September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಗತಿಯ ಉದ್ಘಾಟನೆ

ಸುಲ್ಕೇರಿ : ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಸುಲ್ಕೇರಿ, ಶ್ರೀರಾಮ ಶಾಲೆ, ಸುಲ್ಕೇರಿಯಲ್ಲಿ ಜೂ.16ರಂದು ಯಕ್ಷಗಾನ ನಾಟ್ಯ ತರಗತಿಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಕರ್ನಾಟಕದ ಜನಪದ ಕಲೆಯಲ್ಲೊಂದಾದ ಯಕ್ಷಗಾನದ ಕಂಪನ್ನು ವಿದ್ಯಾರ್ಥಿಗಳಲ್ಲಿ ತುಂಬಿ ಕಲಾಭಿರುಚಿಯನ್ನು ಮೂಡಿಸುವ ಧ್ಯೇಯದೊಂದಿಗೆ 4 ವರ್ಷಗಳ ಹಿಂದೆ ಶಾಲೆಯಲ್ಲಿ ಯಕ್ಷಗಾನ ತರಬೇತಿಯನ್ನು ಆರಂಭಿಸಲಾಗಿದ್ದು ಕಳೆದ ವರ್ಷದಿಂದ ಯಕ್ಷಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್(ರಿ) ಮಂಗಳೂರು ಯಕ್ಷಧ್ರುವ–ಯಕ್ಷ ಶಿಕ್ಷಣ ಕಾರ್ಯಕ್ರಮಕ್ಕೆ ಹಸ್ತಾಂತರಗೊಂಡಿದ್ದು ಈ ವರ್ಷ 2ನೇ ವರ್ಷದ ಉದ್ಘಾಟನಾ ಕಾರ್ಯಕ್ರಮವು ಶಾಲೆಯಲ್ಲಿ ನಡೆಯಿತು .

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ರಾಜು ಪೂಜಾರಿ ವಹಿಸಿಕೊಂಡಿದ್ದರು . ಶಾಲಾ ಆಡಳಿತ ಮಂಡಳಿಯ ಗೌರವಾಧ್ಯಕ್ಷ ಗಣೇಶ್ ಹೆಗ್ಡೆ, ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳೆಂಜ ಹಾಗೂ ಮಂಗಳೂರು ಯಕ್ಷಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್ ಯಕ್ಷಧ್ರುವ ಯಕ್ಷ ಶಿಕ್ಷಣ ಬೆಳ್ತಂಗಡಿ ಘಟಕ ಅಧ್ಯಕ್ಷ ಸುರೇಶ್ ಶೆಟ್ಟಿ , ಲಯನ್ಸ್ ಅಧ್ಯಕ್ಷ ಲಯನ್ ದೇವದಾಸ್ ಶೆಟ್ಟಿ ಬದ್ಯಾರು, ಮಂಗಳೂರು ಯಕ್ಷಧ್ರುವ ಯಕ್ಷಶಿಕ್ಷಣ ಪಟ್ಲ ಪೌಂಡೇಶನ್ ಟ್ರಸ್ಟ್ ಪ್ರಧಾನ ಸಂಚಾಲಕ ವಾಸುದೇವ ಐತಾಳ , ಶಿತಿಕಂಠ ಭಟ್ ಉಜಿರೆ ಗಣೇಶ್ ಕ್ಲಿನಿಕಲ್ ಲ್ಯಾಬೋರೆಟರಿ ಬೆಳ್ತಂಗಡಿ , ಶ್ರೀಮತಿ ಧನುಷಾ ಇಕೋ ಫ್ರೆಶ್ ಎಂಟರ್ ಪ್ರೈಸಸ್ ಹಾಗೂ ವೀರ ಮಾರುತಿ ಇಂಡಸ್ಟ್ರೀಸ್ ಇದರ ಪ್ರೊಪ್ರೇಟರ್ , ಶ್ರೀ ಸುಲ್ಕೇರಿ ಮಹಮ್ಮಾಯಿ ದೇವಸ್ಥಾನ ಅಧ್ಯಕ್ಷ ಪಾರ್ಶ್ವನಾಥ ಜೈನ್, ದೇವಿಪ್ರಸಾದ್ ಗುರುವಾಯನಕೆರೆ ಯಕ್ಷಗಾನ ತರಬೇತಿ ಗುರುಗಳು , ಶ್ರೀರಾಮ ಪ್ರೌಢ ಶಾಲೆ ಮುಖ್ಯೋಪಾಧ್ಯಾಯರು ಪ್ರಮೋದ ಕುಮಾರ್ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಮುಖ್ಯೋಪಾದ್ಯಾಯರು ಶಶಿಕಲಾ ಪ್ರಾಸ್ತಾವಿಕ ಮಾತಿನೊಂದಿಗೆ ಸ್ವಾಗತಿಸಿ , ಪೂರ್ವ ಗುರುಕುಲ ಮುಖ್ಯಸ್ಥೆ ಸ್ವಾತಿ ಧನ್ಯವಾದವಿತ್ತರು. ಶಿಕ್ಷಕಿ ಹೇಮಲತಾ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ: ಬೃಹತ್ ಕಾರ್ಮಿಕ ಜಾಗೃತಿ ಆಂದೋಲನವನ್ನು ಆಯೋಜಿಸುವ ಕುರಿತು ಸಮಾಲೋಚನ ಸಭೆ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ನೆರಿಯ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಧರ್ಮಸ್ಥಳ: ನಮ್ಮೂರು ನಮ್ಮ ಕೆರೆ ಸಮಿತಿ ಸದಸ್ಯರೊಂದಿಗೆ ಸಂವಾದ ಹಾಗೂ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಚಿಬಿದ್ರೆ ನಿವಾಸಿ ಚಂದ್ರಕಲಾ ಹೃದಯಾಘಾತದಿಂದ ನಿಧನ

Suddi Udaya

ಸೇವಾಭಾರತಿಯಿಂದ ಶಾಲಾ ಮಕ್ಕಳಿಗೆ ಕಿಟ್ ವಿತರಣೆ

Suddi Udaya

ಓಡಿಲ್ನಾಳ ಶಾಲೆಯಲ್ಲಿ ನಡೆಯುತ್ತಿರುವ ವಾಣಿ ಪ.ಪೂ. ಕಾಲೇಜಿನ ಎನ್ನೆಸ್ಸೆಸ್‌ ಶಿಬಿರಕ್ಕೆ ವಿಭಾಗಾಧಿಕಾರಿ ಸವಿತಾ ಎರ್ಮಾಳ್ ಭೇಟಿ

Suddi Udaya
error: Content is protected !!