July 31, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸೋಣಂದೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಸಂಘ ಉದ್ಘಾಟನೆ

ಸೋಣಂದೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೋಣಂದೂರು ಇಲ್ಲಿ 2026-27 ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆ ಸಮಾರಂಭವನ್ನು ಜೂ.15 ರಂದು ಜರಗಿತು.


ವಿದ್ಯಾರ್ಥಿ ಜೀವನ ಎಂದರೆ ಕೇವಲ ಪಾಠ ಪ್ರವಚನಗಳಿಗೆ ಸೀಮಿತವಾಗಿರದೆ ಶಿಸ್ತು ಆರೋಗ್ಯ ಜವಾಬ್ದಾರಿಗಳ ಬಗ್ಗೆ ತಿಳುವಳಿಕೆ ಇರಬೇಕು ಎಂಬ ಕಾರಣಕ್ಕೆ ವಿದ್ಯಾರ್ಥಿ ಜೀವನದ ಹಂತದಲ್ಲಿ ಚುನಾವಣಾ ಪ್ರಚಾರ ಮತದಾನದ ಬಗ್ಗೆ ಅರಿವು ಮೂಡಿಸಲಾಯಿತು.

ಜೂ 6 ರಂದು ನಡೆದ ಚುನಾವಣೆಯಲ್ಲಿ ಶಾಲಾ ಮುಖ್ಯಮಂತ್ರಿ ಆಗಿ 7ನೇ ತರಗತಿಯ ಗಗನ್, ಉಪಮುಖ್ಯಮಂತ್ರಿಯಾಗಿ 6ನೇ ತರಗತಿಯ ಮೊಹಮ್ಮದ್ ಫೈಜಲ್, ಶಾಲಾ ಗೃಹಮಂತ್ರಿಯಾಗಿ 6ನೇ ತರಗತಿಯ ಫಾತಿಮಾತ್ ರಿಫಾ ಅವರು ಆಯ್ಕೆಯಾಗಿರುತ್ತಾರೆ.


ಶಾಲಾ ಸಂಸತ್ತಿನಲ್ಲಿ ಶಾಲಾ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ವಿರೋಧಪಕ್ಷ, ಶಿಸ್ತು ಮತ್ತು ಶಿಕ್ಷಣ, ಆಹಾರ ಮತ್ತು ಆರೋಗ್ಯ, ಸಾಂಸ್ಕೃತಿಕ ಮಂತ್ರಿ, ಕ್ರೀಡಾ ಮಂತ್ರಿ, ನೀರಾವರಿ ಮತ್ತು ತೋಟಗಾರಿಕೆ, ವಾರ್ತಾ ಮಂತ್ರಿ ಮತ್ತು ಉಪ ಮಂತ್ರಿ ಗಳ ಆಯ್ಕೆ ನಡೆಸಲಾಯಿತು.


ಮಂತ್ರಿಗಳ ಜವಾಬ್ದಾರಿಯನ್ನು ಮುಖ್ಯ ಶಿಕ್ಷಕಿ ಅನಿತಾ ರೇಷ್ಮಾ ತಿಳಿಸಿದರು. ಸಹ ಶಿಕ್ಷಕಿ ರಕ್ಷಾ ಪ್ರತಿಜ್ಞಾವಿಧಿ ನೆರವೇರಿಸಿದರು. ಸಹಶಿಕ್ಷಕಿ ರಶ್ಮಿ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಶಿರ್ಲಾಲು ಕೆನರಾ ಬ್ಯಾಂಕ್ ಸಹಭಾಗಿತ್ವದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲೆಗೆ ಉದ್ಯಮಿ ಪ್ರಜಿತ್ ಜೈನ್ ರಿಂದ ಸ್ಟ್ಯಾಂಡ್ ಫ್ಯಾನ್ ನ್ನು ಕೊಡುಗೆ

Suddi Udaya

ವಾಣಿ ಕಾಲೇಜಿನಲ್ಲಿ ಚುನಾವಣಾ ಸಾಕ್ಷರತಾ ಸಂಘದಿಂದ ‘ಮಾಕ್ ಪಾರ್ಲಿಮೆಂಟ್’ ಕಾರ್ಯಕ್ರಮ

Suddi Udaya

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸತ್ಯನಾರಾಯಣ ಪೂಜೆ

Suddi Udaya

ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಡಿ.ಹರ್ಷೇಂದ್ರ ಕುಮಾರ್ ಭೇಟಿ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಕಾರುಗಳ ನಡುವೆ ಡಿಕ್ಕಿ: ಓರ್ವನ ಸ್ಥಿತಿ ಗಂಭೀರ

Suddi Udaya
error: Content is protected !!