September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಶ್ರೀ ಧ . ಮಂ.ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೃತ್ಯ ಹಾಗೂ ಸಂಗೀತ ಉದ್ಘಾಟನೆ ಸಮಾರಂಭ

ಧರ್ಮಸ್ಥಳ: ಶ್ರೀ .ಧ .ಮ .ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಪ್ರಸಕ್ತ ವರ್ಷದ ಭರತನಾಟ್ಯ ಹಾಗೂ ಸಂಗೀತ ತರಗತಿಗಳ ಉದ್ಘಾಟನಾ ಸಮಾರಂಭ ನೆರವೇರಿತು.

ಮುಖ್ಯ ಅತಿಥಿಗಳಾಗಿ ಸಂಗೀತ ಹಾಗೂ ಯಕ್ಷಗಾನ ಪ್ರೇಮಿಯಾಗಿರುವ ಕೆ ಕೃಷ್ಣ ಆಚಾರ್ಯ ಆಗಮಿಸಿದ್ದರು. ಇವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಮಕ್ಕಳಿಗೆ ಯಾವತ್ತೂ ಶಿಸ್ತು ಎಲ್ಲಾ ಕ್ಷೇತ್ರಗಳಲ್ಲೂ ಬಹಳ ಮುಖ್ಯ ವಾಗಿದೆ. ವಿದ್ಯೆಯ ಜೊತೆಗೆ ಸಹಪಠ್ಯ ಚಟುವಟಿಕೆ ಯಲ್ಲಿ ಹೆಚ್ಚು ಭಾಗವಹಿಸಿ ತೃಪ್ತಿ ಯನ್ನು ಪಡೆದುಕೊಳ್ಳಬೇಕು ಎಂದು ಹಿತವಚನವನ್ನು ನೀಡಿದರು.

ಶಾಲಾ ನೃತ್ಯ ತರಬೇತಿ ಗುರುಗಳಾದ ಕುಮಾರಿ ಕೃತಿಕಾ ಕೆ ಎಸ್ ಮಕ್ಕಳಿಗೆ ಶುಭಾಶಯ ಕೋರಿದರು. ಸಂಗೀತ ತರಬೇತಿ ನೀಡುವ ಗುರುಗಳಾದ ಶ್ರೀಮತಿ ಸುಗುಣ ವಿ. ಕೆ. ಆಚಾರ್ಯ ರವರು ಮಕ್ಕಳಿಗೆ ಶುಭಾಶಯ ಕೋರಿ ಪೋಷಕರ ಪಾತ್ರವನ್ನು ವಿವರಿಸಿದರು. ಶಾಲಾ ಮುಖ್ಯಶಿಕ್ಷಕಿ ಶ್ರೀಮತಿ ಪರಿಮಳ ಎಂ ವಿ ರವರು ಮಾರ್ಗದರ್ಶನ ನೀಡಿದರು. ಅದಿತಿ ನಿರ್ವಹಿಸಿದ ಕಾರ್ಯಕ್ರಮದಲ್ಲಿ ಅಧ್ವಿಕಾ ಸ್ವಾಗತಿಸಿ ,ಕುಮಾರಿ ಸಾನಿಧ್ಯ ಎಸ್ ಪಿ ಕಾರ್ಯಕ್ರಮದ ವಂದನಾರ್ಪಣೆಗೈದರು. ಸೌಹಾರ್ದ ಗೌಡ ಅತಿಥಿಗಳ ಪರಿಚಯ ಮಾಡಿಕೊಟ್ಟರು. ಪೋಷಕರು ಹಾಗೂ ಶಿಕ್ಷಕರ ಸಹಭಾಗಿತ್ವದಲ್ಲಿ ಕಾರ್ಯಕ್ರಮ ಉತ್ತಮ ರೀತಿಯಲ್ಲಿ ನೆರವೇರಿತು.

Related posts

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ 13 ದಿನಗಳ ಕಾಲ ನಡೆದೆ ಸಿಸಿ ಕ್ಯಾಮರ ಆಳವಡಿಕೆ ಮತ್ತು ದುರಸ್ತಿ ತರಬೇತಿಯ ಸಮಾರೋಪ

Suddi Udaya

ಕಾಯರ್ತಡ್ಕ- ಮುದ್ದಿಗೆ ಸಂಪರ್ಕ ರಸ್ತೆಯಲ್ಲಿ ಕಾಡಾನೆಗಳ ಓಡಾಟ

Suddi Udaya

ಹತ್ಯಡ್ಕ ಪ್ರಾ.ಕೃ.ಪ. ಸಹಕಾರ ಸಂಘದ ನೂತನ “ಮುದ್ದಿಗೆ ಶಾಖೆ” ಉದ್ಘಾಟನೆ

Suddi Udaya

ಉಜಿರೆ: ಎಸ್.ಡಿ.ಎಂ ಕಾಲೇಜಿನಲ್ಲಿ ಸಿಗ್ಮಾ ಅಸೋಸಿಯೇಷನ್ ಉದ್ಘಾಟನೆ

Suddi Udaya

ವೇಣೂರು : ಗೋಳ್ತ್ಯಾರು ತಮ್ಮಯ್ಯ ದೇವಾಡಿಗ ನಿಧನ

Suddi Udaya

ಗುರುವಾಯನಕೆರೆ: ವೇದವ್ಯಾಸ ಶಿಶು ಮಂದಿರದಲ್ಲಿ ಆಟಿದ ಕೂಟ

Suddi Udaya
error: Content is protected !!