29.3 C
ಪುತ್ತೂರು, ಬೆಳ್ತಂಗಡಿ
June 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಗತಿಯ ಉದ್ಘಾಟನೆ

ಸುಲ್ಕೇರಿ : ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಸುಲ್ಕೇರಿ, ಶ್ರೀರಾಮ ಶಾಲೆ, ಸುಲ್ಕೇರಿಯಲ್ಲಿ ಜೂ.16ರಂದು ಯಕ್ಷಗಾನ ನಾಟ್ಯ ತರಗತಿಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಕರ್ನಾಟಕದ ಜನಪದ ಕಲೆಯಲ್ಲೊಂದಾದ ಯಕ್ಷಗಾನದ ಕಂಪನ್ನು ವಿದ್ಯಾರ್ಥಿಗಳಲ್ಲಿ ತುಂಬಿ ಕಲಾಭಿರುಚಿಯನ್ನು ಮೂಡಿಸುವ ಧ್ಯೇಯದೊಂದಿಗೆ 4 ವರ್ಷಗಳ ಹಿಂದೆ ಶಾಲೆಯಲ್ಲಿ ಯಕ್ಷಗಾನ ತರಬೇತಿಯನ್ನು ಆರಂಭಿಸಲಾಗಿದ್ದು ಕಳೆದ ವರ್ಷದಿಂದ ಯಕ್ಷಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್(ರಿ) ಮಂಗಳೂರು ಯಕ್ಷಧ್ರುವ–ಯಕ್ಷ ಶಿಕ್ಷಣ ಕಾರ್ಯಕ್ರಮಕ್ಕೆ ಹಸ್ತಾಂತರಗೊಂಡಿದ್ದು ಈ ವರ್ಷ 2ನೇ ವರ್ಷದ ಉದ್ಘಾಟನಾ ಕಾರ್ಯಕ್ರಮವು ಶಾಲೆಯಲ್ಲಿ ನಡೆಯಿತು .

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ರಾಜು ಪೂಜಾರಿ ವಹಿಸಿಕೊಂಡಿದ್ದರು . ಶಾಲಾ ಆಡಳಿತ ಮಂಡಳಿಯ ಗೌರವಾಧ್ಯಕ್ಷ ಗಣೇಶ್ ಹೆಗ್ಡೆ, ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳೆಂಜ ಹಾಗೂ ಮಂಗಳೂರು ಯಕ್ಷಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್ ಯಕ್ಷಧ್ರುವ ಯಕ್ಷ ಶಿಕ್ಷಣ ಬೆಳ್ತಂಗಡಿ ಘಟಕ ಅಧ್ಯಕ್ಷ ಸುರೇಶ್ ಶೆಟ್ಟಿ , ಲಯನ್ಸ್ ಅಧ್ಯಕ್ಷ ಲಯನ್ ದೇವದಾಸ್ ಶೆಟ್ಟಿ ಬದ್ಯಾರು, ಮಂಗಳೂರು ಯಕ್ಷಧ್ರುವ ಯಕ್ಷಶಿಕ್ಷಣ ಪಟ್ಲ ಪೌಂಡೇಶನ್ ಟ್ರಸ್ಟ್ ಪ್ರಧಾನ ಸಂಚಾಲಕ ವಾಸುದೇವ ಐತಾಳ , ಶಿತಿಕಂಠ ಭಟ್ ಉಜಿರೆ ಗಣೇಶ್ ಕ್ಲಿನಿಕಲ್ ಲ್ಯಾಬೋರೆಟರಿ ಬೆಳ್ತಂಗಡಿ , ಶ್ರೀಮತಿ ಧನುಷಾ ಇಕೋ ಫ್ರೆಶ್ ಎಂಟರ್ ಪ್ರೈಸಸ್ ಹಾಗೂ ವೀರ ಮಾರುತಿ ಇಂಡಸ್ಟ್ರೀಸ್ ಇದರ ಪ್ರೊಪ್ರೇಟರ್ , ಶ್ರೀ ಸುಲ್ಕೇರಿ ಮಹಮ್ಮಾಯಿ ದೇವಸ್ಥಾನ ಅಧ್ಯಕ್ಷ ಪಾರ್ಶ್ವನಾಥ ಜೈನ್, ದೇವಿಪ್ರಸಾದ್ ಗುರುವಾಯನಕೆರೆ ಯಕ್ಷಗಾನ ತರಬೇತಿ ಗುರುಗಳು , ಶ್ರೀರಾಮ ಪ್ರೌಢ ಶಾಲೆ ಮುಖ್ಯೋಪಾಧ್ಯಾಯರು ಪ್ರಮೋದ ಕುಮಾರ್ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಮುಖ್ಯೋಪಾದ್ಯಾಯರು ಶಶಿಕಲಾ ಪ್ರಾಸ್ತಾವಿಕ ಮಾತಿನೊಂದಿಗೆ ಸ್ವಾಗತಿಸಿ , ಪೂರ್ವ ಗುರುಕುಲ ಮುಖ್ಯಸ್ಥೆ ಸ್ವಾತಿ ಧನ್ಯವಾದವಿತ್ತರು. ಶಿಕ್ಷಕಿ ಹೇಮಲತಾ ಕಾರ್ಯಕ್ರಮ ನಿರೂಪಿಸಿದರು.

Related posts

ಕಾಡು ಹಂದಿ ಬೈಕ್ ಗೆ ಡಿಕ್ಕಿ ತಂದೆ ಮಗನಿಗೆ ಗಾಯ

Suddi Udaya

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಜೇಶ್ವರಿ, ಉಪಾಧ್ಯಕ್ಷರಾಗಿ ಚಂದ್ರಾವತಿ ಅವಿರೋಧ ಆಯ್ಕೆ

Suddi Udaya

ಡಿ.ಕೆ.ಆರ್. ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ, ಕ್ಯಾನ್ಸರ್ ಜನಜಾಗೃತಿ ಅಭಿಯಾನ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ರಾವ್ ಸೇವಾ ನಿವೃತ್ತಿ

Suddi Udaya

ಅರಸಿನಮಕ್ಕಿಯಲ್ಲಿ ಮಕ್ಕಳ ಸಂಸ್ಕಾರ ಶಿಬಿರ ಸಂಪನ್ನ

Suddi Udaya

ಸಮಾಜ ಸೇವಕ, ರಾಜಕೇಸರಿ ಟ್ರಸ್ಟ್‌ನ ಸಂಸ್ಥಾಪಕ ದೀಪಕ್ ಜಿ. ರವರಿಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ

Suddi Udaya
error: Content is protected !!