September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ್ಯ ಮಟ್ಟದ ಫಾಸ್ಟ್ ಫೈವ್ ಪುರುಷರ ಹಾಗೂ ಮಹಿಳೆಯರ ನೆಟ್‌ಬಾಲ್ ಚಾಂಪಿಯನ್‌ಶಿಪ್‌: ಉಜಿರೆಯ ಎಸ್.ಡಿ.ಎಂ ವಿದ್ಯಾರ್ಥಿಗಳಿಗೆ ಅವಳಿ ಚಾಂಪಿಯನ್ಸ್ ಪ್ರಶಸ್ತಿ

ಉಜಿರೆ : ಮಂಡ್ಯ ಜಿಲ್ಲೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಕರ್ನಾಟಕ ನೆಟ್ ಬಾಲ್ ಅಸೋಸಿಯೇಷನ್ ಹಾಗು ಮಂಡ್ಯ ಜಿಲ್ಲಾ ನೆಟ್ ಬಾಲ್ ಅಸೋಸಿಯೇಷನ್ ಜಂಟಿ ಆಶ್ರಯದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಪುರುಷ ಮತ್ತು ಮಹಿಳಾ ಫಾಸ್ಟ್ ಫೈವ್ ನೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಸಕ್ರೀಯವಾಗಿ ಭಾಗವಹಿಸಿದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜು ಹಾಗೂ ಉಜಿರೆಯ ಎಸ್.ಡಿ.ಎಂ ಕ್ರೀಡಾ ಸಂಘದ ಪುರುಷ ಹಾಗೂ ಮಹಿಳಾ ವಿದ್ಯಾರ್ಥಿಗಳು ಅವಳಿ ಚಾಂಪಿಯನ್ಸ್ ಪ್ರಶಸ್ತಿ ಪಡೆಯುವುದರ ಮೂಲಕ ವಿಶೇಷ ಸಾಧನೆ ಗೈದಿದ್ದಾರೆ.

ಸೆಮಿಫೈನಲ್ ಹಂತದ ಮಹಿಳೆಯರ ನೆಟ್ ಬಾಲ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯು ಹಾಸನ ಜಿಲ್ಲಾ ಮಹಿಳೆಯರ ತಂಡವನ್ನು 24-16 ಅಂಕಗಳ ಅಂತರದಲ್ಲಿ ಮಣಿಸಿ ಫೈನಲ್ ಹಂತವನ್ನು ತಲುಪಿತು. ಫೈನಲ್ ಪಂದ್ಯದಲ್ಲಿ ಬೆಂಗಳೂರು ಸಿಟಿ ತಂಡವನ್ನು ಎದುರಿಸಿ 18-11 ಅಂಕಗಳಿಂದ ಮಣಿಸುವ ಮೂಲಕ ಪ್ರಥಮ ಸ್ಥಾನವನ್ನು ಪಡೆಯಿತು. ಜಿಲ್ಲೆಯನ್ನು ಪ್ರತಿನಿಧಿಸಿದ ಮಹಿಳಾ ತಂಡದಲ್ಲಿ ಉಜಿರೆಯ ಎಸ್.ಡಿ.ಎಂ ಕಾಲೇಜಿನ 10 ಜನ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿದರು.

ಪ್ರಶಸ್ತಿ ವಿಜೇತ ತಂಡದಲ್ಲಿ ವಿದ್ಯಾರ್ಥಿಗಳಾದ ರಶ್ಮಿ ಎಸ್‌.(ನಾಯಕಿ), ವರ್ಷಿತಾ (ದ್ವಿತೀಯ ಎಂಎಸ್‌ಡಬ್ಲ್ಯೂ), (ಪ್ರಥಮ ಎಂಎಸ್‌ಡಬ್ಲ್ಯೂ), ಸುರಕ್ಷಾ ಆಚಾರ್ಯ (ತೃತೀಯ ಬಿ.ಕಾಂ), ಪಲ್ಲವಿ (ತೃತೀಯ ಬಿ.ಕ), ಭೂಮಿಕಾ ಶೆಟ್ಟಿ (ದ್ವಿತೀಯ ಬಿ.ಕಾಂ), ಸಹನಾ (ದ್ವಿತೀಯ ಬಿ.ಕಾಂ), ಸಿಂಚನಾ (ಪ್ರಥಮ ಬಿ.ಕಾಂ), ಸುಪ್ರಿಯಾ (ದ್ವಿತೀಯ ಪಿಯುಸಿ), ದೀಪ್ತಿ(ದ್ವಿತೀಯಪಿಯುಸಿ), ನಮಿತಾ( ಪ್ರಥಮ ಪಿಯುಸಿ) ಭಾಗವಹಿಸಿದ್ದರು.

ಪುರುಷ ವಿಭಾಗದ ಫೈನಲ್ ಪಂದ್ಯಾಟದಲ್ಲಿ ಉಜಿರೆಯ ಎಸ್.ಡಿ.ಎಂ ಕಾಲೇಜಿನ ಏಳು ಜನ ವಿದ್ಯಾರ್ಥಿಗಳನ್ನು ಹೊಂದ್ದಿದ್ದ ದಕ್ಷಿಣ ಕನ್ನಡ ಜಿಲ್ಲೆಯು ಚಾಮರಾಜನಗರ ಪುರುಷರ ತಂಡವನ್ನು ಸೋಲಿಸಿ ಪೈನಲ್ ಪ್ರವೇಶ ಪಡೆಯಿತು. ಬಳಿಕ ಫೈನಲ್ ಪಂದ್ಯದಲ್ಲಿ ಹಾಸನ ಜಿಲ್ಲಾ ಪುರುಷರ ತಂಡದೊಂದಿಗೆ ಸೆಣಸಾಡಿ ದ್ವಿತೀಯ ಸ್ಥಾನವನ್ನು ಪಡೆಯಿತು. ತಂಡದಲ್ಲಿ ಎಸ್.ಡಿ.ಎಂ ಕಾಲೇಜಿನ ದ್ವಿತೀಯ ವರ್ಷದ ಎಂಎಸ್ ಡಬ್ಲ್ಯೂ ವಿದ್ಯಾರ್ಥಿಗಳಾದ ಚಿಂತನ ಬಿ ಸಿ (ನಾಯಕ), ಪುನೀತ್ ಕುಮಾರ್
ಪ್ರವೀಣ ಈರಪ್ಪ ಬಿಳ್ಳೂರ, ಪ್ರಥಮ ವರ್ಷದ ಮನೋಜ ಎನ್, ಮಿಥುನ್ ಎ, ಶೋಭಿತ್ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ್ದರು.

ಪ್ರಶಸ್ತಿ ವಿಜೇತ ಮಹಿಳಾ ಹಾಗು ಪುರುಷರ‌ ನೆಟ್ ಬಾಲ್ ತಂಡಕ್ಕೆ ಎಸ್.ಡಿ.ಎಂ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಸುದೀನ್ ಪೂಜಾರಿ ತರಬೇತಿಯನ್ನು ನೀಡಿರುತ್ತಾರೆ. ಪ್ರಶಸ್ತಿ ವಿಜೇತ ತಂಡದೊಂದಿಗೆ ಎಸ್.ಡಿ.ಎಂ ಕಾಲೇಜಿನ ಹಿರಿಯ ವಿದ್ಯಾರ್ಥಿ ಅಂತರಾಷ್ಟ್ರೀಯ ನೆಟ್ ಬಾಲ್ ಕ್ರೀಡಾಪಟು ನಿತಿನ್ ಪುಜಾರಿ ಮತ್ತು ರಾಷ್ಟ್ರೀಯ ನೆಟ್ ಬಾಲ್ ಆಟಗಾರ ತುಷಾರ್ ಉಪಸ್ಥಿತರಿದ್ದರು.

Related posts

ಅ.3-11: ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ಕ್ಷೇಮ ನಿಧಿಯ 15ನೇ ಸಹಾಯಧನ ವಿತರಣೆ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

Suddi Udaya

ಬೆಳ್ತಂಗಡಿ ವರ್ತಕರ ಸಂಘದ ವತಿಯಿಂದ ಹೂವಿನ ವ್ಯಾಪಾರಿ ಶಿವರಾಮ್ ರವರಿಗೆ ಆರ್ಥಿಕ ಸಹಾಯ

Suddi Udaya

ಫೆ-2: ಅಭ್ಯಾಸ್ ಅಕಾಡೆಮಿ ಮತ್ತು ಪೈ ಅಕಾಡೆಮಿಯಿಂದ ಪರಿಣಿತ ವಿಷಯ ಸಂಪನ್ಮೂಲ ತರಬೇತುದಾರರಿಂದ ಪರೀಕ್ಷಾ ಪೂರ್ವ ಸಿದ್ಧತೆ ಬಗ್ಗೆ ಉಚಿತ ತರಬೇತಿ ಕಾರ್ಯಾಗಾರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ದ.ಕ. ಜಿಲ್ಲೆಯ ಸಿ.ಬಿ.ಎಸ್.ಇ ಅಂತರ ಶಾಲೆಗಳ ಐಕ್ಸ್ (AICS) ಸಾಂಸ್ಕೃತಿಕ ಸ್ಪರ್ಧೆ

Suddi Udaya
error: Content is protected !!