July 31, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿ ಸ.ಉ.ಪ್ರಾ. ಶಾಲೆಯಲ್ಲಿ ದಾನಿಗಳಿಂದ ಉಚಿತ ಬ್ಯಾಗ್ ವಿತರಣೆ

ನಾರಾವಿ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ , ದಾನಿಗಳಿಂದ ಉಚಿತವಾಗಿ ಬ್ಯಾಗ್ ವಿತರಣೆ ಕಾರ್ಯಕ್ರಮ ನಡೆಯಿತು.

ಶ್ರೀಮತಿ ಲಕ್ಷ್ಮಿ ಪ್ರಶಾಂತ್ ಕಿಣಿಯವರು ಈ ಶಾಲೆಯ ಹಳೆ ವಿದ್ಯಾರ್ಥಿಯಾಗಿದ್ದುಕೊಂಡು ಈಗ ಬೆಂಗಳೂರಿನಲ್ಲಿ ಉತ್ತಮ ಉದ್ಯೋಗವನ್ನು ಪಡೆದು ಅಲ್ಲಿಯೇ ನೆಲೆಸಿದ್ದು ತನ್ನ ಹುಟ್ಟೂರಿನಲ್ಲಿ ಕಲಿತ ಶಾಲೆಯನ್ನು ನೆನಪಿಸಿ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸುಮಾರು ಒಂದು ಲಕ್ಷ ಮೌಲ್ಯದ ಉತ್ತಮ ಗುಣಮಟ್ಟದ ಬ್ಯಾಗನ್ನು ಪ್ರಾಥಮಿಕ ಹಾಗೂ ಪ್ರೌಢ ವಿಭಾಗದ ವಿದ್ಯಾರ್ಥಿಗಳಿಗೆ ಕುಟುಂಬ ಸಮೇತರಾಗಿ ಆಗಮಿಸಿ ವಿತರಿಸಿದರು.

ಶಾಲಾ ಅಭಿವೃದ್ಧಿ ಸಮಿತಿಯವರು ಅವರನ್ನು ಗೌರವದಿಂದ ಸನ್ಮಾನಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಅನ್ವರ್ ವಹಿಸಿದ್ದರು.ಅತಿಥಿಗಳಾಗಿ ಉದಯಕುಮಾರ್ ಹೆಗ್ಡೆ, ಪ್ರಶಾಂತ್ ಕಿಣಿ, ಶ್ರೀಮತಿ ಲಕ್ಷ್ಮೀ ಪ್ರಶಾಂತ್ ಕಿಣೆ, ಸೂರ್ಯನಾರಾಯಣ ಪೈ, ಶ್ರೀಮತಿ ದೀಪ, ಸುಧಾಕರ್ ನಾಯಕ್, ವಿನಯ ಹೆಗ್ಡೆ ಹಳೆ ವಿದ್ಯಾರ್ಥಿ, ಜನ ಸೇವಾ ಟ್ರಸ್ಟ್ ಅಧ್ಯಕ್ಷರು ಅಭಿಜಿತ್, ಹರ್ಷಿತ್ , ಶಾಲೆಗೆ ಟ್ಯೂಬ್ ಲೈಟ್ ನೀಡಿದ ದಾನಿಗಳು ಪ್ರಭಾಕರ್, ನಿವೃತ್ತ ದೈಹಿಕ ಶಿಕ್ಷಕರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಪ್ರೇಮಕುಮಾರಿ ಪಿ . ನಿವೃತ್ತ ಶಿಕ್ಷಕಿಯವರು ಉದ್ಘಾಟಿಸಿದರು. ಮುಖ್ಯ ಶಿಕ್ಷಕರು ಸುಶೀಲ ಹೆಗ್ಡೆ ಸ್ವಾಗತಿಸಿದರು. ಶಿಕ್ಷಕಿ ಶಿಲ್ಪ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಮಮತಾ.ಬಿ. ಧನ್ಯವಾದ ಕೋರಿದರು.

Related posts

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಯೂಟ್ಯೂಬರ್‌ಗಳ ಆರೋಗ್ಯ ವಿಚಾರಿಸಿದ ಬೆಳ್ತಂಗಡಿ ಡಿ.ಎಸ್.ಎಸ್(ಅಂಬೇಡ್ಕರ್‌ವಾದ) ನಿಯೋಗ

Suddi Udaya

ಮೇ 7-8: ಕೋಟಿಕಟ್ಟೆಯಲ್ಲಿ ಶ್ರೀ ಮಹಮ್ಮಾಯಿ ಅಮ್ಮನವರ ಪುನರ್ ಪ್ರತಿಷ್ಠೆ ಹಾಗೂ ಮಹಾಕುಂಭಾಭಿಷೇಕ

Suddi Udaya

ಪ್ರಧಾನಮಂತ್ರಿ ಬಗ್ಗೆ ಅವಹೇಳನಕಾರಿ ಹೇಳಿಕೆ ಖಂಡಿಸಿ ಪ್ರತಿಭಟನೆ

Suddi Udaya

ದ.ಕ. ಜಿಲ್ಲೆಯಲ್ಲಿ ಬಿಎಸ್ಸೆನ್ನೆಲ್ 4ಜಿ ಸೇವೆ

Suddi Udaya

ಅಳದಂಗಡಿ: ಬಡಗಕಾರಂದೂರು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಕನ್ಯಾಡಿ 2: ಸ.ಉ. ಹಿ.ಪ್ರಾ. ಶಾಲೆಗೆ ಕನ್ಯಾಡಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಪ್ರಿಂಟರ್ ಕೊಡುಗೆ

Suddi Udaya
error: Content is protected !!