32.2 C
ಪುತ್ತೂರು, ಬೆಳ್ತಂಗಡಿ
June 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಶ್ರೀ ಧ . ಮಂ.ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೃತ್ಯ ಹಾಗೂ ಸಂಗೀತ ಉದ್ಘಾಟನೆ ಸಮಾರಂಭ

ಧರ್ಮಸ್ಥಳ: ಶ್ರೀ .ಧ .ಮ .ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಪ್ರಸಕ್ತ ವರ್ಷದ ಭರತನಾಟ್ಯ ಹಾಗೂ ಸಂಗೀತ ತರಗತಿಗಳ ಉದ್ಘಾಟನಾ ಸಮಾರಂಭ ನೆರವೇರಿತು.

ಮುಖ್ಯ ಅತಿಥಿಗಳಾಗಿ ಸಂಗೀತ ಹಾಗೂ ಯಕ್ಷಗಾನ ಪ್ರೇಮಿಯಾಗಿರುವ ಕೆ ಕೃಷ್ಣ ಆಚಾರ್ಯ ಆಗಮಿಸಿದ್ದರು. ಇವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಮಕ್ಕಳಿಗೆ ಯಾವತ್ತೂ ಶಿಸ್ತು ಎಲ್ಲಾ ಕ್ಷೇತ್ರಗಳಲ್ಲೂ ಬಹಳ ಮುಖ್ಯ ವಾಗಿದೆ. ವಿದ್ಯೆಯ ಜೊತೆಗೆ ಸಹಪಠ್ಯ ಚಟುವಟಿಕೆ ಯಲ್ಲಿ ಹೆಚ್ಚು ಭಾಗವಹಿಸಿ ತೃಪ್ತಿ ಯನ್ನು ಪಡೆದುಕೊಳ್ಳಬೇಕು ಎಂದು ಹಿತವಚನವನ್ನು ನೀಡಿದರು.

ಶಾಲಾ ನೃತ್ಯ ತರಬೇತಿ ಗುರುಗಳಾದ ಕುಮಾರಿ ಕೃತಿಕಾ ಕೆ ಎಸ್ ಮಕ್ಕಳಿಗೆ ಶುಭಾಶಯ ಕೋರಿದರು. ಸಂಗೀತ ತರಬೇತಿ ನೀಡುವ ಗುರುಗಳಾದ ಶ್ರೀಮತಿ ಸುಗುಣ ವಿ. ಕೆ. ಆಚಾರ್ಯ ರವರು ಮಕ್ಕಳಿಗೆ ಶುಭಾಶಯ ಕೋರಿ ಪೋಷಕರ ಪಾತ್ರವನ್ನು ವಿವರಿಸಿದರು. ಶಾಲಾ ಮುಖ್ಯಶಿಕ್ಷಕಿ ಶ್ರೀಮತಿ ಪರಿಮಳ ಎಂ ವಿ ರವರು ಮಾರ್ಗದರ್ಶನ ನೀಡಿದರು. ಅದಿತಿ ನಿರ್ವಹಿಸಿದ ಕಾರ್ಯಕ್ರಮದಲ್ಲಿ ಅಧ್ವಿಕಾ ಸ್ವಾಗತಿಸಿ ,ಕುಮಾರಿ ಸಾನಿಧ್ಯ ಎಸ್ ಪಿ ಕಾರ್ಯಕ್ರಮದ ವಂದನಾರ್ಪಣೆಗೈದರು. ಸೌಹಾರ್ದ ಗೌಡ ಅತಿಥಿಗಳ ಪರಿಚಯ ಮಾಡಿಕೊಟ್ಟರು. ಪೋಷಕರು ಹಾಗೂ ಶಿಕ್ಷಕರ ಸಹಭಾಗಿತ್ವದಲ್ಲಿ ಕಾರ್ಯಕ್ರಮ ಉತ್ತಮ ರೀತಿಯಲ್ಲಿ ನೆರವೇರಿತು.

Related posts

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ಮುಂಡಾಜೆ ಶ್ರೀ ಮೂರ್ತಿಲ್ಲಾಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ರಾಘವ ಶೆಟ್ಟಿ, ಕಾರ್ಯದರ್ಶಿಯಾಗಿ ಬಾಬು ಪೂಜಾರಿ ಆಯ್ಕೆ

Suddi Udaya

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ರಾಷ್ಟ್ರ ಮಟ್ಟದ ಸಾಹಿತ್ಯೋತ್ಸವದಲ್ಲಿ ವಿಜೇತರಾದವರಿಗೆ ಅಭಿನಂದನೆ

Suddi Udaya

ಮುಂಡಾಜೆಯಲ್ಲಿ ಯುವವಾಹಿನಿ ಬಿರುವೆರೆ ಗೊಬ್ಬು ಕೆಸರ್ ದ ಕಂಡಡ್ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಬೆಳ್ತಂಗಡಿ ಪ.ಪಂ. ವ್ಯಾಪ್ತಿಯ ಪೌರ ಕಾರ್ಮಿಕರಿಗೆ ಸನ್ಮಾನ

Suddi Udaya

72ನೇ ಅಖಿಲ ಭಾರತ ಸಹಕಾರಿ ಸಪ್ತಾಹದ ಅಂಗವಾಗಿ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ನಡೆಯುವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!