23.8 C
ಪುತ್ತೂರು, ಬೆಳ್ತಂಗಡಿ
August 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ಅ.ಹಿ.ಪ್ರಾ. ಶಾಲೆಯಲ್ಲಿ ಯೋಗ ಶಿಬಿರ ಉದ್ಘಾಟನೆ

ಬೆಳ್ತಂಗಡಿ: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪೂರ್ವಭಾವಿಯಾಗಿ ನಡೆಯುವ ಒಂದು ವಾರದ ಯೋಗ ತರಬೇತಿ ಶಿಬಿರವನ್ನು ಜೂ.16 ರಂದು ಗಣ್ಯರ ಸಮ್ಮುಖದಲ್ಲಿ ಸಾಂಕೇತಿಕವಾಗಿ ಉಜಿರೆ ಎಸ್‌ಡಿಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉದ್ಘಾಟಿಸಲಾಯಿತು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಎಸ್.ಡಿ.ಎಂ ನ್ಯಾಚುರೋಪತಿ ಕಾಲೇಜಿನ ವೈದ್ಯಶಾಸ್ತ್ರದ ಉಪನ್ಯಾಸಕಿ ಡಾ. ರೆನಿತಾ ಮಾತನಾಡಿ “ಯೋಗ ಎಂಬುವುದು ಅತ್ಯಂತ ಪ್ರಾಚೀನವಾದದ್ದು,ಇದು ಆರೋಗ್ಯಕರ ಜೀವನ ಸಾಗಿಸಲು ಇರುವ ಸುಲಭ ಮಾರ್ಗ” ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಬಾಲಕೃಷ್ಣ ನಾಯ್ಕ ವಹಿಸಿ ಮಾತನಾಡಿ “ಮಕ್ಕಳಲ್ಲಿ ಏಕಾಗ್ರತೆ ಬರಲು ಯೋಗ ಸಹಕಾರಿಯಾಗಿದೆ, ಒಂದು ವಾರಗಳ ಕಾಲ ನಡೆಯಲಿರುವ ಈ ಶಿಬಿರ ಉತ್ತಮ ರೀತಿಯಲ್ಲಿ ನಡೆಯಲಿ” ಎಂದು ಶುಭ ಹಾರೈಸಿದರು.

ವೇದಿಕೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿಗಳಾದ ಅನಘಾ ಭಟ್ ಹಾಗೂ ಸಾನಿಕ ಉಪಸ್ಥಿತರಿದ್ದರು. ಶಾಲಾ ಸಹ ಶಿಕ್ಷಕಿ ಗೀತಾ ಸ್ವಾಗತಿಸಿದರು. ಸಹ ಶಿಕ್ಷಕಿ ರೇವತಿ ವಂದಿಸಿದರು.
ಶಾಲಾ ದೈಹಿಕ ಶಿಕ್ಷಕ ಪ್ರಜ್ವಲ್ ಧನ್ಯವಾದವಿತ್ತರು.

Related posts

ನಿಡ್ಲೆ : ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ದಿನಾಚರಣೆ

Suddi Udaya

ಬೆಳಾಲು: ಮಾಚಾರು ನಿವಾಸಿ ಸುಂದರ ಮಡಿವಾಳ ನಿಧನ

Suddi Udaya

ಇಂದಬೆಟ್ಟು: ಕುಡಿಯುವ ನೀರಿಗಾಗಿ ಗ್ರಾ.ಪಂ. ಮಾಜಿ ಸದಸ್ಯ ವೆಂಕಪ್ಪ ಕೋಟ್ಯಾನ್ ರಿಂದ ಪಂಚಾಯತ್ ಎದುರು ಪ್ರತಿಭಟನೆ: ಶೀಘ್ರವಾಗಿ ದುರಸ್ತಿ ಮಾಡಿಸಿಕೊಡುವುದಾಗಿ ಗ್ರಾ.ಪಂ. ಅಧ್ಯಕ್ಷೆ ಭರವಸೆ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಪಟ್ರಮೆ ಗ್ರಾಮ ಪಂಚಾಯತ್ ಬಳಿ ಬಿಜೆಪಿ ಪ್ರತಿಭಟನೆ

Suddi Udaya

ಅಳದಂಗಡಿ :ಶ್ರೀ ಮಹಾಗಣಪತಿ ದೇವರಿಗೆ ದೃಢ ಕಲಶಾಭಿಷೇಕ

Suddi Udaya

ಬೆಳಾಲು : ಮಾಯಾದಲ್ಲಿ ಶ್ರೀ ಕ್ಷೇ.ಧ. ಗ್ರಾ. ಯೋಜನೆ ವತಿಯಿಂದ ನೀರು ಉಳಿಸಿ, ಭವಿಷ್ಯದ ನೀರು ಇಂದಿನ ಕಾಳಜಿ ಅಭಿಯಾನ

Suddi Udaya
error: Content is protected !!