27 C
ಪುತ್ತೂರು, ಬೆಳ್ತಂಗಡಿ
June 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡ್ಡಂದಡ್ಕ ಸರಿಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ

ವೇಣೂರು: ಪಡ್ಡoದಡ್ಕ ಶಾಲೆಯಲ್ಲಿ ಉಚಿತ ಬರೆಯುವ ಪುಸ್ತಕಗಳನ್ನು ಪೆರಿಂಜೆಯ ಸಾರಾ ಇಬ್ರಾಹಿಂ ಪ್ಯಾಮಿಲಿ ಟ್ರಸ್ಟ್ ನ ವತಿಯಿಂದ ಜೂ.15 ರಂದು ವಿತರಿಸಲಾಯಿತು.

ಶಾಲಾ ಸಭಾಭವನದಲ್ಲಿ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂಸಿ ಅಧ್ಯಕ್ಷ ಪಿಎಸ್ ಶಬ್ಬೀರ್ ವಹಿಸಿದ್ದರು. ಶಾಲಾ ಸ್ಥಾಪಕ ಸದಸ್ಯ ಶಂಕರ್ ಭಟ್ ಬಾಲ್ಯ ಮಾತಾಡಿ, ಈ ವರ್ಷದಿಂದ ಶಾಲೆಯಲ್ಲಿ ಎಲ್ ಕೆಜಿ ಯಿಂದ 5 ನೇ ತರಗತಿಯವರೆಗೆ ಆಂಗ್ಲ ತರಗತಿ ಆರಂಭವಾಗಿದ್ದು ಇಬ್ಬರು ಪದವೀಧರ ಟೀಚರ್ ನ್ನು ಸರಕಾರದ ವತಿಯಿಂದ ಮಂಜೂರು ಮಾಡಲಾಗಿದೆ. ಸರಕಾರಿ ಶಾಲೆಯನ್ನು ಉಳಿಸುವ ನಿಟ್ಟಿನಲ್ಲಿ ಹೆತ್ತವರು ದೂರದ ಇಂಗ್ಲಿಸ್ ಮೀಡಿಯಂ ಶಾಲೆಗೆ ಪ್ರತಿಷ್ಠೆಗೋಸ್ಕರ ಕಳಿಸದೆ ಊರಿನ ಶಾಲೆಗೆ ಕಳಿಸಿದರೆ ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸ, ಸರಕಾರದ ಸೌಲಭ್ಯ ಮತ್ತು ಒಳ್ಳೆಯ ಸಂಸ್ಕಾರ ಸಿಗುತ್ತೆ ಎಂದರು.

ಸಾರಾ ಇಬ್ರಾಹಿಂ ಟ್ರಸ್ಟ್ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ ಮಾತಾಡಿ, ಟ್ರಸ್ಟ್ ವಿದ್ಯೆ ಬಗ್ಗೆ ಪ್ರಥಮ ಆಧ್ಯತೆ ನೀಡಿತಿದ್ದು ಈ ನಿಟ್ಟಿನಲ್ಲಿ ಯೋಜನೆಗಳನ್ನು ಹಾಕಿಕೊಂಡು ಕಾರ್ಯಚರಿಸುತ್ತಿದೆ. ಸರಕಾರಿ ಶಾಲಾ ಮಕ್ಕಳಿಗೆ ಉಚಿತವಾಗಿ ಪುಸ್ತಕ ವಿತರಣೆ ಮಾಡಿದ್ದು ಸಂತೋಷವಾಗುತಿದೆ ಎಂದರು.
ಈ ಶಾಲಾ ಸ್ಥಾಪಕ ಸದಸ್ಯ ಇಸ್ಮಾಯಿಲ್ ಗಾಂಧಿನಗರ, ಪತ್ರಕರ್ತ ಎಚ್ ಮಹಮ್ಮದ್ ವೇಣೂರು, ಅರುಣ್ ಪೂಜಾರಿ ಜಾರಿಗೆದಡಿ, ಉಮರ್.ಕೆ, ರಹಿಮಾನ್ ಪೆರಿಂಜೆ ಮಾತಾಡಿದರು. ಮುಖ್ಯ ಶಿಕ್ಷಕಿ ಕಮಲಮ್ಮ ಪ್ರಾಸ್ತಾವಿಕವಾಗಿ ಮಾತಾಡಿ ಸ್ವಾಗತಿಸಿದರು.
ಎಸ್ಡಿಎಂಸಿ ಉಪಾಧ್ಯಕ್ಷೆ ಶ್ರೀಮತಿ ರೇಖಾ, ಪೆರಿಂಜೆಯ ಬುಲೆಟ್ ಖಾದರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಟ್ರಸ್ಟ್ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ ಹಾಗೂ ಶಾಲಾ ಅಭಿವೃದ್ಧಿ ಯೋಜನೆಗಳಲ್ಲಿ ಸಹಕರಿಸಿದ ಜಾರಿಗೆದಡಿ ಅರುಣ್ ಪೂಜಾರಿಯವರನ್ನು ಶಾಲು ಹೊದಿಸಿ ಗೌರವಿಸಲಾಯಿತು.

ಶಿಕ್ಷಕಿ ಶ್ರೀಮತಿ ದಾಕ್ಷಾಯಿಣಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ವಿನೋದ ಕುಮಾರಿ ವಂದಿಸಿದರು.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಚಿಂತನಾ ದಿನಾಚರಣೆ

Suddi Udaya

ಧರ್ಮಸ್ಥಳದ ಬಿ. ಪ್ರಕಾಶ ದೇವಾಡಿಗರವರು ಸ್ಯಾಕ್ಸೋಪೋನ್ ಕಾರ್ಯಕ್ರಮ ನೀಡಲು ಮೂರನೇ ಬಾರಿಗೆ ಅಮೇರಿಕಕ್ಕೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಯು ಶೇಪ್ ವಾಕರ್, ವಿತರಣೆ

Suddi Udaya

ಕುತ್ರೋಟ್ಟು ನಿವಾಸಿ ಫಯಾಜ್ ಸ್ಥಳೀಯ ಮಹಿಳೆ ಜೊತೆ ನಾಪತ್ತೆ ಶಂಕೆ: ಫಯಾಜ್ ನ ಪತ್ನಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು -ಪ್ರಕರಣ ದಾಖಲು

Suddi Udaya

ಜೀವಿತಾವಧಿಯಲ್ಲಿ ಹೇಗೆ ಬದುಕಿದ್ದಾನೆ ಎಂಬುದು ಬಹಳ ಮುಖ್ಯ: ತಿಮ್ಮಣ್ಣರಸ ಡಾ. ಪದ್ಮಪ್ರಸಾದ್ ಅಜಿಲ – ತಾ.ಪಂ ವಿಶ್ರಾಂತ ಅಧೀಕ್ಷಕ‌ ಪ್ರಶಾಂತ್ ಬಳಂಜ ಅವರಿಂದ ವಿಶಿಷ್ಟ ರೀತಿಯ ಕೃತಜ್ಞತಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಉದಯ್ ಆಚಾರ್ಯರ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು

Suddi Udaya
error: Content is protected !!