32.2 C
ಪುತ್ತೂರು, ಬೆಳ್ತಂಗಡಿ
June 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ್ಯ ಮಟ್ಟದ ಫಾಸ್ಟ್ ಫೈವ್ ಪುರುಷರ ಹಾಗೂ ಮಹಿಳೆಯರ ನೆಟ್‌ಬಾಲ್ ಚಾಂಪಿಯನ್‌ಶಿಪ್‌: ಉಜಿರೆಯ ಎಸ್.ಡಿ.ಎಂ ವಿದ್ಯಾರ್ಥಿಗಳಿಗೆ ಅವಳಿ ಚಾಂಪಿಯನ್ಸ್ ಪ್ರಶಸ್ತಿ

ಉಜಿರೆ : ಮಂಡ್ಯ ಜಿಲ್ಲೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಕರ್ನಾಟಕ ನೆಟ್ ಬಾಲ್ ಅಸೋಸಿಯೇಷನ್ ಹಾಗು ಮಂಡ್ಯ ಜಿಲ್ಲಾ ನೆಟ್ ಬಾಲ್ ಅಸೋಸಿಯೇಷನ್ ಜಂಟಿ ಆಶ್ರಯದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಪುರುಷ ಮತ್ತು ಮಹಿಳಾ ಫಾಸ್ಟ್ ಫೈವ್ ನೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಸಕ್ರೀಯವಾಗಿ ಭಾಗವಹಿಸಿದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜು ಹಾಗೂ ಉಜಿರೆಯ ಎಸ್.ಡಿ.ಎಂ ಕ್ರೀಡಾ ಸಂಘದ ಪುರುಷ ಹಾಗೂ ಮಹಿಳಾ ವಿದ್ಯಾರ್ಥಿಗಳು ಅವಳಿ ಚಾಂಪಿಯನ್ಸ್ ಪ್ರಶಸ್ತಿ ಪಡೆಯುವುದರ ಮೂಲಕ ವಿಶೇಷ ಸಾಧನೆ ಗೈದಿದ್ದಾರೆ.

ಸೆಮಿಫೈನಲ್ ಹಂತದ ಮಹಿಳೆಯರ ನೆಟ್ ಬಾಲ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯು ಹಾಸನ ಜಿಲ್ಲಾ ಮಹಿಳೆಯರ ತಂಡವನ್ನು 24-16 ಅಂಕಗಳ ಅಂತರದಲ್ಲಿ ಮಣಿಸಿ ಫೈನಲ್ ಹಂತವನ್ನು ತಲುಪಿತು. ಫೈನಲ್ ಪಂದ್ಯದಲ್ಲಿ ಬೆಂಗಳೂರು ಸಿಟಿ ತಂಡವನ್ನು ಎದುರಿಸಿ 18-11 ಅಂಕಗಳಿಂದ ಮಣಿಸುವ ಮೂಲಕ ಪ್ರಥಮ ಸ್ಥಾನವನ್ನು ಪಡೆಯಿತು. ಜಿಲ್ಲೆಯನ್ನು ಪ್ರತಿನಿಧಿಸಿದ ಮಹಿಳಾ ತಂಡದಲ್ಲಿ ಉಜಿರೆಯ ಎಸ್.ಡಿ.ಎಂ ಕಾಲೇಜಿನ 10 ಜನ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿದರು.

ಪ್ರಶಸ್ತಿ ವಿಜೇತ ತಂಡದಲ್ಲಿ ವಿದ್ಯಾರ್ಥಿಗಳಾದ ರಶ್ಮಿ ಎಸ್‌.(ನಾಯಕಿ), ವರ್ಷಿತಾ (ದ್ವಿತೀಯ ಎಂಎಸ್‌ಡಬ್ಲ್ಯೂ), (ಪ್ರಥಮ ಎಂಎಸ್‌ಡಬ್ಲ್ಯೂ), ಸುರಕ್ಷಾ ಆಚಾರ್ಯ (ತೃತೀಯ ಬಿ.ಕಾಂ), ಪಲ್ಲವಿ (ತೃತೀಯ ಬಿ.ಕ), ಭೂಮಿಕಾ ಶೆಟ್ಟಿ (ದ್ವಿತೀಯ ಬಿ.ಕಾಂ), ಸಹನಾ (ದ್ವಿತೀಯ ಬಿ.ಕಾಂ), ಸಿಂಚನಾ (ಪ್ರಥಮ ಬಿ.ಕಾಂ), ಸುಪ್ರಿಯಾ (ದ್ವಿತೀಯ ಪಿಯುಸಿ), ದೀಪ್ತಿ(ದ್ವಿತೀಯಪಿಯುಸಿ), ನಮಿತಾ( ಪ್ರಥಮ ಪಿಯುಸಿ) ಭಾಗವಹಿಸಿದ್ದರು.

ಪುರುಷ ವಿಭಾಗದ ಫೈನಲ್ ಪಂದ್ಯಾಟದಲ್ಲಿ ಉಜಿರೆಯ ಎಸ್.ಡಿ.ಎಂ ಕಾಲೇಜಿನ ಏಳು ಜನ ವಿದ್ಯಾರ್ಥಿಗಳನ್ನು ಹೊಂದ್ದಿದ್ದ ದಕ್ಷಿಣ ಕನ್ನಡ ಜಿಲ್ಲೆಯು ಚಾಮರಾಜನಗರ ಪುರುಷರ ತಂಡವನ್ನು ಸೋಲಿಸಿ ಪೈನಲ್ ಪ್ರವೇಶ ಪಡೆಯಿತು. ಬಳಿಕ ಫೈನಲ್ ಪಂದ್ಯದಲ್ಲಿ ಹಾಸನ ಜಿಲ್ಲಾ ಪುರುಷರ ತಂಡದೊಂದಿಗೆ ಸೆಣಸಾಡಿ ದ್ವಿತೀಯ ಸ್ಥಾನವನ್ನು ಪಡೆಯಿತು. ತಂಡದಲ್ಲಿ ಎಸ್.ಡಿ.ಎಂ ಕಾಲೇಜಿನ ದ್ವಿತೀಯ ವರ್ಷದ ಎಂಎಸ್ ಡಬ್ಲ್ಯೂ ವಿದ್ಯಾರ್ಥಿಗಳಾದ ಚಿಂತನ ಬಿ ಸಿ (ನಾಯಕ), ಪುನೀತ್ ಕುಮಾರ್
ಪ್ರವೀಣ ಈರಪ್ಪ ಬಿಳ್ಳೂರ, ಪ್ರಥಮ ವರ್ಷದ ಮನೋಜ ಎನ್, ಮಿಥುನ್ ಎ, ಶೋಭಿತ್ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ್ದರು.

ಪ್ರಶಸ್ತಿ ವಿಜೇತ ಮಹಿಳಾ ಹಾಗು ಪುರುಷರ‌ ನೆಟ್ ಬಾಲ್ ತಂಡಕ್ಕೆ ಎಸ್.ಡಿ.ಎಂ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಸುದೀನ್ ಪೂಜಾರಿ ತರಬೇತಿಯನ್ನು ನೀಡಿರುತ್ತಾರೆ. ಪ್ರಶಸ್ತಿ ವಿಜೇತ ತಂಡದೊಂದಿಗೆ ಎಸ್.ಡಿ.ಎಂ ಕಾಲೇಜಿನ ಹಿರಿಯ ವಿದ್ಯಾರ್ಥಿ ಅಂತರಾಷ್ಟ್ರೀಯ ನೆಟ್ ಬಾಲ್ ಕ್ರೀಡಾಪಟು ನಿತಿನ್ ಪುಜಾರಿ ಮತ್ತು ರಾಷ್ಟ್ರೀಯ ನೆಟ್ ಬಾಲ್ ಆಟಗಾರ ತುಷಾರ್ ಉಪಸ್ಥಿತರಿದ್ದರು.

Related posts

ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ನೇತ್ರಾ ತಪಾಸಣಾ ಶಿಬಿರ

Suddi Udaya

ಹತ್ಯಡ್ಕ ಪ್ರಾ.ಕೃ.ಪ.ಸ.ಸಂ. ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ. ತ್ಯಾಂಪಣ್ಣ ಶೆಟ್ಟಿಗಾರ್ ಸೇವಾ ನಿವೃತ್ತಿ

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ಸ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ದಸರಾ ಧಮಾಕ ಸೇಲ್

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

Suddi Udaya

ಉಜಿರೆ: ಮಾಚಾರು ನಿವಾಸಿ ಕೃಷ್ಣ ಬೊಳ್ಮಿಣ್ಣಾಯ ನಿಧನ

Suddi Udaya

ನಡ ಸರ್ಕಾರಿ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya
error: Content is protected !!