September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂಥ: ಉಚಿತ ಆರಿ ಕೌಶಲ್ಯ ತರಬೇತಿ ಸಮಾರೋಪ ಸಮಾರಂಭ

ತಣ್ಣೀರುಪಂಥ : ಬ್ಯಾಂಕ್ ಆಫ್ ಬರೋಡ ಪ್ರವರ್ತಿತ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಹಾಗೂ ಭಾರತೀಯ ವಿಕಾಸ ಟ್ರಸ್ಟ್, ಮಣಿಪಾಲ ಇವರ ಜಂಟಿ ಆಶ್ರಯದಲ್ಲಿ ನಡೆದ 15 ದಿನಗಳ ಆರಿ ಕೌಶಲ್ಯ ತರಬೇತಿಯ ಸಮಾರೋಪ ಸಮಾರಂಭ ತಣ್ಣೀರುಪಂಥ ಹಾಲು ಉತ್ಪಾದಕರ ಸಂಘದ ಸಭಾಂಗಣ ಕಲ್ಲೇರಿಯಲ್ಲಿ ನಡೆಯಿತು.

ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇದರ ಕಾರ್ಯಕ್ರಮ ವ್ಯವಸ್ಥಾಪಕ ಜೀವನ್ ಕೊಲ್ಯ ಮಾತಾಡುತ್ತ ಮಹಿಳೆಯರು ಕಾಲಕ್ಕೆ ತಕ್ಕಂತ ಬೇಡಿಕೆಗೆ ಅನುಗುಣವಾಗಿ ಕೌಶಲ್ಯ ತರಬೇತಿ ಕಲಿತು ಸ್ವ ಉದ್ಯೋಗ ಮಾಡಬೇಕು.ಬೇಡಿಕೆ ಇರುವಾಗ ಮನೆಯಲ್ಲಿ ಉದ್ಯೋಗ ಮಾಡಿ ಉತ್ತಮ ಆದಾಯ ಗಳಿಸಲು ಸಾಧ್ಯವಿದೆ” ಎಂದರು. ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಇದರ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜ್ಯೋತಿ ರಾಜ್ ತರಬೇತಿಯಲ್ಲಿ ಭಾಗವಹಿಸಿದ ಮಹಿಳೆಯರ ಕೌಶಲ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಮಹಿಳೆಯರ ಸ್ವ ಉದ್ಯೋಗ ಮಾಡಲು ನಮ್ಮ ಸಂಸ್ಥೆ ಸದಾ ನೆರವು ನೀಡಲಿದೆ ಎಂದರು.

ಬೆಳ್ತಂಗಡಿ ತಾಲೂಕು ಅಮೂಲ್ಯ ಸಾಕ್ಷರತಾ ಸಮಾಲೋಚಕಿ ಉಷಾ ಕಾಮತ್ ತರಬೇತಿಯ ನಂತರದ ಅವಕಾಶಗಳ ಬಗ್ಗೆ , ಬ್ಯಾಂಕ್ ನಿಂದ ಸಿಗುವ ಬ್ಯಾಂಕ್ ಸಾಲ ಸೌಲಭ್ಯ ಬಗ್ಗೆ ವಿವರಿಸಿದರು. ತರಬೇತಿಯ ಸಂಪನ್ಮೂಲ ವ್ಯಕ್ತಿಗಳಾದ ದೀಕ್ಷಾ ಇವರು ತರಬೇತಿ ನೀಡಿದ ಅನುಭವ ಹಂಚಿಕೊಂಡರು. ಹೊಲಿಗೆ ತರಬೇತಿ ಕೇಂದ್ರದ ಶಿಕ್ಷಕಿ ಮೀನಾಕ್ಷಿ, ತರಬೇತುದಾರರಾದ ಅಕ್ಷಿತಾ, ತಣ್ಣೀರುಪಂಥ ಹಾಲು ಸೊಸೈಟಿ ಕಾರ್ಯದರ್ಶಿ ಜಯರಾಜ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ತರಬೇತಿಯಲ್ಲಿ ಭಾಗವಹಿಸಿದ ಮಹಿಳೆಯರು ತರಬೇತಿ ಬಗ್ಗೆ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಯಶಸ್ವಿಯಾಗಿ ತರಬೇತಿ ಪೂರೈಸಿದ ಮಹಿಳೆಯರಿಗೆ ಪ್ರಮಾಣಪತ್ರ ವಿತರಿಸಲಾಯಿತು .ಗುಣವತಿ ಕಾರ್ಯಕ್ರಮ ನಿರೂಪಿಸಿ, ಮಲ್ಲಿಕಾ ಸ್ವಾಗತಿಸಿ, ವಿನೋದಾ ವಂದಿಸಿದರು.

Related posts

ಗೇರುಕಟ್ಟೆ: ಪುಂಜಾಲಕಟ್ಟೆ ವಲಯ ಅಥ್ಲೆಟಿಕ್ ಕ್ರೀಡಾಕೂಟ

Suddi Udaya

ನಿಡಿಗಲ್ ಬದ್ರಿಯಾ ಜುಮ್ಮಾ ಮಸ್ಜಿದ್ ವತಿಯಿಂದ ಮೀಲಾದ್ ಕಾರ್ಯಕ್ರಮ

Suddi Udaya

ಕರಿಮಣೇಲು : ಮರೋಡಿ ಬೆಳ್ಳಿಬೀಡು ಬಸದಿಯ ಅನುವಂಶಿಕ ಆಡಳಿತ ಮೊಕೇಸ್ತರ ಕೆ. ಹೇಮರಾಜ್ ರವರಿಂದ ತಿಮ್ಮಣಬೆಟ್ಟು ಸ.ಉ.ಹಿ.ಪ್ರಾ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನ ಪ್ರತಿಷ್ಠಾ ಮಹೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವಕ್ಕೆ ನವಶಕ್ತಿ ಶಶಿಧರ ಶೆಟ್ಟಿ ಬರೋಡ ಭೇಟಿ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಮಟ್ಟದ ಸಾಫ್ಟ್‌ಸ್ಕಿಲ್ ಟ್ರೈನರ್ ಡಾ. ಟಿ. ಕೃಷ್ಣಮೂರ್ತಿ ಅವರ ಮಾರ್ಗದರ್ಶನದಲ್ಲಿ ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ಟಿಒಟಿ ತರಬೇತಿ

Suddi Udaya

ಅಳದಂಗಡಿ ಪ್ರಾ.ಕೃ.ಪ.ಸ. ಸಂಘದ ಸಿಬ್ಬಂದಿ ಪ್ರಿಯಾ ಡಿಸೋಜಾರಿಗೆ ಬಿಳ್ಕೋಡುಗೆ ಸಮಾರಂಭ

Suddi Udaya
error: Content is protected !!