September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿ ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘ ಹಾಗೂ ಬೆಸ್ಟ್ ಫೌಂಡೇಶನ್ ಜಂಟಿ ಆಶ್ರಯದಲ್ಲಿ ಉಚಿತ ಪುಸ್ತಕ ವಿತರಣೆ

ನಾರಾವಿ : ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘ ನಾರಾವಿ ಹಾಗೂ ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ನಾರಾವಿ ಬಿಲ್ಲವ ಸಮಾಜದ ಒಂದನೇ ತರಗತಿಯಿಂದ ಪದವಿ ರವರೆಗೆ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುರೇಶ್ ಪೂಜಾರಿ ವಹಿಸಿದರು. ಕಾರ್ಯಕ್ರಮಕ್ಕೆ ನಾರಾವಿ ಸೂರ್ಯನಾರಾಯಣ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರವೀಂದ್ರ ಪೂಜಾರಿ ಬಾಂದೊಟ್ಟು ಚಾಲನೆ ನೀಡಿ ಮಾತನಾಡಿ ರಕ್ಷಿತ್ ಶಿವರಾಂ ಇವರ ಇಂತಹ ಒಂದು ಸಹಾಯಕ್ಕೆ ಅವರಿಗೆ ಧನ್ಯವಾದಗಳು ಇತ್ತರು. ಸಂಘದ ಅಧ್ಯಕ್ಷ ಸುರೇಶ್ ಪೂಜಾರಿ ಮಾತನಾಡಿ ಬೆಸ್ಟ್ ಫೌಂಡೇಶನ್ ಇದರಿಂದ ಬೆಳ್ತಂಗಡಿ ತಾಲೂಕಿನ ಎಲ್ಲಾ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ದೊರೆಯಲು ಇಂತಹ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ಮಾದರಿ ಎಂದು ತಿಳಿಸಿದರು.

ಜಯ ಪೂಜಾರಿ ಸ್ವಾಗತಿಸಿ , ಧನ್ಯವಾದವಿತ್ತರು. ಸುಮಾರು 159 ಮಕ್ಕಳಿಗೆ ಪುಸ್ತಕ ವಿತರಣೆ ನಡೆಸಲಾಯಿತು

Related posts

572 ಗ್ರಾಮ ಆಡಳಿತ ಅಧಿಕಾರಿ (VAO)ಹುದ್ದೆಗಳಿಗೆ ಅರ್ಜಿ ಆಹ್ವಾನ: ವಿದ್ಯಾಮಾತಾ ಅಕಾಡೆಮಿಯಿಂದ ತರಬೇತಿ ಪ್ರಾರಂಭ: ಪಿಯುಸಿ ಮುಗಿಸಿರುವಂತಹ ಅಭ್ಯರ್ಥಿಗಳಿಗೆ ಅತ್ಯುತ್ತಮ ಅವಕಾಶ

Suddi Udaya

ಬೆಳ್ತಂಗಡಿ : ಮುಖ್ಯ ಪುಸ್ತಕ ಬರಹಗಾರರಿಗೆ ಪುಸ್ತಕ ನಿರ್ವಹಣೆ ಮತ್ತು ಜವಾಬ್ದಾರಿಗಳ ಕುರಿತು ತರಬೇತಿ

Suddi Udaya

ವಿದ್ವತ್ ಜೆಇಇ ಸಾಧಕರಿಗೆ ಕಾಲೇಜು ವತಿಯಿಂದ ಅಭಿನಂದನೆ: 35 ವಿದ್ಯಾರ್ಥಿಗಳ ಪೈಕಿ 21 ಮಂದಿ ಶೇ.90 ಅಧಿಕ ಪರ್ಸೆಂಟೈಲ್ ಪಡೆದ ದಾಖಲೆ

Suddi Udaya

ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆ ಯವರ 77ನೇ ಹುಟ್ಟುಹಬ್ಬ ಆಚರಣೆ

Suddi Udaya

ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆಯಲ್ಲಿ ಕನಕದಾಸ ಜಯಂತಿ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ಇಕೋ ಕ್ಲಬ್ ಉದ್ಘಾಟನೆ

Suddi Udaya
error: Content is protected !!