ್ಲಿ ಎಲ್ ಕೆಜಿ ಯಿಂದ 5 ನೇ ತರಗತಿಯವರೆಗೆ ಆಂಗ್ಲ ತರಗತಿ ಆರಂಭವಾಗಿದ್ದು ಇಬ್ಬರು ಪದವೀಧರ ಟೀಚರ್ ನ್ನು ಸರಕಾರದ ವತಿಯಿಂದ ಮಂಜೂರು ಮಾಡಲಾಗಿದೆ. ಸರಕಾರಿ ಶಾಲೆಯನ್ನು ಉಳಿಸುವ ನಿಟ್ಟಿನಲ್ಲಿ ಹೆತ್ತವರು ದೂರದ ಇಂಗ್ಲಿಸ್ ಮೀಡಿಯಂ ಶಾಲೆಗೆ ಪ್ರತಿಷ್ಠೆಗೋಸ್ಕರ ಕಳಿಸದೆ ಊರಿನ ಶಾಲೆಗೆ ಕಳಿಸಿದರೆ ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸ, ಸರಕಾರದ ಸೌಲಭ್ಯ ಮತ್ತು ಒಳ್ಳೆಯ ಸಂಸ್ಕಾರ ಸಿಗುತ್ತೆ ಎಂದರು.

ಸಾರಾ ಇಬ್ರಾಹಿಂ ಟ್ರಸ್ಟ್ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ ಮಾತಾಡಿ, ಟ್ರಸ್ಟ್ ವಿದ್ಯೆ ಬಗ್ಗೆ ಪ್ರಥಮ ಆಧ್ಯತೆ ನೀಡಿತಿದ್ದು ಈ ನಿಟ್ಟಿನಲ್ಲಿ ಯೋಜನೆಗಳನ್ನು ಹಾಕಿಕೊಂಡು ಕಾರ್ಯಚರಿಸುತ್ತಿದೆ. ಸರಕಾರಿ ಶಾಲಾ ಮಕ್ಕಳಿಗೆ ಉಚಿತವಾಗಿ ಪುಸ್ತಕ ವಿತರಣೆ ಮಾಡಿದ್ದು ಸಂತೋಷವಾಗುತಿದೆ ಎಂದರು.
ಈ ಶಾಲಾ ಸ್ಥಾಪಕ ಸದಸ್ಯ ಇಸ್ಮಾಯಿಲ್ ಗಾಂಧಿನಗರ, ಪತ್ರಕರ್ತ ಎಚ್ ಮಹಮ್ಮದ್ ವೇಣೂರು, ಅರುಣ್ ಪೂಜಾರಿ ಜಾರಿಗೆದಡಿ, ಉಮರ್.ಕೆ, ರಹಿಮಾನ್ ಪೆರಿಂಜೆ ಮಾತಾಡಿದರು. ಮುಖ್ಯ ಶಿಕ್ಷಕಿ ಕಮಲಮ್ಮ ಪ್ರಾಸ್ತಾವಿಕವಾಗಿ ಮಾತಾಡಿ ಸ್ವಾಗತಿಸಿದರು.
ಎಸ್ಡಿಎಂಸಿ ಉಪಾಧ್ಯಕ್ಷೆ ಶ್ರೀಮತಿ ರೇಖಾ, ಪೆರಿಂಜೆಯ ಬುಲೆಟ್ ಖಾದರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಟ್ರಸ್ಟ್ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ ಹಾಗೂ ಶಾಲಾ ಅಭಿವೃದ್ಧಿ ಯೋಜನೆಗಳಲ್ಲಿ ಸಹಕರಿಸಿದ ಜಾರಿಗೆದಡಿ ಅರುಣ್ ಪೂಜಾರಿಯವರನ್ನು ಶಾಲು ಹೊದಿಸಿ ಗೌರವಿಸಲಾಯಿತು.

ಶಿಕ್ಷಕಿ ಶ್ರೀಮತಿ ದಾಕ್ಷಾಯಿಣಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ವಿನೋದ ಕುಮಾರಿ ವಂದಿಸಿದರು.

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಜಿಲ್ಲಾ ಪಂಚಾಯತ್ ವ್ಯಾಪ್ತಿಗೆ ಭಾರತ್ ಜೋಡೋ ಯುವ ಸಂಘದ ಉಸ್ತುವಾರಿಗಳ ನೇಮಕ

Suddi Udaya

ಉರುವಾಲುಪದವು ಶ್ರೀ ಮಹಮ್ಮಾಯಿ ದೇವಸ್ಥಾನದ ಸ್ಥಳೀಯ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಗಿಡ ನೆಡುವ ಹಾಗೂ ಸಸಿ ವಿತರಣಾ ಕಾರ್ಯಕ್ರಮ

Suddi Udaya

ಸುದ್ದಿ ಉದಯ ವಾರಪತ್ರಿಕೆಯ ವತಿಯಿಂದ ಮುಳಿಯ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಶ್ರೀ ಕೃಷ್ಣಜನ್ಮಾಷ್ಟಮಿ ಪ್ರಯುಕ್ತ ಹಮ್ಮಿಕೊಂಡ ‘ರಾಧೆ-ಕೃಷ್ಣ’ ಪೋಟೋ ಸ್ಪರ್ಧಾ ವಿಜೇತ ಪುಟಾಣಿ ಮಕ್ಕಳಿಗೆ ಬಹುಮಾನ ವಿತರಣೆ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಕುಕ್ಕಾವು ಸೇತುವೆ ಬಳಿ ಧ್ಯಾನಸಕ್ತ ಸದಾಶಿವನ 12 ಅಡಿ ಎತ್ತರದ ಪ್ರತಿಮೆ ಲೋಕಾರ್ಪಣೆ

Suddi Udaya

ಗುರುವಾಯನಕೆರೆ: ಶಕ್ತಿನಗರದಲ್ಲಿ ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲೇ ಹರಿದ ನೀರು

Suddi Udaya

ಪುದುವೆಟ್ಟು ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya
error: Content is protected !!