29.5 C
ಪುತ್ತೂರು, ಬೆಳ್ತಂಗಡಿ
June 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಪಘಾತದಲ್ಲಿ ಗಂಭೀರ ಗಾಯಗೊಂಡ ಮೇಲಂತಬೆಟ್ಟು ಸಂಪತ್ ಆಚಾರ್ಯ ರವರ ಚಿಕಿತ್ಸೆಗೆ ನೆರವಾಗಿ

ಬೆಳ್ತಂಗಡಿ: ಮೇಲಂತಬೆಟ್ಟು ಗ್ರಾಮದ ಸಂಪತ್ ಆಚಾರ್ಯ ಅವರು ಕಾರ್ಕಳದಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಂಪತ್ ಅವರ ಎಡ ಕೈ ಗಂಭೀರ ಗಾಯಗೊಂಡ ಕಾರಣ ಸಂಪೂರ್ಣ ತೆಗೆಯಲಾಗಿದೆ. ತಲೆಗೆ ಬಲವಾದ ಗಾಯಗಳು ಆಗಿರುವ ಕಾರಣ ದೊಡ್ಡ ಮಟ್ಟದ ಶಸ್ತ್ರ ಚಿಕಿತ್ಸೆ ಮಾಡುವ ಅವಶ್ಯಕತೆ ಇದೆ ಎಂದು ವೈದ್ಯರು ತಿಳಿಸಿರುತ್ತಾರೆ.

ತೀರ ಬಡಕುಟುಂಬದ ಸಂಪತ್ ಅವರ ಮನೆಗೆ ಈಗ ಆಧಾರ ಸ್ತಂಭವಾಗಿ ಇರುವವರು ಸಹೋದರ ಸೂರ್ಯ ಆಚಾರ್ಯ ಅವರು. ಮನೆಯ ಪೂರ್ಣ ಜವಾಬ್ದಾರಿ ಹೊತ್ತು ಗಾರೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ ಅವರಿಗೆ ಸಹೋದರ ಸಂಪತ್ ಅವರ ಚಿಕಿತ್ಸೆಯ ವೆಚ್ಚಕ್ಕೆ ಅವರಿಂದ ಆಗುವ ವೆಚ್ಚವನ್ನು ಬರಿಸುತ್ತಿದ್ದಾರೆ. ಆದರೆ ಮುಂದಿನ ಒಟ್ಟು ಆಸ್ಪತ್ರೆಯ ವೆಚ್ಚ ಸುಮಾರು ಹತ್ತು ಲಕ್ಷಕ್ಕೂ ಹೆಚ್ಚು ಬೇಕಾಗಿರುವ ಕಾರಣ ಸಜ್ಜನರಾದ ತಾವೆಲ್ಲರೂ ತಮ್ಮ ಕೈಯಲ್ಲಿ ಆಗುವ ಸಹಾಯ ಮಾಡಬೇಕಾಗಿ ವಿನಂತಿಸಲಾಗಿದೆ. ಸಹಾಯ ಮಾಡುವವರು phone pay/ Gpay no: 9731020346

Related posts

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಗಾಯನ ತರಬೇತಿ

Suddi Udaya

ಬೆಳ್ತಂಗಡಿ ‘ಶಾಂತಿಶ್ರೀ’ ಜೈನ ಮಹಿಳಾ ಸಮಾಜದಿಂದ ಮಹಿಳಾ ದಿನಾಚರಣೆ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಮಂಗಳೂರು ಸಂಸದ ಬ್ರಿಜೇಶ್ ಚೌಟ ಹಾಗೂ ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಕ್ಷೇತ್ರ ಅಧ್ಯಕ್ಷ ಚಿತ್ತರಂಜನ್

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ 2 ದಿನದ ತರಬೇತಿ ಕಾರ್ಯಾಗಾರ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಖ್ಯಾತ ಜ್ಯೋತಿಷಿ ರಾಜಗುರು ದ್ವಾರಕನಾಥ್ ದಂಪತಿ ಭೇಟಿ

Suddi Udaya

ವೇಣೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಥಮ ದರ್ಜೆ ಸಹಾಯಕ ಸುರೇಶ್ ಪೂಜಾರಿ ಸೇವೆಯಿಂದ ನಿವೃತ್ತಿ

Suddi Udaya
error: Content is protected !!