ಸುಲ್ಕೇರಿ : ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಸುಲ್ಕೇರಿ, ಶ್ರೀರಾಮ ಶಾಲೆ, ಸುಲ್ಕೇರಿಯಲ್ಲಿ ಜೂ.16ರಂದು ಯಕ್ಷಗಾನ ನಾಟ್ಯ ತರಗತಿಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಕರ್ನಾಟಕದ ಜನಪದ ಕಲೆಯಲ್ಲೊಂದಾದ ಯಕ್ಷಗಾನದ ಕಂಪನ್ನು ವಿದ್ಯಾರ್ಥಿಗಳಲ್ಲಿ ತುಂಬಿ ಕಲಾಭಿರುಚಿಯನ್ನು ಮೂಡಿಸುವ ಧ್ಯೇಯದೊಂದಿಗೆ 4 ವರ್ಷಗಳ ಹಿಂದೆ ಶಾಲೆಯಲ್ಲಿ ಯಕ್ಷಗಾನ ತರಬೇತಿಯನ್ನು ಆರಂಭಿಸಲಾಗಿದ್ದು ಕಳೆದ ವರ್ಷದಿಂದ ಯಕ್ಷಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್(ರಿ) ಮಂಗಳೂರು ಯಕ್ಷಧ್ರುವ–ಯಕ್ಷ ಶಿಕ್ಷಣ ಕಾರ್ಯಕ್ರಮಕ್ಕೆ ಹಸ್ತಾಂತರಗೊಂಡಿದ್ದು ಈ ವರ್ಷ 2ನೇ ವರ್ಷದ ಉದ್ಘಾಟನಾ ಕಾರ್ಯಕ್ರಮವು ಶಾಲೆಯಲ್ಲಿ ನಡೆಯಿತು .
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ರಾಜು ಪೂಜಾರಿ ವಹಿಸಿಕೊಂಡಿದ್ದರು . ಶಾಲಾ ಆಡಳಿತ ಮಂಡಳಿಯ ಗೌರವಾಧ್ಯಕ್ಷ ಗಣೇಶ್ ಹೆಗ್ಡೆ, ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳೆಂಜ ಹಾಗೂ ಮಂಗಳೂರು ಯಕ್ಷಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್ ಯಕ್ಷಧ್ರುವ ಯಕ್ಷ ಶಿಕ್ಷಣ ಬೆಳ್ತಂಗಡಿ ಘಟಕ ಅಧ್ಯಕ್ಷ ಸುರೇಶ್ ಶೆಟ್ಟಿ , ಲಯನ್ಸ್ ಅಧ್ಯಕ್ಷ ಲಯನ್ ದೇವದಾಸ್ ಶೆಟ್ಟಿ ಬದ್ಯಾರು, ಮಂಗಳೂರು ಯಕ್ಷಧ್ರುವ ಯಕ್ಷಶಿಕ್ಷಣ ಪಟ್ಲ ಪೌಂಡೇಶನ್ ಟ್ರಸ್ಟ್ ಪ್ರಧಾನ ಸಂಚಾಲಕ ವಾಸುದೇವ ಐತಾಳ , ಶಿತಿಕಂಠ ಭಟ್ ಉಜಿರೆ ಗಣೇಶ್ ಕ್ಲಿನಿಕಲ್ ಲ್ಯಾಬೋರೆಟರಿ ಬೆಳ್ತಂಗಡಿ , ಶ್ರೀಮತಿ ಧನುಷಾ ಇಕೋ ಫ್ರೆಶ್ ಎಂಟರ್ ಪ್ರೈಸಸ್ ಹಾಗೂ ವೀರ ಮಾರುತಿ ಇಂಡಸ್ಟ್ರೀಸ್ ಇದರ ಪ್ರೊಪ್ರೇಟರ್ , ಶ್ರೀ ಸುಲ್ಕೇರಿ ಮಹಮ್ಮಾಯಿ ದೇವಸ್ಥಾನ ಅಧ್ಯಕ್ಷ ಪಾರ್ಶ್ವನಾಥ ಜೈನ್, ದೇವಿಪ್ರಸಾದ್ ಗುರುವಾಯನಕೆರೆ ಯಕ್ಷಗಾನ ತರಬೇತಿ ಗುರುಗಳು , ಶ್ರೀರಾಮ ಪ್ರೌಢ ಶಾಲೆ ಮುಖ್ಯೋಪಾಧ್ಯಾಯರು ಪ್ರಮೋದ ಕುಮಾರ್ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಮುಖ್ಯೋಪಾದ್ಯಾಯರು ಶಶಿಕಲಾ ಪ್ರಾಸ್ತಾವಿಕ ಮಾತಿನೊಂದಿಗೆ ಸ್ವಾಗತಿಸಿ , ಪೂರ್ವ ಗುರುಕುಲ ಮುಖ್ಯಸ್ಥೆ ಸ್ವಾತಿ ಧನ್ಯವಾದವಿತ್ತರು. ಶಿಕ್ಷಕಿ ಹೇಮಲತಾ ಕಾರ್ಯಕ್ರಮ ನಿರೂಪಿಸಿದರು.













