July 31, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸೋಣಂದೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಸಂಘ ಉದ್ಘಾಟನೆ

ಸೋಣಂದೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೋಣಂದೂರು ಇಲ್ಲಿ 2026-27 ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆ ಸಮಾರಂಭವನ್ನು ಜೂ.15 ರಂದು ಜರಗಿತು.


ವಿದ್ಯಾರ್ಥಿ ಜೀವನ ಎಂದರೆ ಕೇವಲ ಪಾಠ ಪ್ರವಚನಗಳಿಗೆ ಸೀಮಿತವಾಗಿರದೆ ಶಿಸ್ತು ಆರೋಗ್ಯ ಜವಾಬ್ದಾರಿಗಳ ಬಗ್ಗೆ ತಿಳುವಳಿಕೆ ಇರಬೇಕು ಎಂಬ ಕಾರಣಕ್ಕೆ ವಿದ್ಯಾರ್ಥಿ ಜೀವನದ ಹಂತದಲ್ಲಿ ಚುನಾವಣಾ ಪ್ರಚಾರ ಮತದಾನದ ಬಗ್ಗೆ ಅರಿವು ಮೂಡಿಸಲಾಯಿತು.

ಜೂ 6 ರಂದು ನಡೆದ ಚುನಾವಣೆಯಲ್ಲಿ ಶಾಲಾ ಮುಖ್ಯಮಂತ್ರಿ ಆಗಿ 7ನೇ ತರಗತಿಯ ಗಗನ್, ಉಪಮುಖ್ಯಮಂತ್ರಿಯಾಗಿ 6ನೇ ತರಗತಿಯ ಮೊಹಮ್ಮದ್ ಫೈಜಲ್, ಶಾಲಾ ಗೃಹಮಂತ್ರಿಯಾಗಿ 6ನೇ ತರಗತಿಯ ಫಾತಿಮಾತ್ ರಿಫಾ ಅವರು ಆಯ್ಕೆಯಾಗಿರುತ್ತಾರೆ.


ಶಾಲಾ ಸಂಸತ್ತಿನಲ್ಲಿ ಶಾಲಾ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ವಿರೋಧಪಕ್ಷ, ಶಿಸ್ತು ಮತ್ತು ಶಿಕ್ಷಣ, ಆಹಾರ ಮತ್ತು ಆರೋಗ್ಯ, ಸಾಂಸ್ಕೃತಿಕ ಮಂತ್ರಿ, ಕ್ರೀಡಾ ಮಂತ್ರಿ, ನೀರಾವರಿ ಮತ್ತು ತೋಟಗಾರಿಕೆ, ವಾರ್ತಾ ಮಂತ್ರಿ ಮತ್ತು ಉಪ ಮಂತ್ರಿ ಗಳ ಆಯ್ಕೆ ನಡೆಸಲಾಯಿತು.


ಮಂತ್ರಿಗಳ ಜವಾಬ್ದಾರಿಯನ್ನು ಮುಖ್ಯ ಶಿಕ್ಷಕಿ ಅನಿತಾ ರೇಷ್ಮಾ ತಿಳಿಸಿದರು. ಸಹ ಶಿಕ್ಷಕಿ ರಕ್ಷಾ ಪ್ರತಿಜ್ಞಾವಿಧಿ ನೆರವೇರಿಸಿದರು. ಸಹಶಿಕ್ಷಕಿ ರಶ್ಮಿ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಶಿಬಾಜೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಚಾರಣೆಯ ಅಂಗವಾಗಿ ಬಹುಮಾನ ವಿತರಣಾ ಸಮಾರಂಭ

Suddi Udaya

ತೆಕ್ಕಾರು ಉಪ ಆರೋಗ್ಯ ಕೇಂದ್ರಕ್ಕೆ ಕಟ್ಟಡ ನಿರ್ಮಿಸಲು ಅನುದಾನ ಮಂಜೂರುಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ತೆಕ್ಕಾರು ಗ್ರಾ.ಪಂ. ಸದಸ್ಯ ಅಬ್ದುಲ್ ರಝಾಕ್ ರವರಿಂದ ಮನವಿ

Suddi Udaya

ಬೆಳ್ತಂಗಡಿಯ ನೂತನ ಬಸ್ ನಿಲ್ದಾಣ ಕಾಮಗಾರಿಗೆ ಭೂಮಿಪೂಜೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಬಾರ್ಯ, ತೆಕ್ಕಾರು ಪುತ್ತಿಲ ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿ ಯೋಜನೆಯ ಸೇವಾಪ್ರತಿನಿಧಿಗಳ ಪ್ರಗತಿ ಪರಿಶೀಲನಾ ಸಭೆ

Suddi Udaya
error: Content is protected !!