ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ನಗರ ಮಹಿಳಾ ಘಟಕದ ಸಭೆ ನಡೆಯಿತು.
ವಂದನಾ ಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರವರು ಮಹಿಳಾ ಸಂಘಟನೆ, SIR, ಮಹಿಳಾ ಮೀಸಲಾತಿ ಬಗ್ಗೆ ಮಾಹಿತಿ ನೀಡಿದರು. ರಾಜ್ಯ ಮಹಿಳಾ ಪ್ರಧಾನ ಕಾರ್ಯದರ್ಶಿ ನಮಿತಾ ಪೂಜಾರಿಯವರು ಕಾಂಗ್ರೆಸ್ ಪಕ್ಷದಲ್ಲಿ ಇರುವ ಶಿಸ್ತು, ಸಿದ್ದಾಂತ, ಸಂಘಟನೆ ಬಗ್ಗೆ ಮಾಹಿತಿ ನೀಡಿದರು. ಗ್ರಾಮೀಣ ಮಹಿಳಾ ಘಟಕದ ಅಧ್ಯಕ್ಷ ನಾಗೇಶ ಗೌಡ ರವರು SIR ಬಗ್ಗೆ ಮಾಹಿತಿ ನೀಡಿದರು.

ಜಿಲ್ಲಾ ಉಪಾಧ್ಯಕ್ಷೆ ಉಷಾ ಶರತ್ , ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುಷ್ಪಲತಾ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮರೀಟ ಪಿಂಟೋ , ಜಿಲ್ಲಾ ಪ್ರಧಾನ ಕಾರ್ಯದರ್ಶಿ ತೇಜಾಕ್ಷಿ, ಸಾಹಿರ ಬಾನು, ಯಶೋದ, ಹರ್ಷಲತಾ, ವಸಂತಿ ಆಚಾರಿ , ಸವಿತಾ, ಸುಪ್ರೀಯಾ, ಕಳಿಯ ಗ್ರಾಮ ಪಂಚಾಯತ್ ಸದಸ್ಯೆ ಶ್ವೇತಾ, ನಗರ ಬ್ಲಾಕ್ ಕಾರ್ಯದರ್ಶಿ ಷಾಫೀ,, ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು.













