ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಶಿಕ್ಷಣದ ಮೇಲಿನ ಕಾಳಜಿ ಮತ್ತು ಬದ್ಧತೆಯ ಪ್ರತೀಕವಾಗಿ ವಾಣಿ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗಾಗಿ ವೈಯಕ್ತಿಕವಾಗಿ ಸುಮಾರು ರೂ.5 ಲಕ್ಷ ಮೊತ್ತವನ್ನು ನೀಡಿ ಸಂಸ್ಥೆ ಯ ಪ್ರಗತಿಗೆ ಅಮೂಲ್ಯ ಕೊಡುಗೆಯನ್ನು ನೀಡಿದ್ದಾರೆ.
ಅವರ ಈ ಸದುದ್ದೇಶದ ಸಹಕಾರವು ಸಂಸ್ಥೆಯ ಬೆಳವಣಿಗೆಗೆ ಹೊಸ ಚೈತನ್ಯ ತುಂಬುವುದರ ಜೊತೆಗೆ, ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ನಿರ್ಮಾಣದ ಪಯಣಕ್ಕೆ ಮತ್ತಷ್ಟು ಬಲ ತುಂಬಿದೆ.













