ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಯೋಗ ತರಬೇತಿ ಉದ್ಘಾಟನೆ ಜೂ.16ರಂದು ನಡೆಯಿತು.
ಮುಖ್ಯ ಅತಿಥಿಯಾಗಿ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ಉಪ ಪ್ರಾಂಶುಪಾಲೆ ಸುಜಾತ ಭಟ್ ಉದ್ಘಾಟಿಸಿ ಮಾತನಾಡಿದರು.

ಯೋಗವೆನ್ನುವುದು ಇಂದು ನಿನ್ನೆಯದಲ್ಲ. ಇದು ಋಗ್ವೇದ ಕಾಲದಲ್ಲಿಯೂ ಇತ್ತು. ಋಷಿಮುನಿಗಳು ಇದಕ್ಕೆ ಮಹತ್ವ ಕೊಡುತ್ತಿದ್ದರು. ಯಾವುದೇ ರೋಗರುಜಿನ ಯೋಗದಿಂದ ಗುಣವಾದ ಉದಾಹರಣೆಗಳು ಇದೆ. ಯೋಗವು ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕಾಗಿ ಬಹಳ ಉತ್ತಮ ಮಾರ್ಗ ಎಂದರು.
ಹಿರಿಯ ಶಿಕ್ಷಕ ಚಂದ್ರಶೇಖರ್ ಭಟ್ ಮಾತನಾಡಿ, ಯೋಗಾಭ್ಯಾಸದಿಂದ ನೆನಪಿನ ಶಕ್ತಿ ಹೆಚ್ಚುತ್ತದೆ. ಓದಿನ ಕಡೆಗೆ ಆಸಕ್ತಿ ಹೆಚ್ಚುತ್ತದೆ. ಆತ್ಮವಿಶ್ವಾಸ ಬೆಳೆಯುತ್ತದೆ ಎಂದರು. ಮುಖ್ಯೋಪಾಧ್ಯಾಯಿನಿ ವಿದ್ಯಾ ಟಿ. ಅಧ್ಯಕ್ಷತೆ ವಹಿಸಿದ್ದರು.
ಯೋಗ ತರಬೇತುದಾರರು, ಎಸ್ ಡಿ ಎಂ ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಗಳಾದ ಪ್ರಾಂಜಲಿ ಪುನೀತ್ ಮತ್ತು ವ್ಯಟ್ರಿ ವೆಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರಾದ ಕನಕಶ್ರೀ ಸ್ವಾಗತಿಸಿ, ಶ್ವೇತಾ ವಂದಿಸಿ, ಅನನ್ಯ ಕಾರ್ಯಕ್ರಮ ನಿರೂಪಿಸಿದರು.













