September 15, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸೋಣಂದೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಸಂಘ ಉದ್ಘಾಟನೆ

ಸೋಣಂದೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೋಣಂದೂರು ಇಲ್ಲಿ 2026-27 ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆ ಸಮಾರಂಭವನ್ನು ಜೂ.15 ರಂದು ಜರಗಿತು.


ವಿದ್ಯಾರ್ಥಿ ಜೀವನ ಎಂದರೆ ಕೇವಲ ಪಾಠ ಪ್ರವಚನಗಳಿಗೆ ಸೀಮಿತವಾಗಿರದೆ ಶಿಸ್ತು ಆರೋಗ್ಯ ಜವಾಬ್ದಾರಿಗಳ ಬಗ್ಗೆ ತಿಳುವಳಿಕೆ ಇರಬೇಕು ಎಂಬ ಕಾರಣಕ್ಕೆ ವಿದ್ಯಾರ್ಥಿ ಜೀವನದ ಹಂತದಲ್ಲಿ ಚುನಾವಣಾ ಪ್ರಚಾರ ಮತದಾನದ ಬಗ್ಗೆ ಅರಿವು ಮೂಡಿಸಲಾಯಿತು.

ಜೂ 6 ರಂದು ನಡೆದ ಚುನಾವಣೆಯಲ್ಲಿ ಶಾಲಾ ಮುಖ್ಯಮಂತ್ರಿ ಆಗಿ 7ನೇ ತರಗತಿಯ ಗಗನ್, ಉಪಮುಖ್ಯಮಂತ್ರಿಯಾಗಿ 6ನೇ ತರಗತಿಯ ಮೊಹಮ್ಮದ್ ಫೈಜಲ್, ಶಾಲಾ ಗೃಹಮಂತ್ರಿಯಾಗಿ 6ನೇ ತರಗತಿಯ ಫಾತಿಮಾತ್ ರಿಫಾ ಅವರು ಆಯ್ಕೆಯಾಗಿರುತ್ತಾರೆ.


ಶಾಲಾ ಸಂಸತ್ತಿನಲ್ಲಿ ಶಾಲಾ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ವಿರೋಧಪಕ್ಷ, ಶಿಸ್ತು ಮತ್ತು ಶಿಕ್ಷಣ, ಆಹಾರ ಮತ್ತು ಆರೋಗ್ಯ, ಸಾಂಸ್ಕೃತಿಕ ಮಂತ್ರಿ, ಕ್ರೀಡಾ ಮಂತ್ರಿ, ನೀರಾವರಿ ಮತ್ತು ತೋಟಗಾರಿಕೆ, ವಾರ್ತಾ ಮಂತ್ರಿ ಮತ್ತು ಉಪ ಮಂತ್ರಿ ಗಳ ಆಯ್ಕೆ ನಡೆಸಲಾಯಿತು.


ಮಂತ್ರಿಗಳ ಜವಾಬ್ದಾರಿಯನ್ನು ಮುಖ್ಯ ಶಿಕ್ಷಕಿ ಅನಿತಾ ರೇಷ್ಮಾ ತಿಳಿಸಿದರು. ಸಹ ಶಿಕ್ಷಕಿ ರಕ್ಷಾ ಪ್ರತಿಜ್ಞಾವಿಧಿ ನೆರವೇರಿಸಿದರು. ಸಹಶಿಕ್ಷಕಿ ರಶ್ಮಿ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ನ್ಯಾಯತರ್ಪು: ಕೊರೆಜಂಡ ಮನೆಗೆ ಸಿಡಿಲು ಬಡಿದು ಬಿರುಕು ಬಿಟ್ಟ ಗೋಡೆ,ಕಿತ್ತು ಹೋದ ವಿದ್ಯುತ್ ವಯರಿಂಗ್

Suddi Udaya

ಪುದುವೆಟ್ಟು ಶ್ರೀ ಧ.ಮಂ ಅ.ಹಿ.ಪ್ರಾ.ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಆ. 27: ಬೆಳ್ತಂಗಡಿ ಎಸ್‌ಸಿಡಿಸಿಸಿ ಬ್ಯಾಂಕ್ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಹೊಸ ಎಟಿಎಂ ಉದ್ಘಾಟನೆ ಹಾಗೂ ನೂತನ ಲಿಪ್ಟ್ ಉದ್ಘಾಟನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮಕ್ಕಿಮನೆ ಕಲಾವೃಂದ ಬಳಗದಿಂದ ಸಾಂಸ್ಕೃತಿಕ ವೈಭವ

Suddi Udaya

ಬೆಳ್ತಂಗಡಿ: ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ಹಾಗೂ ಹಸಿರೆಲೆ ಗೊಬ್ಬರ ಬೀಜ ದಾಸ್ತಾನು ಲಭ್ಯ

Suddi Udaya

ಅಳದಂಗಡಿಯ ವಿಲ್ಮಾ ಲವೀನಾ ಡಿಸೋಜಾ ರವರಿಗೆ ಪಿ.ಎಚ್.ಡಿ ಪದವಿ

Suddi Udaya
error: Content is protected !!