31.1 C
ಪುತ್ತೂರು, ಬೆಳ್ತಂಗಡಿ
June 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್‌ಡಿಎಂ ಸಿಬಿಎಸ್‌ಇ ಶಾಲೆಯಲ್ಲಿ ಯೋಗ ಸಪ್ತಾಹಕ್ಕೆ ಚಾಲನೆ

ಉಜಿರೆ: 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಎಸ್‌ಡಿಎಂ ಸಿಬಿಎಸ್‌ಇ ಶಾಲೆಯಲ್ಲಿ ಯೋಗ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಮುಖ್ಯ ಅತಿಥಿಗಳಾಗಿ ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯದ ಡೀನ್ ಹಾಗೂ ಶಾಂತಿವನದ ಮುಖ್ಯ ವೈದ್ಯಾಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಭಾಗವಹಿಸಿ ಯೋಗದ ಮಹತ್ವದ ಕುರಿತು ಉಪನ್ಯಾಸ ನೀಡಿದರು. ಯೋಗವು ದೈಹಿಕ, ಮಾನಸಿಕ ಹಾಗೂ ಭಾವನಾತ್ಮಕ ಆರೋಗ್ಯವನ್ನು ಕಾಪಾಡುವ ಸಮಗ್ರ ಜೀವನ ಪದ್ಧತಿಯಾಗಿದ್ದು, ವಿದ್ಯಾರ್ಥಿಗಳು ದಿನನಿತ್ಯದ ಜೀವನದಲ್ಲಿ ಯೋಗಾಭ್ಯಾಸವನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಎಸ್‌ಡಿಎಂ ಸಿಬಿಎಸ್‌ಇ ಶಾಲೆಯ ಪ್ರಾಂಶುಪಾಲರಾದ ಮನಮೋಹನ್ ನಾಯಕ್ ಉಪಸ್ಥಿತರಿದ್ದು, ವಿದ್ಯಾರ್ಥಿಗಳಲ್ಲಿ ಆರೋಗ್ಯಕರ ಜೀವನಶೈಲಿ ಬೆಳೆಸುವಲ್ಲಿ ಯೋಗದ ಪಾತ್ರ ಮಹತ್ತರವಾಗಿದೆ ಎಂದು ಅಭಿಪ್ರಾಯಪಟ್ಟರು.

ಯೋಗ ಸಪ್ತಾಹದ ಅಂಗವಾಗಿ ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಯೋಗಾಸನಗಳು, ಪ್ರಾಣಾಯಾಮ ಹಾಗೂ ಧ್ಯಾನದ ತರಬೇತಿಯನ್ನು ನೀಡಿದರು. ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ಯೋಗಾಭ್ಯಾಸದಲ್ಲಿ ತೊಡಗಿಸಿಕೊಂಡರು.

ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ವೃಂದ, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಅಸಂಘಟಿತ ಕಾರ್ಮಿಕ ನಗರ ಸಮಿತಿ & ಗ್ರಾಮೀಣ ಸಮಿತಿಯ ವತಿಯಿಂದ ಪದಾಧಿಕಾರಿಗಳ & ಕಾರ್ಯಕರ್ತರ ಸಮಲೋಚನೆ ಸಭೆ

Suddi Udaya

ಮಚ್ಚಿನ: ಸಂವಿಧಾನ ಜಾಗೃತಿ ಜಾಥ

Suddi Udaya

ಇಂದು ಸಂಜೆ ಬಹುನಿರೀಕ್ಷಿತ ದಸ್ಕತ್ ತುಳು ಚಲನಚಿತ್ರದ ಟೀಸರ್ ಬಿಡುಗಡೆ

Suddi Udaya

ವೈದ್ಯರ ನಿರ್ಲಕ್ಷ್ಯಕ್ಕೆ ವೇಣೂರಿನ ಗರ್ಭಿಣಿ ಮಹಿಳೆ ಕೋಮಸ್ಥಿತಿಯಲ್ಲಿ

Suddi Udaya

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ವಾರ್ಷಿಕ ವಿಶೇಷ ಶಿಬಿರ

Suddi Udaya

ಕಳಿಯ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya
error: Content is protected !!