27 C
ಪುತ್ತೂರು, ಬೆಳ್ತಂಗಡಿ
June 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಾಸಕ ಹರೀಶ್ ಪೂಂಜಾರ ಮುತುವರ್ಜಿಯಿಂದ ಇಲಂತಿಲ ಪಿದಮಲೆಯಲ್ಲಿ ರಸ್ತೆ ಮಧ್ಯಭಾಗದಲ್ಲಿ ನಿರ್ಮಾಣವಾಗಿದ್ದ ಬೃಹತ್ ಗುಂಡಿಗೆ ತಾತ್ಕಾಲಿಕ ಮುಕ್ತಿ

ಬೆಳ್ತಂಗಡಿ: ಕುಪ್ಪೆಟ್ಟಿ – ಉಪ್ಪಿನಂಗಡಿ ರಸ್ತೆಯ ಇಲಂತಿಲ ಗ್ರಾಮದ ಪಿದಮಲೆ ಎಂಬಲ್ಲಿ ರಸ್ತೆ ಮಧ್ಯಭಾಗದಲ್ಲಿ ನಿರ್ಮಾಣವಾಗಿದ್ದ ಬೃಹತ್ ಗುಂಡಿಗೆ ಶಾಸಕ ಹರೀಶ್ ಪೂಂಜಾರವರ ಮುತುವರ್ಜಿಯಿಂದ ವೆಟ್ ಮಿಕ್ಸ್ ಹಾಕಿ ರಸ್ತೆಯ ಗುಂಡಿಯನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ.

ಕೆಲ ದಿನಗಳ ಹಿಂದೆ ಆಟೋ ಟೆಂಫೋ’ವೊಂದು ಇಲಂತಿಲ ಗ್ರಾಮದ ಪಿದಮಲೆ ಎಂಬಲ್ಲಿ ರಸ್ತೆ ಮಧ್ಯಭಾಗದಲ್ಲಿ ನಿರ್ಮಾಣವಾಗಿದ್ದ ಬೃಹತ್ ಗುಂಡಿಗೆ ಬಿದ್ದಿದ್ದ ಘಟನೆ ನಡೆದಿತ್ತು. ಶಾಸಕ ಹರೀಶ್ ಪೂಂಜಾ’ರ ಮುತುವರ್ಜಿಯಿಂದ ರಸ್ತೆಯ ದುಸ್ಥಿತಿಯನ್ನು ಪರಿಶೀಲಿಸಿ, ಸಾರ್ವಜನಿಕರ ಸಂಚಾರಕ್ಕೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ.
ಮಳೆಯ ಪರಿಣಾಮ ಉಂಟಾಗಿದ್ದ ಪಿಡಬ್ಲ್ಯುಡಿ ರಸ್ತೆಯ ಸಮಸ್ಯೆಯನ್ನು ತಾತ್ಕಾಲಿಕವಾಗಿ ನಿವಾರಣೆಗೊಳಿಸಿ, ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ವೆಟ್ ಮಿಕ್ಸ್ ಹಾಕಿ ರಸ್ತೆ ಸಮತಟ್ಟುಗೊಳಿಸಲಾಗಿದೆ.

Related posts

ಗೇರುಕಟ್ಟೆ :ಪರಪ್ಪು ಜಮಾಅತ್ ನಿಂದ ಅಭಿನಂದನಾ ಸಭೆ: ದರ್ಗಾ ಸುತ್ತಮುತ್ತ ಶಾಶ್ವತ ಕಾಮಗಾರಿ ನಡೆಸಿದ ಮುಸ್ಲಿಮ್ ಯೂತ್ ವಿಂಗ್ ಸಮಿತಿಗೆ ಗೌರವಾರ್ಪಣೆ

Suddi Udaya

ಗಾಳಿ ಮಳೆಗೆ ಕುಸಿದು ಬಿದ್ದ ಮನೆ : ಉಜಿರೆ ಗ್ರಾ.ಪಂ. ನಿಂದ ರೂ.10 ಸಾವಿರ ಪರಿಹಾರ ಮಂಜೂರು

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ತೆಕ್ಕಾರುವಿನ ಆಯಿಷಾತುಲ್ ರಫೀಯ ರವರಿಗೆ 568 ಅಂಕ

Suddi Udaya

ಮಂಗಳೂರು ಸಿಸಿಆರ್ ಬಿ ಘಟಕದಲ್ಲಿ ಸೇವೆ ಸಲ್ಲಿಸುತ್ತಿದ್ದ ಭೋಜಾರ ಪುರಂದರ ಗೌಡರವರು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ಪದೋನ್ನತಿ

Suddi Udaya

ಉಜಿರೆ ಗ್ರಾ.ಪಂ. ಪ್ರೇರಣ ಮಹಿಳಾ ಸಂಜೀವಿನಿ ಒಕ್ಕೂಟದ ನೇತೃತ್ವದಲ್ಲಿ “ಅಕ್ಕ ಕೆಫೆ ” ಶುಭಾರಂಭ

Suddi Udaya

ಎಸ್ ಡಿ ಎಮ್ ಕಾಲೇಜಿನಲ್ಲಿ ವಾಣಿಜ್ಯ “ವ್ಯವಹಾರ “ಹಬ್ಬ

Suddi Udaya
error: Content is protected !!