29.8 C
ಪುತ್ತೂರು, ಬೆಳ್ತಂಗಡಿ
June 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಟೌನ್‌ ಹಯಾತುಲ್ ಇಸ್ಲಾಂ ಸೆಕೆಂಡರಿ ಮದ್ರಸಾದಲ್ಲಿ ಹಮ್ರಾ ವರ್’ದ ಬಾಲ ಮಾಸಿಕ ಚಂದಾ ಅಭಿಯಾನಕ್ಕೆ ಚಾಲನೆ

ಉಜಿರೆ : ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ (SJM) ಕೇಂದ್ರ ಸಮಿತಿ ಪ್ರಕಟಿಸುವ ಹಮ್ರಾ ವರ್’ದ ಬಾಲ ಮಾಸಿಕದ ಚಂದಾ ಅಭಿಯಾನಕ್ಕೆ ಹಯಾತುಲ್ ಇಸ್ಲಾಂ ಸೆಕೆಂಡರಿ ಮದ್ರಸಾ, ಉಜಿರೆ ಟೌನ್‌ನಲ್ಲಿ ಅಧಿಕೃತ ಚಾಲನೆ ನೀಡಲಾಯಿತು.

ಜಮಾಅತ್ ಸಮಿತಿಯ ಅಧ್ಯಕ್ಷ ಅಬ್ದುಲ್ ರಹಿಮಾನ್ ART ಅವರು ಚಂದಾ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮದ್ರಸ ಸದರ್ ಉಸ್ತಾದ್ ಇಸ್ಮಾಯಿಲ್ ಹನೀಫಿ ಅವರು ವಿದ್ಯಾರ್ಥಿಗಳಲ್ಲಿ ಓದುವ ಅಭ್ಯಾಸ ಬೆಳೆಸುವ ಅಗತ್ಯತೆ ಹಾಗೂ ಪುಸ್ತಕಗಳು ಮತ್ತು ಮಾಸಿಕಗಳ ಮಹತ್ವದ ಕುರಿತು ಮಾತನಾಡಿದರು. ಹಮ್ರಾ ವರ್’ದ ಬಾಲ ಮಾಸಿಕವು ಮಕ್ಕಳಲ್ಲಿ ಓದುವ ಹವ್ಯಾಸ, ಸಾಹಿತ್ಯಾಸಕ್ತಿ ಹಾಗೂ ಇಸ್ಲಾಮಿಕ್ ಮೌಲ್ಯಗಳನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಆಡಳಿತ ಸಮಿತಿಯ ಕೋಶಾಧಿಕಾರಿ ಖಾಲಿದ್, ಮದ್ರಸ ಮುಅಲ್ಲಿಂ ಮನ್ಸೂರ್ ಝುಹುರಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಅಭಿಯಾನದ ಉದ್ಘಾಟನಾ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಚಂದಾ ಕೂಪನ್‌ಗಳು ಹಾಗೂ ಪ್ರಚಾರ ಸಾಮಗ್ರಿಗಳನ್ನು ವಿತರಿಸಲಾಯಿತು. ವಿದ್ಯಾರ್ಥಿಗಳು ಉತ್ಸಾಹದಿಂದ ಅಭಿಯಾನದಲ್ಲಿ ಭಾಗವಹಿಸಿ ಹೆಚ್ಚಿನ ಸಂಖ್ಯೆಯಲ್ಲಿ ಚಂದಾದಾರರನ್ನು ಸೇರಿಸುವ ಸಂಕಲ್ಪ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಮದ್ರಸ ಮುಅಲ್ಲಿಂ ಮನ್ಸೂರ್ ಝುಹುರಿ ಧನ್ಯವಾದ ಅರ್ಪಿಸಿದರು.

Related posts

ಫೆ15-28: ಮುಳಿಯ ಜುವೆಲ್ಸ್‌ನ ಪುತ್ತೂರು ಹಾಗೂ ಬೆಳ್ತಂಗಡಿ ಮಳಿಗೆಯಲ್ಲಿ ನವರತ್ನ ಆಭರಣಗಳ ಅಮೋಘ ಸಂಗ್ರಹ,

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ, ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ರಾಜೀನಾಮೆ ಒತ್ತಾಯಿಸಿ ಬೆಳ್ತಂಗಡಿ ಬಿಜೆಪಿ ವತಿಯಿಂದ ಪ್ರತಿಭಟನೆ

Suddi Udaya

ಉಜಿರೆ ಬೆನಕ ಸೆಂಟರ್ ನಲ್ಲಿ ದಾದಿಯರ ದಿನಾಚರಣೆ

Suddi Udaya

ಮಿತ್ತಬಾಗಿಲು ಮೋಹನಿಯವರ ಮನೆಗೆ ಕಲ್ಲು, ಮರಳು ಸಾಗಿಸಲು ನೆರವಾದ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ಉಜಿರೆ ಸಂಧ್ಯಾ ಪ್ರೆಶ್ ಉತ್ಪಾದನಾ ಮತ್ತು ಪ್ಯಾಕೇಜಿಂಗ್ ಘಟಕಕ್ಕೆ ಅತ್ಯುತ್ತಮ ‘ಟೈಮ್ಸ್ ಬ್ಯುಸಿನೆಸ್ ಅವಾರ್ಡ್ಸ್-2024’ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಅರ್ಚನಾ ರಾಜೇಶ್ ಪೈಯವರಿಗೆ ಪ್ರಶಸ್ತಿ ಹಸ್ತಾಂತರ

Suddi Udaya

ಕಳಿಯ ಗ್ರಾಮ ಪಂಚಾಯತ್ ಅರಿವು ಕೇಂದ್ರದ ಸಭೆ

Suddi Udaya
error: Content is protected !!