August 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಅಭಿವೃದ್ಧಿ ಕುರಿತು ಮಂಗಳೂರು ವಲಯ ಸಮಾಲೋಚನಾ ಸಭೆ

ಮಂಗಳೂರು: ದೇಯಿ ಬೈದೆತಿ ಕೋಟಿ-ಚೆನ್ನಯ ಮೂಲಸ್ಥಾನವಾದ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಧಾರ್ಮಿಕ ಚಟುವಟಿಕೆಗಳ ಜೊತೆಗೆ ಸಾಮಾಜಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿಗೆ ಸಂಬಂಧಿಸಿದಂತೆ ಮಂಗಳೂರು ವಲಯದ ಉದ್ಯಮಿಗಳು ಮತ್ತು ಸಮಾಜದ ಪ್ರಮುಖರ ಸಮಾಲೋಚನಾ ಸಭೆ ನಗರದ ಹೋಟೆಲ್ ದೀಪಾ ಕಂಫರ್ಟ್‌ನಲ್ಲಿ ನಡೆಯಿತು.

ಸಭೆಯಲ್ಲಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ರವಿಪೂಜಾರಿ ಚಿಲಿಂಬಿ ಮಾತನಾಡಿ, ಸುಮಾರು 550 ವರ್ಷಗಳ ಇತಿಹಾಸ ಹೊಂದಿರುವ ಗೆಜ್ಜೆಗಿರಿ ಕ್ಷೇತ್ರವು ತುಳುನಾಡಿನ ಸುಮಾರು 270 ಗರಡಿಗಳಲ್ಲಿ ಆರಾಧಿಸಲ್ಪಡುವ ಬೈದರುಗಳು ಹಾಗೂ ಅವರ ತಾಯಿ ಮಾತೆ ದೇಯಿ ಬೈದೆತಿಯ ಮೂಲಸ್ಥಾನವಾಗಿದೆ ಎಂದರು. ಆದಿ ಧೂಮಾವತಿ, ಕುಪ್ಪೆ ಪಂಜುರ್ಲಿ, ಬ್ರಹ್ಮ ಬೈದರುಗಳು ಹಾಗೂ ಮಾತೆ ದೇಯಿ ಬೈದೆತಿ ಪರಿವಾರ ಶಕ್ತಿಗಳ ದಿವ್ಯ ಸಾನ್ನಿಧ್ಯ ಹೊಂದಿರುವ ಈ ಕ್ಷೇತ್ರವು ಬಿಲ್ಲವ ಸಮುದಾಯದ ಮೂಲ ಕ್ಷೇತ್ರವಾಗಿದೆ ಎಂದು ತಿಳಿಸಿದರು. 2016ರಲ್ಲಿ ಕ್ಷೇತ್ರದ ಸಮೀಪ ಸುಮಾರು ಐದು ಎಕರೆ ಜಾಗ ಖರೀದಿಸಿ, ಅದರ ಅಭಿವೃದ್ಧಿಗಾಗಿ ಗೆಜ್ಜೆಗಿರಿ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್ ಸ್ಥಾಪಿಸಲಾಗಿದೆ ಎಂದು ಅವರು ಹೇಳಿದರು.

ಗೆಜ್ಜೆಗಿರಿ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸಂಜೀವ ಪೂಜಾರಿ ಬಿರ್ವ ಮಾತನಾಡಿ, ಭಕ್ತರ ಅನುಕೂಲಕ್ಕಾಗಿ ಯಾತ್ರಿ ನಿವಾಸ, ದೇಯಿ ಬೈದೆತಿ ಆಯುರ್ವೇದ ಕೇಂದ್ರ, ಔಷಧೀಯ ಉದ್ಯಾನವನ ಹಾಗೂ ಇತರ ಮೂಲಸೌಕರ್ಯಗಳನ್ನು ನಿರ್ಮಿಸುವ ಯೋಜನೆ ರೂಪಿಸಲಾಗಿದೆ. ಈಗಾಗಲೇ ಸುಮಾರು ಏಳು ಕೋಟಿ ರೂಪಾಯಿ ವೆಚ್ಚದಲ್ಲಿ ಕಟ್ಟಡ ಕಾಮಗಾರಿ ಆರಂಭಗೊಂಡಿದೆ ಎಂದು ತಿಳಿಸಿದರು.

ಕ್ಷೇತ್ರಾಡಳಿತ ಸಮಿತಿಯ ಗೌರವಾಧ್ಯಕ್ಷ ಪೀತಾಂಬರ ಹೇರಾಜೆ ಮಾತನಾಡಿ ತುಳುನಾಡಿನ ಜನಪದ ಪರಂಪರೆ ಹಾಗೂ ಭಕ್ತಿ ಭಾವದಿಂದ ಕೂಡಿದ ಈ ಕಾರ್ಣಿಕ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಎಲ್ಲರೂ ಸಹಕಾರ ನೀಡುವಂತೆ ಮನವಿ ಮಾಡಿದರು.

ವಾಸ್ತು ತಜ್ಞ ಪ್ರಮಾಲ್ ಕುಮಾರ್ ಅವರು ನಡೆಯುತ್ತಿರುವ ಕಾಮಗಾರಿಗಳ ಕುರಿತು ವಿವರ ನೀಡಿದರು. ಸಭೆಯಲ್ಲಿ ಚಂದ್ರಹಾಸ ಅಮೀನ್, ಡಾ. ಸದಾನಂದ ಪೂಜಾರಿ, ಊರ್ಮಿಳಾ ರಮೇಶ್ ಕುಮಾರ್, ಮಾಜಿ ಕಾರ್ಪೊರೇಟರ್ ಅನಿಲ್ ಕುಮಾರ್, ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿ ಕೋಶಾಧಿಕಾರಿ ಮೋಹನ್ ದಾಸ್ ವಾಮಂಜೂರು, ಗೆಜ್ಜೆಗಿರಿ ಅಭಿವೃದ್ಧಿ ಟ್ರಸ್ಟ್ ಉಪಾಧ್ಯಕ್ಷ ದೀಪಕ್ ಕೋಟ್ಯಾನ್, ಅಭಿವೃದ್ಧಿ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಕ್ಷೇತ್ರಾಡಳಿತ ಸಮಿತಿ ಕಾನೂನು ಸಲಹೆಗಾರರಾದ ನವನೀತ್ ಹಿಂಗಾಣಿ, ಸದಸ್ಯರಾದ ಚಂದ್ರಹಾಸ ಉಚ್ಚಿಲ್, ನಾರಾಯಣ ಮಚ್ಚಿನ, ಹರೀಶ್ ಕೆ. ಪೂಜಾರಿ, ನಿತ್ಯಾನಂದ ನಾವರ, ನಾಗೇಶ್ ಪೂಜಾರಿ ಬೈಕಂಪಾಡಿ, ಕುಮಾರ್ ಇರುವೈಲ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ಗೆಜ್ಜೆಗಿರಿ ಮಾಧ್ಯಮ ವಕ್ತಾರ ರಾಜೇಂದ್ರ ಚಿಲಿಂಬಿ ಧನ್ಯವಾದವಿತ್ತರು.

Related posts

ಬಳಂಜ ಸುವರ್ಣ ನಿಲಯದಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಸಾಮಾಜಿಕ ಪರಿಶೋಧನೆ ಬಗ್ಗೆ ವಿಶೇಷ ಗ್ರಾಮ ಸಭೆ

Suddi Udaya

ಫೆ.1-5: ನಿಟ್ಟಡೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರ ಬರ್ಕಜೆಯಲ್ಲಿ 9ನೇ ವರ್ಷದ ಜಾತ್ರಾ ಮಹೋತ್ಸವ

Suddi Udaya

ಕಡಿರುದ್ಯಾವರ : ಕಾನರ್ಪ ಒಕ್ಕೂಟ ಅನ್ನಪೂರ್ಣೇಶ್ವರಿ ಸಂಘದ ಸದಸ್ಯೆಯ ಮನೆ ದುರಸ್ತಿ ಕಾರ್ಯ ನಡೆಸಿದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರ.ದ. ಕಾಲೇಜಿನಲ್ಲಿ ಯೋಗ ದಿನಾಚರಣೆ

Suddi Udaya

ಸರಕಾರಿ ಪ.ಪೂ. ಕಾಲೇಜು ಬೆಳ್ತಂಗಡಿಯ ರಾಜ್ಯ ಪ್ರಶಸ್ತಿ ಪಡೆದ ಪ್ರಾಂಶುಪಾಲರಾದ ಸುಕುಮಾರ್ ರವರಿಗೆ ಅಭಿನಂದನೆ: ವಗಾ೯ವಣೆಗೊಂಡ ಉಪನ್ಯಾಸಕ ಗಣಪತಿ ಭಟ್ ರವರಿಗೆ ಬೀಳ್ಕೊಡುಗೆ

Suddi Udaya
error: Content is protected !!