32.2 C
ಪುತ್ತೂರು, ಬೆಳ್ತಂಗಡಿ
June 16, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸೋಣಂದೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಸಂಘ ಉದ್ಘಾಟನೆ

ಸೋಣಂದೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೋಣಂದೂರು ಇಲ್ಲಿ 2026-27 ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆ ಸಮಾರಂಭವನ್ನು ಜೂ.15 ರಂದು ಜರಗಿತು.


ವಿದ್ಯಾರ್ಥಿ ಜೀವನ ಎಂದರೆ ಕೇವಲ ಪಾಠ ಪ್ರವಚನಗಳಿಗೆ ಸೀಮಿತವಾಗಿರದೆ ಶಿಸ್ತು ಆರೋಗ್ಯ ಜವಾಬ್ದಾರಿಗಳ ಬಗ್ಗೆ ತಿಳುವಳಿಕೆ ಇರಬೇಕು ಎಂಬ ಕಾರಣಕ್ಕೆ ವಿದ್ಯಾರ್ಥಿ ಜೀವನದ ಹಂತದಲ್ಲಿ ಚುನಾವಣಾ ಪ್ರಚಾರ ಮತದಾನದ ಬಗ್ಗೆ ಅರಿವು ಮೂಡಿಸಲಾಯಿತು.

ಜೂ 6 ರಂದು ನಡೆದ ಚುನಾವಣೆಯಲ್ಲಿ ಶಾಲಾ ಮುಖ್ಯಮಂತ್ರಿ ಆಗಿ 7ನೇ ತರಗತಿಯ ಗಗನ್, ಉಪಮುಖ್ಯಮಂತ್ರಿಯಾಗಿ 6ನೇ ತರಗತಿಯ ಮೊಹಮ್ಮದ್ ಫೈಜಲ್, ಶಾಲಾ ಗೃಹಮಂತ್ರಿಯಾಗಿ 6ನೇ ತರಗತಿಯ ಫಾತಿಮಾತ್ ರಿಫಾ ಅವರು ಆಯ್ಕೆಯಾಗಿರುತ್ತಾರೆ.


ಶಾಲಾ ಸಂಸತ್ತಿನಲ್ಲಿ ಶಾಲಾ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ವಿರೋಧಪಕ್ಷ, ಶಿಸ್ತು ಮತ್ತು ಶಿಕ್ಷಣ, ಆಹಾರ ಮತ್ತು ಆರೋಗ್ಯ, ಸಾಂಸ್ಕೃತಿಕ ಮಂತ್ರಿ, ಕ್ರೀಡಾ ಮಂತ್ರಿ, ನೀರಾವರಿ ಮತ್ತು ತೋಟಗಾರಿಕೆ, ವಾರ್ತಾ ಮಂತ್ರಿ ಮತ್ತು ಉಪ ಮಂತ್ರಿ ಗಳ ಆಯ್ಕೆ ನಡೆಸಲಾಯಿತು.


ಮಂತ್ರಿಗಳ ಜವಾಬ್ದಾರಿಯನ್ನು ಮುಖ್ಯ ಶಿಕ್ಷಕಿ ಅನಿತಾ ರೇಷ್ಮಾ ತಿಳಿಸಿದರು. ಸಹ ಶಿಕ್ಷಕಿ ರಕ್ಷಾ ಪ್ರತಿಜ್ಞಾವಿಧಿ ನೆರವೇರಿಸಿದರು. ಸಹಶಿಕ್ಷಕಿ ರಶ್ಮಿ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ವೇಣೂರು: ರಾಜೇಶ್ ಆಚಾರ್ಯ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಗುರುವಾಯನಕೆರೆ: ದರ್ಗಾ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಯಾಕೂಬ್ ಮುಸ್ಲಿಯಾರ್ ಆಯ್ಕೆ

Suddi Udaya

ಮಾ.31: ಲಾಯಿಲ ಪಿಲಿಪಂಜರ ಕ್ಷೇತ್ರದಲ್ಲಿ ದೈವಗಳ ಪ್ರತಿಷ್ಠಾ ಮಹೋತ್ಸವ ಹಾಗೂ ದೈವಗಳ ನೇಮೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧಕ್ಕೆ ದ.ಕ.ಜಿಲ್ಲಾಧಿಕಾರಿ ಮುಲೈ ಮುಹಿಲನ್ ಧಿಡೀರ್ ಭೇಟಿ

Suddi Udaya
error: Content is protected !!