27 C
ಪುತ್ತೂರು, ಬೆಳ್ತಂಗಡಿ
June 16, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸೋಣಂದೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಸಂಘ ಉದ್ಘಾಟನೆ

ಸೋಣಂದೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೋಣಂದೂರು ಇಲ್ಲಿ 2026-27 ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆ ಸಮಾರಂಭವನ್ನು ಜೂ.15 ರಂದು ಜರಗಿತು.


ವಿದ್ಯಾರ್ಥಿ ಜೀವನ ಎಂದರೆ ಕೇವಲ ಪಾಠ ಪ್ರವಚನಗಳಿಗೆ ಸೀಮಿತವಾಗಿರದೆ ಶಿಸ್ತು ಆರೋಗ್ಯ ಜವಾಬ್ದಾರಿಗಳ ಬಗ್ಗೆ ತಿಳುವಳಿಕೆ ಇರಬೇಕು ಎಂಬ ಕಾರಣಕ್ಕೆ ವಿದ್ಯಾರ್ಥಿ ಜೀವನದ ಹಂತದಲ್ಲಿ ಚುನಾವಣಾ ಪ್ರಚಾರ ಮತದಾನದ ಬಗ್ಗೆ ಅರಿವು ಮೂಡಿಸಲಾಯಿತು.

ಜೂ 6 ರಂದು ನಡೆದ ಚುನಾವಣೆಯಲ್ಲಿ ಶಾಲಾ ಮುಖ್ಯಮಂತ್ರಿ ಆಗಿ 7ನೇ ತರಗತಿಯ ಗಗನ್, ಉಪಮುಖ್ಯಮಂತ್ರಿಯಾಗಿ 6ನೇ ತರಗತಿಯ ಮೊಹಮ್ಮದ್ ಫೈಜಲ್, ಶಾಲಾ ಗೃಹಮಂತ್ರಿಯಾಗಿ 6ನೇ ತರಗತಿಯ ಫಾತಿಮಾತ್ ರಿಫಾ ಅವರು ಆಯ್ಕೆಯಾಗಿರುತ್ತಾರೆ.


ಶಾಲಾ ಸಂಸತ್ತಿನಲ್ಲಿ ಶಾಲಾ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ವಿರೋಧಪಕ್ಷ, ಶಿಸ್ತು ಮತ್ತು ಶಿಕ್ಷಣ, ಆಹಾರ ಮತ್ತು ಆರೋಗ್ಯ, ಸಾಂಸ್ಕೃತಿಕ ಮಂತ್ರಿ, ಕ್ರೀಡಾ ಮಂತ್ರಿ, ನೀರಾವರಿ ಮತ್ತು ತೋಟಗಾರಿಕೆ, ವಾರ್ತಾ ಮಂತ್ರಿ ಮತ್ತು ಉಪ ಮಂತ್ರಿ ಗಳ ಆಯ್ಕೆ ನಡೆಸಲಾಯಿತು.


ಮಂತ್ರಿಗಳ ಜವಾಬ್ದಾರಿಯನ್ನು ಮುಖ್ಯ ಶಿಕ್ಷಕಿ ಅನಿತಾ ರೇಷ್ಮಾ ತಿಳಿಸಿದರು. ಸಹ ಶಿಕ್ಷಕಿ ರಕ್ಷಾ ಪ್ರತಿಜ್ಞಾವಿಧಿ ನೆರವೇರಿಸಿದರು. ಸಹಶಿಕ್ಷಕಿ ರಶ್ಮಿ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಅರಸಿನಮಕ್ಕಿ-ಬೂಡುಮುಗೇರು ನವಶಕ್ತಿ ಆಟೋ ಚಾಲಕ ಮಾಲಕ ಸಂಘದಿಂದ ರಸ್ತೆ ದುರಸ್ತಿ ಕಾರ್ಯ

Suddi Udaya

ಬೆಳ್ತಂಗಡಿ ನೂರಾ ಗೋಲ್ಡ್ ನಲ್ಲಿ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಡ್ರಾಯಿಂಗ್ ಸ್ಪರ್ಧೆ: ವಿಜೇತರಿಗೆ ಬಹುಮಾನ ವಿತರಣೆ

Suddi Udaya

ನೆರಿಯದ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya

ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಕೈ ಮತ್ತು ಮೈಕ್ರೊಸರ್ಜರಿ ಸೇವೆಗೆ ಚಾಲನೆ

Suddi Udaya

ಯುವವಾಹಿನಿ ಉಪ್ಪಿನಂಗಡಿ ಘಟಕದ ಅಧ್ಯಕ್ಷರಾಗಿ ಮನೋಜ್ ಎನ್ ಸಾಲ್ಯಾನ್ ಆಯ್ಕೆ

Suddi Udaya

ಕಲ್ಮಂಜ : ಸಿದ್ದಬೈಲು ಪರಾರಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!