29.3 C
ಪುತ್ತೂರು, ಬೆಳ್ತಂಗಡಿ
June 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಯ್ಯೂರು ಸ. ಪ. ಪೂ. ಕಾಲೇಜಿನಲ್ಲಿ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

ಕೊಯ್ಯೂರು : “ವಿದ್ಯಾರ್ಥಿಯು ತನ್ನ ವಿದ್ಯಾರ್ಥಿ ಜೀವನದಲ್ಲಿ ಸುಖವನ್ನು ತ್ಯಜಿಸಿದರೆ, ಭವಿಷ್ಯದ ಜೀವನದಲ್ಲಿ ಸುಖವನ್ನು ಪಡೆಯಲು ಸಾಧ್ಯವಾಗುತ್ತದೆ ” ಎಂದು ನಡ ಸರ್ಕಾರಿ ಪದವಿಪೂರ್ವ ಕಾಲೇಜ್ ನ ಅರ್ಥ ಶಾಸ್ತ್ರ ಉಪನ್ಯಾಸಕಿ ಶ್ರೀಮತಿ ವಸಂತಿ ಪಿ. ಅಭಿಪ್ರಾಯ ಪಟ್ಟರು.

ಅವರು ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜ್ ನ ಪ್ರಥಮ ಪಿ ಯು ಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಮತ್ತು ಶೇ. 100 ಫಲಿತಾಂಶ ಪಡೆದ ದ್ವಿತೀಯ ಪಿ. ಯು. ಸಿ.ವಿದ್ಯಾರ್ಥಿಗಳನ್ನು ಅಭಿನಂದಿಸುವ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡುತ್ತಾ ಭಗವಂತ ಕರುಣಿಸಿದ ಈ ಸುಂದರ ಜೀವನವನ್ನು ಹಾಳು ಮಾಡಿಕೊಳ್ಳಬಾರದು. ದುಶ್ಚಟಗಳನ್ನು ದೂರಮಾಡಿ ಜೀವನಕ್ಕೊಂದು ಸುಂದರ ಅರ್ಥವನ್ನು ಕಲ್ಪಿಸಬೇಕು ಎಂದು ತಿಳಿಸಿದರು .

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಎಸ್. ಡಿ. ಎಂ ಕಾಲೇಜ್ ನ ಸಹ-ಪ್ರಾಧ್ಯಾ ಪಕ ದಿವ ಕೊಕ್ಕಡ ರವರು “ವಿದ್ಯಾರ್ಥಿಯು ತನ್ನ ಜೀವನದಲ್ಲಿ ನಿರ್ದಿಷ್ಟ ಗುರಿಯನ್ನು ಹೊಂದಿರಬೇಕು. ಆತ್ಮ ವಿಶ್ವಾಸ ಮತ್ತು ಪ್ರಯತ್ನದೊಂದಿಗೆ ಯಶಸ್ಸನ್ನು ಸಾಕಾರಗೊಳಿಸಿಕೊಳ್ಳಬೇಕು “ಎಂದು ಅಭಿಪ್ರಾಯಪಟ್ಟರು.

ವೇದಿಕೆಯಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ದಾಮೋದರ ಗೌಡ ಬೆರ್ಕೆ, ಕೊಯ್ಯೂರು ಪ್ರೌಢ ಶಾಲಾ ಹಿರಿಯ ಸಹಶಿಕ್ಷಕಿ ಶ್ರೀಮತಿ ಬೇಬಿ, ಗ್ರಾಮಪಂಚಾಯತ್ ಮಾಜಿ ಸದಸ್ಯರಾದ ಲೋಕೇಶ್ ಗೌಡ ಪಾಂಬೇಲು ಉಪಸ್ಥಿತರಿದ್ದರು. ಸಂಸ್ಥೆಯ ಪ್ರಾಚಾರ್ಯರಾದ ಮೋಹನ ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.


ವಿದ್ಯಾರ್ಥಿನಿಯರಾದ ಪೂಜಾಶ್ರೀ, ಯಜ್ಞ ಶ್ರೀ , ಪ್ರಜ್ಞಾ, ದೀಪಶ್ರೀ, ಕೃಪಾ ರವರ ಪ್ರಾರ್ಥನೆ ಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಪ್ರೀತಿ ಸ್ವಾಗತಿಸಿ, ಗುರುಪ್ರಸಾದ್ ಧನ್ಯವಾದವಿತ್ತರು. ವಿದ್ಯಾರ್ಥಿಗಳಾದ ದರ್ಶಿತ್,ದಿವ್ಯ ಅಭಿನಂದಿತರ ಪಟ್ಟಿ ವಾಚಿಸಿದರು. ರಶ್ಮಿತಾ ಕಾರ್ಯಕ್ರಮ ನಿರ್ವಹಿಸಿದರು. ಉಪನ್ಯಾಸಕ ಸಂತೋಷ್ ಕುಮಾರ್ , ಲಕ್ಷ್ಮಣ ಗೌಡ, ರಶ್ಮಿ ದೇವಿ, ಭವ್ಯ, ಪವಿತ್ರ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Related posts

ಗೇರುಕಟ್ಟೆ ಕೀರ್ತಿ ಶೇಷ ನರಸಿಂಹ ಮೂರ್ತಿ ಹಾಗೂ ಕೀರ್ತಿ ಶೇಷ ಸುರೇಶ್ ಪೈಯವರಿಗೆ ನುಡಿನಮನ ಹಾಗೂ ಸಂಸ್ಮರಣೆ ಯಕ್ಷಗಾನ ತಾಳಮದ್ದಳೆ 

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಶ್ರೀ ರಕ್ತೇಶ್ವರಿ ಗುಡಿ, ಶ್ರೀ ನಾಗದೇವರ ಕಟ್ಟೆ, ಹಾಗೂ ಶ್ರೀ ಪಂಜುರ್ಲಿ ದೈವದ ಕಟ್ಟೆಗಳಿಗೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ದ.ಕ. ಜಿಲ್ಲಾ ಅಸಂಘಟಿತ ಕಾರ್ಮಿಕ ಘಟಕ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ನಾರಾಯಣ ಪೂಜಾರಿ ಬಳ್ಳಮಂಜ ಆಯ್ಕೆ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ” ವಿದ್ಯಾರ್ಥಿ ಸಂಘದ ಚುನಾವಣೆ “

Suddi Udaya

ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

Suddi Udaya

ದ.ಕ. ಜಿಲ್ಲೆಯ ಹೆಚ್ಚಿನ ರೈತರಿಗೆ ಬೆಳೆ ಸಾಲ ಯೋಜನೆಯ ಸೌಲಭ್ಯ ತಲುಪುವಲ್ಲಿ ವಿಫಲ:ಅಗತ್ಯವಿರುವ ನಿಧಿಯನ್ನು ತಕ್ಷಣ ಬಿಡುಗಡೆಗೊಳಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಹಕಾರ ಮಂತ್ರಿ ಕೆ.ಎನ್.ರಾಜಣ್ಣ ಅವರಿಗೆ ಆಗ್ರಹ

Suddi Udaya
error: Content is protected !!