ಬೆಳ್ತಂಗಡಿ: ಕುಪ್ಪೆಟ್ಟಿ – ಉಪ್ಪಿನಂಗಡಿ ರಸ್ತೆಯ ಇಲಂತಿಲ ಗ್ರಾಮದ ಪಿದಮಲೆ ಎಂಬಲ್ಲಿ ರಸ್ತೆ ಮಧ್ಯಭಾಗದಲ್ಲಿ ನಿರ್ಮಾಣವಾಗಿದ್ದ ಬೃಹತ್ ಗುಂಡಿಗೆ ಶಾಸಕ ಹರೀಶ್ ಪೂಂಜಾರವರ ಮುತುವರ್ಜಿಯಿಂದ ವೆಟ್ ಮಿಕ್ಸ್ ಹಾಕಿ ರಸ್ತೆಯ ಗುಂಡಿಯನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ.

ಕೆಲ ದಿನಗಳ ಹಿಂದೆ ಆಟೋ ಟೆಂಫೋ’ವೊಂದು ಇಲಂತಿಲ ಗ್ರಾಮದ ಪಿದಮಲೆ ಎಂಬಲ್ಲಿ ರಸ್ತೆ ಮಧ್ಯಭಾಗದಲ್ಲಿ ನಿರ್ಮಾಣವಾಗಿದ್ದ ಬೃಹತ್ ಗುಂಡಿಗೆ ಬಿದ್ದಿದ್ದ ಘಟನೆ ನಡೆದಿತ್ತು. ಶಾಸಕ ಹರೀಶ್ ಪೂಂಜಾ’ರ ಮುತುವರ್ಜಿಯಿಂದ ರಸ್ತೆಯ ದುಸ್ಥಿತಿಯನ್ನು ಪರಿಶೀಲಿಸಿ, ಸಾರ್ವಜನಿಕರ ಸಂಚಾರಕ್ಕೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ.
ಮಳೆಯ ಪರಿಣಾಮ ಉಂಟಾಗಿದ್ದ ಪಿಡಬ್ಲ್ಯುಡಿ ರಸ್ತೆಯ ಸಮಸ್ಯೆಯನ್ನು ತಾತ್ಕಾಲಿಕವಾಗಿ ನಿವಾರಣೆಗೊಳಿಸಿ, ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ವೆಟ್ ಮಿಕ್ಸ್ ಹಾಕಿ ರಸ್ತೆ ಸಮತಟ್ಟುಗೊಳಿಸಲಾಗಿದೆ.













